ಅಪೌಷ್ಠಿಕತೆ ನಿವಾರಣೆಗೆ ಕಾಪೆರ್Çರೇಟ್ ಕಂಪೆನಿಗಳ ಜೊತೆಗೆ ಸರ್ಕಾರ ಹೆಜ್ಜೆ: ಶಾಲಿನಿ ರಜನೀಶ್

ಬೆಂಗಳೂರು: ಕರ್ನಾಟಕವನ್ನು ಅಪೌಷ್ಠಿಕ ಹಾಗೂ ಅನೀಮಿಯಾ ಮುಕ್ತ ರಾಜ್ಯವನ್ನಾಗಿಸಲು ಕಾಪೆರ್Çರೇಟ್ ಕಂಪನಿಗಳ ಜೊತೆಗೆ ಸರ್ಕಾರ ಕೈಜೋಡಿಸಲಿದೆ ಎಂದು ಯೋಜನೆ, ಸಾಂಖ್ಯಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ತಿಳಿಸಿದರು.

ಅವರು ಇಂದು ವಿಕಾಸ ಸೌಧದಲ್ಲಿ ಸರ್ಕಾರದ ಸಿಎಸ್‍ಆರ್(ಕಾಪೆರ್Çರೇಟ್ ಸಾಮಾಜಿಕ ಜವಾಬ್ದಾರಿ) ಪೋರ್ಟಲ್ ಆಕಾಂಕ್ಷ ಬಗೆಗೆ ಸತ್ವ ಹಾಗೂ ಇತರ ಕಂಪನಿಗಳ ಸಹಯೋಗದಿಂದಿಗೆ ಹಮ್ಮಿಕೊಳ್ಳಲಾದ ‘ರಾಜ್ಯದಲ್ಲಿ ಪೌಷ್ಟಿಕತೆ ಹಾಗೂ ಆರೋಗ್ಯ ನಿರ್ವಹಣೆ’ ಕುರಿತ ಕಾರ್ಯಕ್ರಮದಲ್ಲಿ  ಭಾಗವಹಿಸಿ ಮಾತನಾಡಿದರು.

ಸರ್ಕಾರದ ಯೋಜನೆ ಇಲಾಖೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಾಪೆರ್Çರೇಟ್ ವಲಯದ ಸಹಕಾರದೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸಿಎಸ್‍ಆರ್ ಅಡಿ ಕಂಪನಿಗಳು ಧನಸಹಾಯದಿಂದ ಸಹ  ಯೋಜನೆಗಳ ಯಶಸ್ಸಿಗೆ ಕಾರಣವಾಗಿದೆ. ಸರ್ಕಾರದ ಜೊತೆಗೆ ಖಾಸಗಿ ಕಂಪನಿಗಳು, ಆರೋಗ್ಯ ರಕ್ಷಣೆ, ಪೌಷ್ಟಿಕಾಂಶ ನಿರ್ವಹಣೆ, ಆಹಾರ ಹಾಗೂ ಇನ್ನಿತರ ಆದ್ಯತಾ ಕ್ಷೇತ್ರಗಳಲ್ಲಿ   ಕೈ ಜೋಡಿಸುತ್ತದೆ. ಇದರಿಂದ ಈಗಿರುವ ಕಾರ್ಯಕ್ರಮಗಳ ಮುನ್ನಡೆಯುವುದರ ಜೊತೆಗೆ ಹೊಸ ತಂತ್ರಜ್ಞಾನ ಅನ್ವೇಷಣೆ, ಆವಿμÁ್ಕರಕ್ಕೂ ಸಹ ನಾಂದಿ ಹಾಕಲಿದೆ. ಇಂದು ಭಾಗವಹಿಸಿದ 30 ಕಾಪೆರ್Çರೇಟ್ ಕಂಪೆನಿಗಳಲ್ಲಿ ಪ್ರಮುಖ ಕಂಪನಿಗಳಾದ ಇನ್ಫೋಸಿಸ್, ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್, ಸ್ಪೂರ್ತಿ ಐಟಿಸಿ, ಹೆಚ್‍ಎಎಲ್,  ಸಿಪ್ಲ, ಎಂಬಸ್ಸಿ ಮುಂತಾದವುಗಳು ಸೇರಿದೆ. ಗ್ರಾಮೀಣ ಭಾಗಗಳಿಗೂ ಆರೋಗ್ಯ ಸೇವೆಗಳು ತಲುಪಬೇಕೆಂದು ಎಲ್ಲರ ಉದ್ದೇಶವಾಗಿದೆ. ಮಕ್ಕಳ, ತಾಯಂದಿರ ಅಪೌಷ್ಟಿಕತೆ ಕಡಿಮೆ ಮಾಡಿ ಸ್ವಸ್ಥ ಕರ್ನಾಟಕ ನಿರ್ಮಿಸುವುದು ನಮ್ಮೆಲ್ಲರ ಗುರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಯೋಜನೆ ಇಲಾಖೆ ಕಾರ್ಯದರ್ಶಿಗಳಾದ ರಿಚರ್ಡ್ ವಿನ್ಸೆಂಟ್ ಡಿಸೋಜ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

1 hour ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

1 hour ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

1 hour ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

1 hour ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

1 hour ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420