ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಪರಾಕ್ರಮ್ ದಿನ ಆಚರಣೆ

ಕಲಬುರಗಿ:“ಶುಭಾಸ್ ಚಂದ್ರ ಭೋಸ್ ಅವರ ದೇಶಭಕ್ತಿ ಸಾಟಿಯಿಲ್ಲ. ಅವರು ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿದರು”ಎಂದು ನಿವೃತ್ತ ಕರ್ನಲ್ ಶರಣಪ್ಪ ಸಿಕೆಂಪೆÇೀರ್ ಹೇಳಿದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ಶುಭಾಸ್ ಚಂದ್ರ ಭೋಸ್ ಅವರ ಜನ್ಮದಿನದ ಅಂಗವಾಗಿ ಪರಾಕ್ರಮ್ ದಿವಸ್ ಆಚರಣೆಯ ಸಂದರ್ಭದಲ್ಲಿ ಮಾತನಾಡಿದ ಅವರು “ಅವರು ಸ್ವಾತಂತ್ರ್ಯ ಹೋರಾಟವನ್ನು ಮುಂಚುಣಿಯಲ್ಲಿ ನಿಂತು ಮುನ್ನಡೆಸಿದ್ದಾರೆ ಮತ್ತು ಭಾರತೀಯ ರಾಷ್ಟ್ರೀಯ ಸೇನೆಯನ್ನು ಸ್ಥಾಪಿಸಿ ಜೈ ಹಿಂದ್ ಘೋಷಣೆ ನೀಡಿದರು. ಇಂದು ಭಾರತದ ಪ್ರತಿಯೊಂದು ಸೇನಾ ಶಾಲೆಯಲ್ಲಿಯೂ ಇದನ್ನು ಮಂತ್ರದಂತೆ ಪಠಿಸಲಾಗುತ್ತದೆ. ಅವರು ತಮ್ಮ ಕಾಲಕ್ಕಿಂತ ಮುಂದಿನದನ್ನು ಯೋಚಿಸುತ್ತಿದ್ದರು. ರಾಷ್ಟ್ರೀಯ ಭದ್ರತೆಯಲ್ಲಿ ಸೇನೆಯ ಆಧುನೀಕರಣದ ಪಾತ್ರದ ಕುರಿತು ಅವರು ಮಾತನಾಡಿದರು.

ನಾವು ಆಧುನೀಕರಣಕ್ಕೆ ಹೆಚ್ಚು ಗಮನ ಕೊಡದ ಕಾರಣ 1962 ರ ಚೀನಾದ ಆಕ್ರಮಣವನ್ನು ಯಶಸ್ವಿಯಾಗಿ ಎದುರಿಸಲಾಗಲಿಲ್ಲ. ನಾವು ಇತ್ತೀಚೆಗೆ ಮಹಿಳೆಯರಿಗೆ ಸೇನೆಯಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದೇವೆ. ಆದರೆ ಶುಭಾಸ್ ಚಂದ್ರ ಭೋಸ್ ಅವರು ಝಾನ್ಸಿ ರಾಣಿ ರೆಜಿಮೆಂಟ್ ಎಂಬ ಐಎನ್‍ಎ ಮಹಿಳಾ ವಿಭಾಗವನ್ನು ಸ್ಥಾಪಿಸಿದರು. ಅವರು ಮಹಾತ್ಮಾ ಗಾಂಧೀಜಿಯವರೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಹೊಂದಿದ್ದರೂ ಕೂಡ ಅವರನ್ನು ರಾಷ್ಟ್ರ ಪೀತ ಎಂದು ಕರೆದರು. ಅದು ಅವರ ವ್ಯಕ್ತಿತ್ವವಾಗಿತ್ತು. ಅವರು ಪ್ರತಿಯೊಬ್ಬ ಭಾರತೀಯರಿಗೆ ಮಾತ್ರವಲ್ಲ, ಪ್ರಪಂಚದಾದ್ಯಂತದ ಅನೇಕ ಜನರಿಗೆ ಮಾದರಿಯಾಗಿದ್ದಾರೆ.

