ಚಿಂಚೋಳಿ: ಪ್ರತಿವರ್ಷದಂತೆ ಈ ವರ್ಷವು ಸ್ವತಂತ್ರ ಹೋರಾಟಗಾರರು, ಸಮಾಜಸೇವಕರಾದ ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ಅವರ ತಂದೆ ಗೋಪಾಲದೇವ ಜಾಧವ ರವರ 39ನೇ ಪುಣ್ಯಸ್ಮರಣೆ ನಿಮಿತ್ತ ಚಿಂಚೋಳಿ ಕ್ಷೇತ್ರದ ಕಾಳಗಿ ತಾಲೂಕಿನ ಬೆಡೆಸೂರ್ ಎಮ್ ತಾಂಡಾದಲ್ಲಿ ವಿವಿಧ ಮಠಾಧೀಶರ ದಿವ್ಯ ನೇತೃತ್ವದಲ್ಲಿ ಸಂಸ್ಕೃತಿಕ ಹಾಗೂ ಜಾನಪದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಉಮೇಶ್ ಜಾಧವ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಹಲವು ಸಾಧನೆಗಳನ್ನು ಮಾಡಿದ ಸಾಧಕರಿಗೆ ಗೌರವ ಸನ್ಮಾನ, ಕಳೆದ 15ದಿವಸಗಳಿಂದ 222ತಂಡಗಳ ನಡುವೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಟವಾಡಿ ಪ್ರಥಮ ಹಾಗೂ ದ್ವಿತೀಯ ಸ್ಥಾನಪಡೆದವರಿಗೆ ಬಹುಮಾನ ವಿತರಣೆ ಹೀಗೆ ಹತ್ತು ಹಲವಾರು ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕೆಂದು ವಿನಂತಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.