ಸುರಕ್ಷತೆಗಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳುವುದು ಸೂಕ್ತ

ಕಲಬುರಗಿ: ಸಾರ್ವಜನಿಕರು ತಮ್ಮ ಮನೆಯ ಸುರಕ್ಷತೆಗಾಗಿ ಸುತ್ತಲೂ ಸಿಸಿಟಿವಿ ಕ್ಯಾಮೆರಾಗಳನ್ನು ಕೂಡಲೇ ಅಳವಡಿಸಿಕೊಳ್ಳಬೇಕು. ಇದರಿಂದ ಅಪರಾಧಗಳನ್ನು ತಡೆಗಟ್ಟಲು ಸಹಾಯವಾಗುತ್ತದೆ ಎಂದು ಎಚ್ಕೆಇ ಸಂಸ್ಥೆಯ ಅಧ್ಯಕ್ಷ ಹಾಗೂ ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ಗೌರವಾಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ ಹೇಳಿದರು.

ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಸೋಮವಾರ ಶಿವಮಂದಿರದಲ್ಲಿ ನೂತನವಾಗಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳಿಗೆ ಚಾಲನೆ ನೀಡಿ ನಂತರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಇಂದಿನ ಮಕ್ಕಳಿಗೆ ಸಂಸ್ಕಾರ ಕಲಿಸುವುದು ಬಹಳ ಮುಖ್ಯ.ಶಿಸ್ತು ಮತ್ತು ಭಯ ಕೆಟ್ಟ ದಾರಿಯಲ್ಲಿ ಸಾಗುವುದನ್ನು ತಡೆಯುತ್ತದೆ.ಶಿಕ್ಷಣದ ಜೊತೆಗೆ ಪಾಲಕರು ತಮ್ಮ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ನೀಡುವುದು ಅಗತ್ಯ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಂ.ಬಿ.ನಗರ ಪೊಲೀಸ್ ಠಾಣೆಯ ಸಿಪಿಐ ಚಂದ್ರಶೇಖರ ತೀಗಡಿ ಮಾತನಾಡಿ ಇಂದು ಯುವಕರು ಪಾಶ್ಚಿಮಾತ್ಯ ಸಂಸ್ಕೃತಿಯ ಮೊರೆ ಹೋಗಿದ್ದಾರೆ.ಅವರಿಗೆ ತಿಳುವಳಿಕೆಯ ಕೊರತೆ ಇದೆ.ಬಾಲ್ಯದಲ್ಲಿ ಮಾಡುವ ತಪ್ಪುಗಳನ್ನು ತಿದ್ದಿ ತೀಡದಿದ್ದರೆ ಮುಂದೊಂದು ದಿನ ಅಪರಾಧದ ಹಾದಿ ಹಿಡಿಯುತ್ತಾರೆ.ಪಾಲಕರು ಎಚ್ಚರ ವಹಿಸಬೇಕು.ಅಪರಾಧಗಳನ್ನು ತಡೆಗಟ್ಟಲು ಸಾರ್ವಜನಿಕರು ಪೊಲೀಸ್ ಇಲಾಖೆಯೋಂದಿಗೆ ಕೈಜೊಡಿಸಬೇಕು ಎಂದರು.

ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಹಿರಿಯ ಮುಖಂಡ ಬಂಡೆಪ್ಪ ಕೇಸೂರ, ಸತೀಶ ವೇದಿಕೆ ಮೇಲೆ ಉಪಸ್ಥಿತರಿದ್ದರು.ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಕೆ.ಬಿ ಸ್ವಾಗತಿಸಿದರು. ಕೋಶಾಧ್ಯಕ್ಷ ಬಸವರಾಜ ಮಾಗಿ,ಹಿರಿಯ ಸದಸ್ಯರಾದ ಬಸವರಾಜ ಅನ್ವರಕರ, ವಾಸುದೇವ ಮಾಲಿ ಬೀರಾದರ, ಮಲ್ಲಿಕಾರ್ಜುನ ಕಲ್ಲಾ, ಭೀಮಾಶಂಕರ ಶೆಟ್ಟಿ, ಎಸ್.ಡಿ.ಸೇಡಂಕರ, ಶಿವಕುಮಾರ ಪಾಟೀಲ್, ಬಡಶೇಷಿ, ಬಸವರಾಜ ಪುರ್ಮ, ಮಲ್ಲಯ್ಯ ಸ್ವಾಮಿ ಬಿದಿಮನಿ, ಪ್ರಶಾಂತ ತಂಬೂರಿ, ಮಹಿಳಾ ಸದಸ್ಯೆಯರಾದ ಅನುರಾಧ ಕುಮಾರಸ್ವಾಮಿ, ಸುರೇಖಾ ಬಾಲಕೊಂದೆ, ಅಂಬಕ್ಕಾ ಪಾಟೀಲ್, ಶ್ರೀಮತಿ ಸುಷ್ಮಾ ಬಸವರಾಜ ಮಾಗಿ, ಶೋಭಾ ಮಾಲಿ ಬೀರಾದರ ಸೇರಿದಂತೆ ಬಡಾವಣೆಯ ಮಹಿಳೆಯರು ಹಿರಿಯರು ಭಾಗವಹಿಸಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

12 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

15 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

19 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

20 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

22 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420