ಸುರಪುರ: ಇದೇ ಫೆಬ್ರವರಿ 10 ರಂದು ಕಾಂಗ್ರೆಸ್ ಮುಖಂಡರ ಪ್ರಜಾಧ್ವನಿ ಯಾತ್ರೆಯು ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲಿ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಕಾರ್ಯಕ್ರಮ ಆಯೋಜನೆಗಾಗಿ ಬುಧವಾರ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನೇತೃತ್ವದಲ್ಲಿ ಅನೇಕ ಮುಖಂಡರು ಭಾಗವಹಿಸಿ ಸ್ಥಳ ಪರಿಶೀಲಿಸಿದರು.
ಯಾತ್ರೆಂiÀiಲ್ಲಿ ವಿರೋಧ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವುಕುಮಾರ ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರಜಾಧ್ವನಿ ಯಾತ್ರೆಯಲ್ಲಿ ಇನ್ನೂ ಅನೇಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಸಂದರ್ಭದಲ್ಲಿ ಮುಖಂಡರಾದ ವಿಠಲ್ ವಿ.ಯಾದವ, ವೆಂಕೋಬ ಸಾಹುಕಾರ, ಸುರಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ನಿಂಗರಾಜ ಬಾಚಿಮಟ್ಟಿ, ಹುಣಸಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮುದಿಗೌಡ ಕುಪ್ಪಿ, ಕೆ.ಪಿ.ಸಿ.ಸಿ ಸದಸ್ಯರುಗಳಾದ ಸಿದ್ದಣ್ಣ ಮಲಗಲದಿನ್ನಿ, ಗುಂಡಪ್ಪ ಸೊಲ್ಲಾಪೂರ ಹಾಗೂ ಅಬ್ದುಲ್ ಗಫರ ನಗನೂರಿ, ಭೀಮರಾಯ ಮೂಲಿಮನಿ, ರವಿಚಂದ್ರ ಸಾಹುಕಾರ ಉದ್ದಾರ, ಚಂದ್ರು ಹೆಬ್ಬಾಳ, ಭೀಮನಗೌಡ ಹೆಬ್ಬಾಳ, ಮುದ್ದಣ್ಣ ಸಾಹುಕಾರ ಗೋಡಿಹಾಳ, ಲಕ್ಷ್ಮಣ ದೇವತ್ಕ್ಲ್,ರಂಗನಾಥ ನಾಯಕ ದೇವತ್ಕ್ಲ್ ಆರ್.ಎಮ್.ರೇವಡಿ, ಪರಮಣ್ಣಗೌಡ ಕೋನ್ಹಾಳ, ಅಂಬ್ರೇಶಗೌಡ ಕೋನ್ಹಾಳ, ಪ್ರಭುಗೌಡ ಬೇನಕನಹಳ್ಳಿ, ನಿಂಗಣ್ಣ ಕೋಡೆಸೂರ, ಸಿದ್ದನಗೌಡ ಹಂದ್ರಾಳ, ಶರಣು ಶಾಂತಪೂರ, ಗೋಪಾಲದೊರೆ ಅರಿಕೇರ, ಮಲ್ಲಣ್ಣ ಐಕೂರ, ನಂದನಗೌಡ ದೇವಾಪೂರ, ಚನ್ನಪ್ಪಗೌಡ ದೇವಾಪೂರ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದವರು.
ರಾಯಚೂರು; ಕಲ್ಯಾಣ ಕರ್ನಾಟಕಕ್ಕೆ 371ನೇ ಜೇ ಕಲಂ ಜಾರಿಗೆಗೆ ದಶಕಗಳಿಂದ ಹೋರಾಟ ನಡೆಸಿದ ಎಳು ಜಿಲ್ಲೆಗಳ ಸಹಸ್ರಾರು ಹೋರಾಟಗಾರರ ಪರವಾಗಿ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…