ಗ್ರಾಮ ಪಂಚಾಯತ ಸಂಪನ್ಮೂಲಗಳ ಕ್ರೋಢಿಕರಣಗಳ ಕುರಿತು ದಿನದ ತರಬೇತಿ

ಕಲಬುರಗಿ: ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯಡಿಯಲ್ಲಿ ಬರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ರಾಜ್ ಸಂಸ್ಥೆಯ ಕಲಬುರಗಿ ಪ್ರಾದೇಶಿಕ ಕಚೇರಿಯಲ್ಲಿ ಗ್ರಾಮ ಪಂಚಾಯತ ಸಂಪನ್ಮೂಲಗ¼ ಕ್ರೋಢಿಕರಣ, ಅವಕಾಶ,ವಿಧಾನಗಳು ಮತ್ತು ಸವಾಲುಗಳ ಕುರಿತು ಒಂದು ದಿನದ ತರಬೇತಿಯನ್ನು ಕಲ್ಯಾಣ ಕರ್ನಾಟಕದ ವಿಭಾಗದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲ ತಾಲೂಕಿನ ಸಹಾಯಕ ನಿರ್ದೇಶಕರು ಹಾಗೂ ಎಲ್ಲ ತಾಲೂಕಿನ ಆಯ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದ ಮೊದಲಿಗೆ ಪ್ರಾದೇಶಿಕ ಕಚೇರಿಯ ಉಪ ನಿರ್ದೇಶಕರಾದ ಗುರುನಾಥ ಶೆಟಗಾರ ಹಾಗೂ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಉಪ ನಿರ್ದೇಶಕರಾದ ಕೆ.ಜಿ.ಜಗದೀಶ ರವರು ಸಸಿಗೆ ನೀರೆರುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕ್ರಮದ ಗುರಿ ಮತ್ತು ಉದ್ದೇಶದ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಥಿತಿಗಳಾಗಿ ಜಿಲ್ಲಾ ಸಾಂಖ್ಯಿಕ ಸಂಗ್ರಹಣಾಧಿಕಾರಿಗಳಾದ ಅಂಬರಾಯ ಸಾಗರ ಹಾಗೂ ಮೈಸೂರು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ರಾಜ್ ಸಂಸ್ಥೆಯ ಬೋಧಕರಾದ ಪ್ರತಿಭಾ ರವರು ಹಾಗೂ ತುಮಕೂರು ಜಿಲ್ಲೆಯ ಸಂಪನ್ಮೂಲ ವ್ಯಕ್ತಿಗಳಾದ ಶಶೀಧರ ವೇದಿಕೆಯ ಮೇಲೆ ಆಸೀನರಾಗಿದ್ದರು. ಹಾಗೂ ತರಬೇತಿಯಲ್ಲಿ ಗ್ರಾಮ ಪಂಚಾಯತಗಳು ತೆರಿಗೆ ಸಂಗ್ರಹಣೆಯಲ್ಲಿ ಎದುರಿಸುತ್ತಿರುವ ಸವಾಲುಗಳು ಹಾಗೂ ಮಾರ್ಗಗಳು ಕುರಿತು ತಮ್ಮ ಉಪನ್ಯಾಸ ನೀಡಿ ಪ್ರಾತ್ಯಕ್ಷೀಕೆಯನ್ನು ಮಾಡಿಸಿದರು.

ಕಾರ್ಯಕ್ರಮವನ್ನು ಬೋಧಕರಾದ ಶಿವಪುತ್ರಪ್ಪ ಗೊಬ್ಬೂರು, ರವರು ನಿರೂಪಿಸಿದರು. ಬೋಧಕರಾದ ಡಾ.ರಾಜು ಕಂಬಳಿಮಠ, ಸರ್ವರವನ್ನು ಸ್ವಾಗತಿಸಿದರು, ತರಬೇತಿ ವ್ಯವಸ್ಥಾಪಕರಾದ ಪ್ರಶಾಂತ ಅಂಗಡಿ, ರವರು ವಂದಿಸಿದರು. ಆಡಳಿತ ಮತ್ತು ಲೆಕ್ಕಾಧಿಕಾರಿಗಳಾದ ಅನೀಲ್ ಕುಮಾರ ರವರು, ತರಬೇತಿ ಸಹಾಯಕರಾದ ಅರ್ಚನಾ ಪಾಟೀಲ್, ಅಶ್ವೀನಿ ಪೂಜಾರಿ ಸಿಬ್ಬಂಧಿಗಳಾದ ರಾಜಕುಮಾರ ಮಾಲಿಂಗ ಸುಲೋಚನ ಅಕ್ಕ, ಉಪಸ್ಥಿತರಿದ್ದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

53 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

10 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420