ಭಾರತೀಯ ಸೇನೆಯಲ್ಲಿನ ವೃತ್ತಿ ಅವಕಾಶಗಳ ಕುರಿತು ಮಾತನಾಡಿದ ಅವರು “ಈ ಪ್ರದೇಶದ ಜನರಿಗೆ ಭಾರತೀಯ ಸೇನೆಯಲ್ಲಿನ ಉದ್ಯೋಗಾವಕಾಶಗಳ ಬಗ್ಗೆ ಸರಿಯಾದ ತಿಳುವಳಿಕೆಯಿಲ್ಲ. ಇತ್ತೀಚೆಗೆ ನಡೆದ ನೇಮಕಾತಿ ಸಂದ್ದಲ್ಲಿ 72,000 ಅರ್ಜಿದಾರರ ಪೈಕಿ 52,000 ಅಭ್ಯರ್ಥಿಗಳು ಬೆಳಗಾವಿಯವರೇ ಆಗಿದ್ದರೆ, ಕಲ್ಯಾಣ ಕರ್ನಾಟಕ ಪ್ರದೇಶದ ಎಲ್ಲಾ 7 ಜಿಲ್ಲೆಗಳಿಂದ ಕೇವಲ 21,000 ಅಭ್ಯರ್ಥಿಗಳು ಮಾತ್ರ ಅರ್ಜಿಸಲ್ಲಿದ್ದರು. ಸೇನೆಯಲ್ಲಿ ಉದ್ಯೋಗಾವಕಾಶಗಳ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸುವುದು ಬಹಳ ಮುಖ್ಯ. ಹೀಗಾಗಿ ಈ ಭಾಗದ ಯುವಕರಿಗೆ ತರಬೇತಿ ನೀಡಲು ಬೀದರ್ ಮತ್ತು ರಾಯಚೂರಿನಲ್ಲಿ ಸೈನಿಕ ತರಬೇತಿ ಶಾಲೆಗಳನ್ನು ಆರಂಭಿಸಿದ್ದೇವೆ” ಎಂದು ಹೇಳಿದರು

ಸಿಯುಕೆ ಕುಲಸಚಿವ ಪೆÇ್ರ. ಬಸವರಾಜ ಡೋಣೂರ ಅಧ್ಯಕ್ಷತೆ ವಹಿಸಿ ಅಧ್ಯಕ್ಷೀಯ ನುಡಿಗಳನ್ನಾಡಿ ಮಾತನಾಡಿ “ಪ್ರತಿಯೊಬ್ಬ ವಿದ್ಯಾರ್ಥಿಯೂ ನೇತಾಜಿಯವರಂತೆ ಆಗುವ ಸಾಮಥ್ರ್ಯ ಹೊಂದಿದ್ದಾರೆ. ಅವರು ಕೇವಲ ರಾಷ್ಟ್ರವನ್ನು ಪ್ರೀತಿಸಿದ್ದು ಬೇರೇನೂ ಅಲ್ಲ. ಅವರು ನಮ್ಮ ಪೀಳಿಗೆಗೆ ದೊಡ್ಡ ರೋಲ್ ಮಾಡೆಲ್ ಆಗಿದ್ದಾರೆ. ಅವರು ಭಾರತದ ಸ್ವಾತಂತ್ರ್ಯ ಚಳವಳಿಯ ಹೊಳೆಯುವ ನಕ್ಷತ್ರ.

ಇದಕ್ಕೂ ಮುನ್ನ ಎನ್‍ಎಸ್‍ಎಸ್‍ನ ಸಂಯೋಜಕ ಶಿವಂ ಮಿಶ್ರಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಡಾ.ಜಯದೇವಿ ಜಂಗಮಶೆಟ್ಟಿ ರಾಷ್ಟ್ರಗೀತೆ ಹಾಡಿದರು. ಈ ಸಂದರ್ಭದಲ್ಲಿ ಎಲ್ಲಾ ಡೀನ್‍ರು, ಮುಖ್ಯಸ್ಥರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

6 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

9 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

14 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

14 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

16 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420