ಸುರಪುರ: ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಧ್ವನಿ ಸಂಘಟನೆಯ ನೂತನ ತಾಲೂಕು ಅಧ್ಯಕ್ಷ ಉಪಾಧ್ಯಕ್ಷರ ನೇಮಕಕ್ಕೆ ಸಭೆ ನಡೆಸಲಾಯಿತು.ನಗರದ ಟೈಲರ್ ಮಂಜಿಲ್ನಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಸಂಜೀವಪ್ಪ ದರಬಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ,ಸುರಪುರ ತಾಲೂಕು ನೂತನ ಅಧ್ಯಕ್ಷರನ್ನಾಗಿ ಲಕ್ಷ್ಮಣ ಪ್ಯಾಪ್ಲಿ ಹಾಗೂ ಉಪಾಧ್ಯಕ್ಷರನ್ನಾಗಿ ಶಾಂತಪ್ಪ ದೊಡ್ಮನಿ ತಳವಾರಗೇರ ಅವರನ್ನು ನೇಮಕಗೊಳಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಸಂಜೀವಪ್ಪ ದರಬಾರಿ,ಸಂಘಟನೆಯ ತತ್ವ ಸಿದ್ಧಾಂತಗಳಿಗೆ ಯಾವುದೇ ರೀತಿಯ ಧಕ್ಕೆ ಬರದಂತೆ ಸಂಘಟನೆಯನ್ನು ತಾಲೂಕಿನಲ್ಲಿ ಬೆಳೆಸುವಂತೆ ಮತ್ತು ಸಮಾಜದಲ್ಲಿನ ಸಮಸ್ಯೆಗಳ ನಿವಾರಣೆಗೆ ಹೋರಾಟವನ್ನು ರೂಪಿಸುವಂತೆ ತಿಳಿಸಿ,ಇಬ್ಬರನ್ನು ಸನ್ಮಾನಿಸಿ ನೇಮಕಾತಿ ಪತ್ರವನ್ನು ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಚಂದ್ರಕಾಂತ ಲಕ್ಷ್ಮೀಪುರ,ಮಲ್ಲಿಕಾರ್ಜುನ ಸಜ್ಜನ್,ಶರಣಪ್ಪ,ದೇವು ಹೂಗಾರ,ಭೀಮರಾಯ ಹುಲಕಲ್ ಸೇರಿದಂತೆ ಅನೇಕರಿದ್ದರು.