ಕಲಬುರಗಿ: ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಸುರೇಶ ಮಾಹಾಗಾಂವಕರ ಆದೇಶದ ಮೆರೆಗೆ ಜಿಲ್ಲಾ ಜಾತ್ಯಾತೀತ ಜನತಾದಳ ಪಕ್ಷದ ಪರಿಶಿಷ್ಠ ಜಾತಿ ವಿಭಾಗಕ್ಕೆ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಕಪಿಲ ದೇವ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಜಾತ್ಯಾತೀತ ಜನತಾದಳ ಪಕ್ಷದ ಪರಿಶಿಷ್ಠ ಜಾತಿ ಘಟಕದ ಅಧ್ಯಕ್ಷ ರೇವಪ್ಪ ಬಿ. ಗಾಜರೆ ಅವರು ತಿಳಿಸಿದ್ದಾರೆ.
ತಾವು ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ ಈ ಸಿದ್ಧಾಂತಗಳಿಗೆ ಬದ್ಧರಾಗಿ ಜಿಲ್ಲೆಯ ಜಾತ್ಯಾತೀತ ಜನತಾದಳ ಪಕ್ಷವನ್ನು ಹಾಗೂ ಪರಿಶಿಷ್ಟ ಜಾತಿ ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ಮೂಲಕ ಪಕ್ಷವನ್ನು ಬಲವರ್ದನೆಗೊಳೀಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.