ಶರಣಬಸವ ವಿಶ್ವವಿದ್ಯಾಲಯದ ವ್ಯವಹಾರ ಅಧ್ಯಯನ ವಿದ್ಯಾರ್ಥಿಗಳಿಂದ ಮತ್ತೊಂದು ಗರಿ

ಕಲಬುರಗಿ; ಏಷ್ಯನ್ ಪೇಂಟ್ಸ್ ಲಿಮಿಟೆಡ್‍ನ ಪ್ಲೇಸ್‍ಮೆಂಟ್ ಡ್ರೈವ್‍ನಲ್ಲಿ ವರ್ಷಕ್ಕೆ 4 ಲಕ್ಷ ರೂಪಾಯಿಗಳ ವೇರಿಯಬಲ್ ಪ್ಯಾಕೇಜ್ ಜೊತೆಗೆ ವರ್ಷಕ್ಕೆ 7.5 ಲಕ್ಷ ರೂಪಾಯಿಗಳ ವೇತನ ಪ್ಯಾಕೇಜ್‍ನೊಂದಿಗೆ ಯಶಸ್ವಿಯಾಗಿ ಸ್ಥಾನ ಪಡೆಯುವ ಮೂಲಕ ಶರಣಬಸವ ವಿಶ್ವವಿದ್ಯಾಲಯದ ವ್ಯವಹಾರ ಅಧ್ಯಯನ ನಿಕಾಯದ ವಿದ್ಯಾರ್ಥಿಗಳು ವಿಶ್ವವಿದ್ಯಾಲಯಕ್ಕೆ ಗೌರವ ತಂದು ಕೊಟ್ಟಿದ್ದಾರೆ.

ವಿಶ್ವವಿದ್ಯಾಲಯದ ಕುಲಸಚಿವ ಡಾ.ಅನಿಲಕುಮಾರ ಬಿಡವೆ, ವ್ಯವಹಾರ ಅಧ್ಯಯನ ನಿಕಾಯದ ಡೀನ್ ಡಾ.ಎಸ್.ಎಚ್.ಹೊನ್ನಳ್ಳಿ ಶುಕ್ರವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಶ್ವವಿದ್ಯಾಲಯಗಳಲ್ಲಿನ ವ್ಯವಹಾರ ಅಧ್ಯಯನ ನಿಕಾಯದ ಎಂಬಿಎ ವಿಭಾಗದ 3ನೇ ಸೆಮಿಸ್ಟರ್‍ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಿಂಗಳಿಗೆ ಸರಿಸುಮಾರು 65,000 ರೂ. ಜೊತೆಗೆ ವೇರಿಯಬಲ್ ಭತ್ಯೆಯೊಂದಿಗೆ ವರ್ಷಕ್ಕೆ ಸುಮಾರು 4 ಲಕ್ಷ ರೂ. ನಿಗದಿತ ವೇತನ ಪಡೆಯುತ್ತಾರೆ ಎಂದು ತಿಳಿಸಿದ್ದಾರೆ.

ವ್ಯವಹಾರ ಅಧ್ಯಯನ ನಿಕಾಯದ ಪ್ಲೇಸ್‍ಮೆಂಟ್ ಸಂಯೋಜಕರಾದ ಪೆÇ್ರ.ಶ್ರುತಿ ಮಾಲಿಪಾಟೀಲ್ ಮತ್ತು ಪೆÇ್ರ.ಶರಣ ರೆಡ್ಡಿ ಮಾತನಾಡಿ, ಎಂಬಿಎ ವಿಭಾಗದ ಸುಮಾರು 50 ವಿದ್ಯಾರ್ಥಿಗಳು ಪ್ಲೇಸ್‍ಮೆಂಟ್ ಡ್ರೈವ್‍ನಲ್ಲಿ ಭಾಗವಹಿಸಿದ್ದರು ಮತ್ತು ಏಷ್ಯನ್ ಪೇಂಟ್ಸ್‍ನ ನೇಮಕಾತಿ ತಂಡದೊಂದಿಗೆ ಮೂರು ಸುತ್ತಿನ ಸಂದರ್ಶನ ಹಾಗೂ ಸಂವಾದದ ನಂತರ, ಏಷ್ಯನ್ ಪೇಂಟ್ಸ್‍ನಿಂದ ಲಾಭದಾಯಕ ಕೊಡುಗೆಯನ್ನು ಪಡೆಯಲು 11 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಮತ್ತು ಆಯ್ಕೆಯಾದ ವಿದ್ಯಾರ್ಥಿಗಳು ತಮ್ಮ ಕೋರ್ಸ್ ಮುಗಿದ ಕೂಡಲೇ, ಕೆಲಸಕ್ಕೆ ಸೇರಿಕೊಳ್ಳುತ್ತಾರೆ ಎಂದು ತಿಳಿಸಿದರು.

ವಿದ್ಯಾರ್ಥಿಗಳಾದ ಅಭಿμÉೀಕ್ ದೇಗಲಮಡಿ, ಆಕಾಶ್ ಬಿ ಪವಾಡಶೆಟ್ಟಿ, ನೀಲಾಂಬಿಕಾ ಜಿ ಎಂ, ದಯಾನಂದಯ್ಯ ವಿ, ಕೆ ಸಾಗರ್ ರೆಡ್ಡಿ, ಮೊಹಮ್ಮದ್ ಅಥರ್, ಮೊಹಮ್ಮದ್ ಅಸ್ರ್ಲಾನ್, ಪವನಕುಮಾರ್ ಆರ್, ರಾಹುಲ್ ಎಸ್, ಸಚಿನ್ ಢಾಗೆ, ಮತ್ತು ವರುಣ್ ನಂದೂರ್ ಯಶಸ್ವಿಯಾಗಿ ಆಯ್ಕೆಯಾಗಿದ್ದಾರೆ.

ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‍ಪರ್ಸನ್ ಮಾತೋಶ್ರೀ ಡಾ.ದಾಕ್ಷಾಯಣಿ ಅವ್ವಾಜಿ ಅವರು ವಿದ್ಯಾರ್ಥಿಗಳ ಗಮನಾರ್ಹ ಸಾಧನೆಗಾಗಿ ಮತ್ತು ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ದೊರಕಿಸಿ ಕೊಡುವ ನಿಟ್ಟಿನಲ್ಲಿ ಶಿಕ್ಷಕ ವೃಂದದವರು ಮಾಡಿದ ಪ್ರಯತ್ನಗಳಿಗಾಗಿ ಅಭಿನಂದಿಸಿದರು. ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ, ವಿಶ್ವವಿದ್ಯಾಲಯದ ಉಪಕುಲಪತಿ ಡಾ.ನಿರಂಜನ ವಿ.ನಿಷ್ಠಿ, ಕುಲಸಚಿವ ಡಾ.ಅನಿಲಕುಮಾರ ಬಿಡವೆ, ಡೀನ್ ಡಾ.ಲಕ್ಷ್ಮೀ ಪಾಟೀಲ್ ಮಾಕಾ ಅವರು ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಈ ಸಾಧನೆಗೆ ಅಭಿನಂದನೆ ಸಲ್ಲಿಸಿದರು.

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

3 hours ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

4 hours ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

4 hours ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

4 hours ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

4 hours ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420