ಸೇಡಂ: ಹಿರಿಯ ಲೇಖಕಿ, ಶರಣ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷೆ ಮತ್ತು ಉಪನ್ಯಾಸಕಿ ಪ್ರೊ.ಶೋಭಾದೇವಿ ಚೆಕ್ಕಿ ಅವರು ಬರೆದ `ಗೆಲುವಿನ ಆಸೆ’ ಕವನ ಸಂಕಲನ ಬಿಡುಗಡೆ ಸಮಾರಂಭ ನಡೆಯಿತು.
ಪಟ್ಟಣದ ಕಲ್ಪವೃಕ್ಷ ನಿವಾಸದ ಸಭಾಂಗಣದಲ್ಲಿ ಶಾಂಭವಿ ಮಹಿಳಾ ಸಂಘದ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ಅವರು ಕವನ ಸಂಕಲನವನ್ನು ಬಿಡುಗಡೆ ಮಾಡಿ, `ರಸ್ತೆಯ ಬದಿಯಲ್ಲಿ ಉಗುಳಿ ರಸ್ತೆ ಹಾಳಾಗುವುದಕ್ಕಿಂತ, ಉಗುಳಿ ನಿಮ್ಮೊಳಗಿನ ರೋಗವನ್ನು ಹರಡಬೇಡಿ’ ಎಂಬ ಕವಿತೆಯನ್ನು ಪ್ರಸ್ತಾಪಿಸಿ, ಹೊಸ ಆಲೋಚನೆಯ ಬರಹವನ್ನು ಶ್ಲಾಘಿಸಿದರು. ಮಹಿಳಾ ಪರವಾದ ಧ್ವನಿಗೆ ಇನ್ನಷ್ಟು ಶಕ್ತಿ ತುಂಬುವ ಕೆಲಸವನ್ನು ಪ್ರೊ.ಚೆಕ್ಕಿ ಮಾಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಉದ್ಯಮಿ ಮನೋಹರ ದೊಂತಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಪುರಸಭೆ ಮಾಜಿ ಅಧ್ಯಕ್ಷೆ ಚೆನ್ನಮ್ಮ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ವಸಂತಾ ಎಂ. ದೊಂತಾ ವೇದಿಕೆಯಲ್ಲಿದ್ದರು. ಲೇಖಕಿ ಪ್ರೊ.ಶೋಭಾದೇವಿ ಚೆಕ್ಕಿ ಅವರು ಪ್ರಾಸ್ತಾವಿಕ ಮಾತನಾಡಿದರು.
ವಾಸವಿ ದೊಂತಾ ಪ್ರಾರ್ಥನಾ ಗೀತೆ ಹಾಡಿದರು. ಪುರಸಭೆ ಮಾಜಿ ಉಪಾಧ್ಯಕ್ಷತೆ ಈರಮ್ಮ ಯಡ್ಡಳ್ಳಿ, ಕವಿತಾ ಖಜೂರಿ, ಶೀಲಾ ನಿರ್ಣೀ, ವಿಜಯಲಕ್ಷ್ಮೀ ಕೆರಳ್ಳಿ, ಪಲ್ಲವಿ ಶಹಾ, ಮಾಧವಿ ಐನಾಪುರ, ಜಗದೇವಿ ಅಣಕಲ್, ಸವಿತಾ ಚವ್ಹಾಣ, ಸಂಗಮ್ಮ ಕೆರಳ್ಳಿ, ರತ್ನಕಲಾ ರೆಡ್ಡಿ, ಅನಿತಾ , ಶಾರದಾಬಾಯಿ ಬೊಮ್ನಳ್ಳಿ, ಚಂದಮ್ಮ ಮೇಳಕುಂದಿ ಇದ್ದರು. ಕಾರ್ಯಕ್ರಮವನ್ನು ಮೋನಿಕಾ ಕೆರಳ್ಳಿ ನಿರೂಪಿಸಿದರು. ರಾಜೇಶ್ವರಿ ಬಿಲಗುಂದಿ ವಂದಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…