ಬಡತನ ಎಂಬ ಪೀಡೆ ತೊಲಗಲು ಶಿಕ್ಷಣ ಒಂದೇ ಅಸ್ತ್ರ: ಸಾಬಣ್ಣ ತಳವಾರ

ಶಹಾಬಾದ:ಜಗತ್ತಿನಲ್ಲಿ ಬಡತನ ಎಂಬ ಪೀಡೆ ತೊಲಗಬೇಕಾದರೆ ಶಿಕ್ಷಣ ಒಂದೇ ಅಸ್ತ್ರ ಎಂದು ವಿಧಾನ ಪರಿಷತ್ ಸದಸ್ಯ ಸಾಬಣ್ಣ ತಳವಾರ ಹೇಳಿದರು.

ಅವರು ಸೋಮವಾರ ಭಂಕೂರ ಗ್ರಾಮದ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

ಬಡತನ ಮತ್ತು ಬಡ ಕುಟುಂಬ, ಬಡತನದಿಂದ ಹೊರಬರಬೇಕಾದರೆ ಶಿಕ್ಷಣ ಪಡೆದರೇ ಮಾತ್ರ ಹೊರಬರಬಹುದು. ಇನ್ಯಾವುದೇ ಮೂಲವಿಲ್ಲ. ಶಿಕ್ಷಣ ಎಂಬುದೇ ಮುಖ್ಯವಾಗಿದ್ದು, ಅದರಿಂದ ಬಡತನವನ್ನು ಮುಕ್ತ ಮಾಡಬಹುದು.ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರು ಶಿಕ್ಷಣ ಪಡೆಯಬೇಕಾದರೆ ಎಲ್ಲಿಲ್ಲದ ಸಂಕಷ್ಟ ಪಡೆದರು.ಪಡಬಾರದ ಅವಮಾನ ಪಡೆದು ಈ ಜಗತ್ತಿನಲ್ಲಿ ದೊಡ್ಡ ಶಕ್ತಿಯಾಗಿ ನಿಂತರು.ಇಂದು ಅವರನ್ನು ಸ್ಮರಿಸಬೇಕು. ಇಲ್ಲಿ ಓದುತ್ತಿರುವ ಮಕ್ಕಳು ಬಡವರು. ಈ ಮಕ್ಕಳಿಂದ ಸಂಬಳ ಪಡೆಯುವವರ ಶಿಕ್ಷಕರು ಹಾಗೂ ಅಧಿಕಾರಿಗಳು ತಮ್ಮ ಮಕ್ಕಳು ಡಾಕ್ಟರ್, ಇಂಜಿನಿಯರ ಆಗಬೇಕೆಂಬುದು ಆಸೆಯಿದೆ.ಆದರೆ ಈ ಬಡ ಮಕ್ಕಳು ಸಹ ಡಾಕ್ಟರ್ ,ಇಂಜಿನಿಯರ್ ಆಗಬೇಕಲ್ಲ ಎಂಬ ಮನೋಭಾವನೆ ತಮ್ಮಲ್ಲಿ ಬರಬೇಕು.ಆಗ ಉತ್ತಮ ವಾತಾವರಣ ಮೂಡುತ್ತದೆ .ಅಲ್ಲದೇ ಶಾಲೆಯಲ್ಲಿ ಮೂಲಸೌಲಭ್ಯವಿಲ್ಲದ ಕಾರಣ ನನ್ನ ಅನುದಾನದಲ್ಲಿ ಈ ಶಾಲೆಗೆ ಸುಮಾರು 42 ಲಕ್ಷ ರೂ.ಅನುದಾನ ನೀಡಿದ್ದೆನೆ.ಕಾರಣ ಈ ಶಾಲೆ ಮಾದರಿ ಶಾಲೆ ಆಗಬೇಕೆಂಬುದು ನಮ್ಮ ಬಯಕೆಯಿದೆ.ಆದರೆ ಇಂದು ಈ ಶಾಲೆಯ ಸ್ಥಿತಿ ನೋಡಿದರೆ ದು:ಖವಾಗುತ್ತದೆ.ಈ ಹಿಂದೆ ಸುತ್ತಮುತ್ತಲಿನ ಗ್ರಾಮದ ಮಕ್ಕಳು ಇಲ್ಲಿ ಓದುತ್ತಿದ್ದರು.ಆದರೆ ಇಂದು ಇದೇ ಗ್ರಾಮದ ಮಕ್ಕಳು ಓದಲು ಮುಂದೆ ಬರುತ್ತಿಲ್ಲ.ಇಲ್ಲಿನ ಬಡ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಬೇಕಿದೆ.ಆ ನಿಟ್ಟಿನಲ್ಲಿ ಗ್ರಾಮದ ಜನರು, ಶಿಕ್ಷಕರು ಹಾಗೂ ಅಧಿಕಾರಿಗಳು ಮುತುವರ್ಜಿಸಬೇಕೆಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧವೀರಯ್ಯ ರುದ್ನೂರ್, ಖಾಸಗಿ ಶಾಲೆಗಿರುವ ಒಲವು ಸರಕಾರಿ ಶಾಲೆಯ ಮೇಲೆ ಪಾಲಕರು ತೋರಬೇಕಿದೆ. ವಿಧಾನ ಪರಿಷತ್ ಸದಸ್ಯ ಸಾಬಣ್ಣ ತಳವಾರ ಅವರು ಇದೇ ಶಾಲೆಯಲ್ಲಿ ಕಲಿತು ಉನ್ನತ ಸ್ಥಾನವನ್ನು ಪಡೆದಿದ್ದಾರೆ.ಅಲ್ಲದೇ ಕಲಿತ ಶಾಲೆಯನ್ನು ದತ್ತು ಪಡೆದುಕೊಂಡು ಮೂಲಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಮುಂದಾಗಿರುವುದು ಸಂತೋಷ ತಂದಿದೆ ಎಂದರು.
ಅಕ್ಷರ ದಾಸೋಹದ ಸಹಾಯಕ ನಿದೇರ್ಶಕ ಪ್ರಕಾಶ ನಾಯಿಕೊಡಿ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಭೀಮಬಾಯಿ ಭಜಂತ್ರಿ, ಶಿಕ್ಷಣ ಸಂಯೋಜಕ ಶ್ರೀಧರ ರಾಠೋಡ, ಸಿಆರ್‍ಸಿ ಮರೆಪ್ಪ ಭಜಂತ್ರಿ, ಮುಖ್ಯಗುರುಮಾತೆ ಮಾರ್ತಾ.ಸಿ, ಗ್ರಾಪಂ ಸದಸ್ಯರು,ಪಿಡಿಓ ಹಾಗೂ ಗ್ರಾಮಸ್ಥರು ಇದ್ದರು.

ಶಿಕ್ಷಕಿ ಕಲಾವತಿ ನಿರೂಪಿಸಿದರು, ಶಿಕ್ಷಕ ಮಹಾಂತೇಶ ಸ್ವಾಗತಿಸಿ, ವಂದಿಸಿದರು.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

11 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

11 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

11 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

11 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

11 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420