ಕಸಾಪ ದಿನದರ್ಶಿಕೆ ಬಿಡುಗಡೆ

0
16

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 2023 ನೇ ಸಾಲಿನ ಹೊಸ ವರ್ಷದ ಆಕರ್ಷಣೀಯ ದಿನದರ್ಶಿಕೆಯ ಬಿಡುಗಡೆ ಸಮಾರಂಭವನ್ನು ಇಂದು (ಜ.26) ಗುರುವಾರದಂದು ಬೆಳಗ್ಗೆ 11.30 ಕ್ಕೆ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಮುರುಗೇಶ ಆರ್. ನಿರಾಣಿ ಅವರು ಬಿಡುಗಡೆಗೊಳಿಸಲಾಗಿದ್ದು, ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ, ಡಾ. ಬಿ.ಜಿ.ಪಾಟೀಲ, ಶಾಸಕರಾದ ಖನೀಜ್ ಫಾತೀಮಾ ಖಮರುಲ್ ಇಸ್ಲಾಂ, ಬಸವರಾಜ ಮತ್ತಿಮೂಡ, ಜಿಲ್ಲಾಧಿಕಾರಿ ಯಶವಂತ ಗುರುಕರ್ ಇತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here