ಕಲಬುರಗಿ : ಇಂದಿನ ಯಾಂತ್ರಿಕ ಜೀವನ ಶೈಲಿಯಲ್ಲಿ ನಮ್ಮ ನಾಗರಿಕತೆ ಮರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಭಾಷೆ ಮತ್ತು ಸಂಸ್ಕøತಿಯನ್ನು ಮಕ್ಕಳಿಗೆ ಕಲಿಸುವ ಮೂಲಕ ಉಳಿಸಿ ಬೆಳೆಸಬೇಕಾಗಿದೆ ಎಂದು ಮಕ್ತಂಪೂರ ಮಠದ ಪೀಠಾಧಿಪತಿ ಪೂಜ್ಯ ಶಿವಾನಂದ ಮಹಾಸ್ವಾಮಿಗಳು ಹೇಳಿದರು.
ನಗರದ ಮುಕ್ತಂಪೂರ ಗುರುಬಸವ ಬ್ರಹ್ಮಮಠದದಲ್ಲಿ ಮಾಯಾ ವೆಲಫರ್ ಸೂಸಾಯಿಟಿ ಕಲಬುರಗಿ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ಏರ್ಪಡಿಸಿದ ಜಾನಪದ ಮತ್ತು ಸಾಂಸ್ಕøತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿಕಲಚೇತನರಾದ ಪುಟ್ಟರಾಜ ಗವಾಯಿಗಳು ನಮಗೆಲ್ಲ ದಾರಿದೀಪ. ಅವರು ಸಾಹಿತ್ಯ, ಸಂಸ್ಕøತಿ, ಸಂಗೀತ ಲೋಕದಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದಾರೆ, ಅವರ ಆದರ್ಶಗಳ ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಹಿತ ನುಡಿದರು.
ಸಂಪನ್ಮೂಲ ವ್ಯಕ್ತಿ ಎಂ ಎನ್ ಸುಗಂಧಿ ರಾಜಾಪೂರ ಅವರು, ನಮ್ಮ ನೆಲ ಜಲ ಹಾಗೂ ಸಮಸ್ಕøತಿ ಉಳಿಯಲು ಜನಪದದಿಂದ ಸಾಧ್ಯ. ಅದರ ಬೇರುಗಳನ್ನು ಮೈಗೂಡಿಸಿಕೊಂಡು ಆಚರಣೆಗೆ ತರಬೇಕು. ಸೊಗಸಾದ ಚಟುವಟಿಕೆಗಳು ಅನುಸರಿಸಬೇಕು ಎಂದು ಕೆಲ ಜನಪದ ಹಾಡುಗಳನ್ನು ಪ್ರಸ್ತುತ ಪಡಿಸಿದರು.
ಸೂಸಾಯಿಟಿ ಅಧ್ಯಕ್ಷ ವೀರಣ್ಣ ಬೆಣೆಣೆಶಿರೂರ ಅಧ್ಯಕ್ಷತೆ ವಹಿಸಿದರು. ಸಾಹಿತಿ ಸಿದ್ದರಾಮ ರಾಜಮಾನೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಭಾಷೆಯ ಬೆಳವಣಿಗೆಗೆ ಜನಪದ ಸೊಗಡನ್ನು ಜೀವನದಲ್ಲಿ ಅಳವಡಿಸಿ ಕೊಂಡು ಸೌಂದರ್ಯ ಹೆಚ್ಚಿಸಬೇಕಾಗಿದೆ ಎಂದರು.
ಕಲಾವಿದರಾದ ಪ್ರಭುಲಿಂಗಯ್ಯ ಹಿರೇಮಠ, ರೇಣುಕಾ ಐಹೋಳೆ, ಬಸವರಾಜ ಅಗ್ಗಿ, ರೇಷ್ಮಾ ಟಿಳ್ಳೆ, ಬಸವರಾಜ ಕಿಣಗಿ ಭಾಗವಹಿಸಿ ಕಲಾ ಪ್ರದರ್ಶನ ನೆರವೇರಿಸಿದರು. ನಂತರ ಜನಪದ ಕಲಾವಿದರಿಗೆ ಪ್ರಮಾಣ ಪತ್ರ ವಿತರಿಸಿದರು. ಗಣ್ಯರಾದ ರಾಜಶೇಖರ ಕಲ್ಯಾಣಿ, ಶಿವಪ್ರಕಾಶ ಶಾಸ್ತ್ರೀ, ನಾನಾಗೌಡ ಪಾಟೀಲ ಪಾಲ್ಗೊಂಡಿದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…