ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ ಉತ್ತರ ಕರ್ನಾಟಕ ಅಧ್ಯಕ್ಷರಾದ ಶರಣು ಬಿ ಗದ್ದುಗೆ ಅವರು ಇದೇ 24 ರಿಂದ 3 ದಿನಗಳ ಕಾಲ ನಡೆಯುವ ಕಲ್ಯಾಣ ಕರ್ನಾಟಕ ಉತ್ಸವ ಸಮಾರಂಭದ ಕೆ ಕೆ ಆರ್ ಡಿ ಬಿ ನಿರ್ಣಯಕ್ಕೆ ಸ್ವಾಗತಿಸಿದ್ದಾರೆ. ಬಹಳ ಖುಷಿಯ ವಿಷಯ ಕರವೇ ವತಿಯಿಂದ 10 ವರ್ಷಗಳಿಂದ ಕಲ್ಯಾಣ ಕರ್ನಾಟಕ ಉತ್ಸವ ಪ್ರತಿ ವರ್ಷ ಜಿಲ್ಲೆ ತಾಲೂಕುಗಳಲ್ಲಿ ಆಯೋಜಿಸುತ್ತಾ ಬಂದಿದ್ದೆವು. ಆದರೆ ಈಗ ಸರಕಾರ ಅಭಿವೃದ್ದಿ ಮಂಡಳಿ ಮೂರು ದಿನಗಳ ಕಾಲ ವಿಶೇಷವಾಗಿ ಉತ್ಸವ ಆಚರಿಸುವ ನಿರ್ಣಯ ಕೈಗೊಂಡಿದ್ದು ಬಹಳ ಖುಷಿ ಕೊಟ್ಟಿದೆ ಎಂದು ತಿಳಿಸಿದ್ದಾರೆ.
ಇದೇ ಉತ್ಸವ ಕೆಲ ವರ್ಷಗಳ ಹಿಂದೆ ಆಚರಿಸಿದ್ದರೆ ಇನ್ನೂ ಅದಕ್ಕೆ ಅರ್ಥ ಚೆನ್ನಾಗಿ ಬರುತ್ತಿತ್ತು, ಚುನಾವಣೆಗಳು ಸಮೀಪಿಸಿದಾಗ ಈ ಉತ್ಸವ ಆಯೋಜಿಸಿದ್ದು ಕೆಲವರಿಗೆ ಗೊಂದಲ ಹಾಗೂ ಪ್ರತಿಪಕ್ಷಗಳಿಗೆ ಸಲ್ಪ ಅಸಮಾಧಾನ ತರುವ ಸಂಗತಿ ಎಂದು ತಿಳಿಸಿದ್ದಾರೆ.
ಪರವಾಗಿಲ್ಲ ಈ ಭಾಗದಲ್ಲಿ ನಡೆಯುವ ಉತ್ಸವ ಎಲ್ಲಾ ಸಾಹಿತಿಗಳ ಕಲಾವಿದರ ಲೇಖಕರ ಕನ್ನಡ ಪರ ಸಂಘಟನೆಗಳ ಗಣನೆಗೆ ತೆಗೆದುಕೊಂಡು ಜನಸಾಮಾನ್ಯರಿಗೆ ಖುಷಿ ಕೊಡುವ ಉತ್ಸವ ಆಗಬೇಕೆಂದು ಗದ್ದುಗೆ ಕೆ ಕೆ ಆರ್ವಡಿ ಬಿ ಅಧ್ಯಕ್ಷರಿಗೆ ಶಾಸಕರಿಗೆ ಸಚಿವರಿಗೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…