ಸುರಪುರ: ಸರ್ವಜ್ಞ ಸೇವಾ ಸಂಸ್ಥೆ ತಿಮ್ಮಾಪುರ ಹಾಗೂ ಕನ್ನಡ ಮತ್ತು ಸಂಸ್ಕøತಿಕ ಇಲಾಖೆ ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ತಿಮ್ಮಾಪುರದ ಬಸವಣ್ಣ ದೇವಸ್ಥಾನದ ಬಳಿಯಲ್ಲಿನ ಸಂಸ್ಥೆಯ ಕಚೇರಿ ಆವರಣದಲ್ಲಿ ಜಾನಪದ ವೈಭವ,ಸುಗಮ ಸಂಗೀತ,ಭರತ ನಾಟ್ಯ ಮತ್ತು ವಿಶೇಷ ಸಾಧಕರಿಗೆ ಸರ್ವಜ್ಞ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಲಾಯಿತು.ಕಾಂಗ್ರೆಸ್ ಯುವ ಮುಖಂಡರಾದ ರಾಜಾ ವೇಣುಗೋಪಾಲ ನಾಯಕ ವಾದ್ಯ ನುಡಿಸುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ನಗನೂರಿನ ಹಿರೇಮಠದ ಶ್ರೀ ಸೂಗುರೇಶ್ವರ ಶಿವಾಚಾರ್ಯ ಸ್ವಾಮೀಜಿ ಹಾಗೂ ಸಗರ ನಾಗಠಾಣ ಹಿರೇಮಠದ ಶ್ರೀ ಸೋಮೇಶ್ವರ ಶೀವಾಚಾರ್ಯ ಸ್ವಾಮೀಜಿಗಳು ಸಾನಿಧ್ಯವಹಿಸಿ ಮಾತನಾಡಿ,ಇಂದು ಜನರು ಆಧುನಿಕತೆಯ ಭರಾಟೆಯಲ್ಲಿ ಹಾಗೂ ಮೊಬೈಲ್ ಟಿ.ವಿಗಳ ಹಾವಳಿಯಿಂದ ಜಾನಪದವನ್ನು ಮರೆಯುತ್ತಿದ್ದಾರೆ.ಆದರೆ ಜಾನಪದ ಎನ್ನುವುದು ಈ ನೆಲದ ಮೂಲ ಸಂಸ್ಕøತಿಯಾಗಿದೆ.ಇದನ್ನು ಜಾನಪದ ಎನ್ನುವ ಬದಲು ಜಾಣರಪದ ಎನ್ನಲು ಹೆಮ್ಮೆಯಾಗುತ್ತದೆ ಎಂದರು.ಇಂತಹ ಜಾನಪದವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಸೇವೆ ಮಾಡುತ್ತಿರುವ ಸರ್ವಜ್ಞ ಸೇವಾ ಸಂಸ್ಥೆಯ ಸೇವೆ ಅನನ್ಯವಾಗಿದೆ ಎಂದರು.ಅಮರೇಶ ಕುಂಬಾರರ ಈ ಸೇವೆ ನಿರಂತರವಾಗಿ ಸಾಗಲಿ ಎಂದರು.
ಪ್ರಾಸ್ತಾವಿಕವಾಗಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಅಮೇಶ ಕುಂಬಾರ ಮಾತನಾಡಿ,ನಮ್ಮ ಸಂಸ್ಥೆಯಿಂದ ಕಳೆದ ಅನೇಕ ವರ್ಷಗಳಿಂದ ಜಾನಪದ ಕಲೆ ಉಳಿಸಿ ಬೆಳೆಸುವ ಕಾರ್ಯಕ್ರಮಗಳು ಮತ್ತು ಜಾನಪದ ಸೇರಿದಂತೆ ವಿವಿಧ ರಂಗಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯವನ್ನು ಸಂಸ್ಥೆಯಿಂದ ಮಾಡುತ್ತಿದ್ದೆವೆ,ಮುಂದಿನ ವರ್ಷದಿಂದ ಹೆಚ್ಚು ಅಂಕಗಳಿಸುವ ವಿದ್ಯಾರ್ಥಿಗಳಿಗೆ ಗೌರವಿಸುವ ಕಾರ್ಯಕ್ರಮವನ್ನು ಆರಂಭಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಹಿರಿಯ ಸಾಹಿತಿಗಳಾದ ಶಾಂತಪ್ಪ ಬೂದಿಹಾಳ,ಜಾನಪದ ಕಲಾವಿದ ಲಕ್ಷ್ಮಣ ಗುತ್ತೇದಾರ,ಧಾರ್ಮಿಕ ಕ್ಷೇತ್ರದ ಸಾಧಕ ಮುರುಗಯ್ಯಸ್ವಾಮಿ ತಂಬೂರಿಮಠ ಸೇರಿದಂತೆ ಅನೇಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.ನಂತರ ಸಂಶೋಧಕ ಡಾ:ಎಮ್.ಎಸ್ ಶಿರವಾಳ ಅವರು ಜಾನಪದ ಕೆಲ ಮತ್ತು ಸುರಪುರ ಭಾಗದಲ್ಲಿನ ಸಾಹಿತ್ಯದ ಕುರಿತು ಮಾತನಾಡಿದರು.
ನಂತರ ಕುಮಾರಿ ಪ್ರತಿಕ್ಷಾ ಗುಳಗಿ ಭರತ ನಾಟ್ಯ ಸೇರಿದಂತೆ ವಿವಿಧ ಕಲಾ ತಂಡಗಳಿಂದ ಭಜನೆ,ದುಂದುಮೆ ಹಾಡು,ಭಕ್ತಿ ಗಿಥೆ ಹಾಗೂ ಸುಗಮ ಸಂಗೀತ ಕಾರ್ಯಕ್ರಮ ಜರುಗಿದವು.ಕಾರ್ಯಕ್ರಮದ ವೇದಿಕೆ ಮೇಲೆ ಹಿರಿಯ ಮುಖಂಡ ವೀರಭದ್ರಪ್ಪ ಕುಂಬಾರ,ಪ್ರಕಾಶ ಅಂಗಡಿ ಕನ್ನೆಳ್ಳಿ,ಸಾಯಿಬಣ್ಣ ಪುರ್ಲೆ,ಶಿವರಾಜ ಕಲಕೇರಿ ವೇದಿಕೆ ಮೇಲಿದ್ದರು.ನೂರಾರು ಸಂಖ್ಯೆಯ ಕಲಾಸಕ್ತರು ಭಾಗವಹಿಸಿದ್ದರು.ಪ್ರಕಾಶ ಅಲಬನೂರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…