ಬಿಸಿ ಬಿಸಿ ಸುದ್ದಿ

ಅಭಿವೃದ್ಧಿ ಶಾಶ್ವತ, ಅಧಿಕಾರವಲ್ಲ; ಶಾಸಕ ಡಾ. ಅವಿನಾಶ್

ಕಾಳಗಿ: ಚುನಾವಣೆ ಬರುತ್ತೆ ಹೊಗುತ್ತೆ ಮಹತ್ವವಲ್ಲ, ಅಧಿಕಾರದಲ್ಲಿದ್ದಾಗ ಮಾಡಿರುವ ಅಭಿವೃದ್ಧಿ, ಅಡಿಗಲ್ಲು ನಾಯಕರ ಹೆಸರು ಹೇಳುತ್ತದೆ ಎಂದು ಚಿಂಚೋಳಿ ಶಾಸಕ ಡಾ.ಅವಿನಾಶ್ ಜಾಧವ್ ಹೇಳಿದರು.

ತಾಲ್ಲೂಕು ಸಮೀಪದ ಚಿಂಚೋಳಿ ಹೆಚ್ ಗ್ರಾಮದಲ್ಲಿ ಜಿಲ್ಲಾ ಪಂಚಾಯತ ವತಿಯಿಂದ 2020-21ನೇ ಸಾಲಿನ ಎಸ್.ಡಿ.ಪಿ. ಯೋಜನೆಯ ಅಡಿಯಲ್ಲಿ ಅಂದಾಜು ಮೊತ್ತ 53 ಲಕ್ಚದ ನಾಲ್ಕು ಕೋಣೆ 1 ಶೌಚಾಲಯ ನಿರ್ಮಾಣ ಕಾಮಗಾರಿಯ ಅಡಿಗಲ್ಲು ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣ ಮಹತ್ವದು. ಶೈಕ್ಷಣಿಕ ಗುಣಮಟ್ಟದಿಂದಲೇ ದೇಶದ ಪ್ರಗತಿ, ಅಧಿಕಾರ ಹೇಗೆ ಮಾಡಬೇಕು ಎಂಬುವುದು ಶಿಕ್ಷಣ ಕಲಿಸಿಕೊಡುತ್ತದೆ. ಈ ನಿಟ್ಟಿನಲ್ಲಿ ಚಿಂಚೋಳಿ ಹೆಚ್ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಇದರಲ್ಲಿ ಗ್ರಾಮಸ್ಥರ ಸಹಕಾರ ಮುಖ್ಯ. ಕಾಮಗಾರಿಯಲ್ಲಿ ಲೋಪದೋಶ ಕಂಡುಬಂದರೆ ಮುಲಾಜಿಲ್ಲದೆ ಅಧಿಕಾರಿಗಳಿಗೆ ದೂರು ನೀಡಬೇಕು ಎಂದು ಹೇಳಿದರು.

ಮಾಜಿ ತಾಪಂ ಅಧ್ಯಕ್ಷ ರೇವಣಸಿದ್ದಪ್ಪ ಮಾಸ್ಟರ್, ಮಲ್ಲಿನಾಥ ಪಾಟೀಲ, ಗ್ರಾಪಂ ಅಧ್ಯಕ್ಷೆ ಶರಣಮ್ಮ ಸಿದ್ರಾಮ ಟೆಂಗಳಿ, ಸುರೇಖಾ ಹೂಗೊಂಡ, ಪಿಡಿಒ ಪ್ರಿಯಾಂಕಾ, ಶಂಕರಾವ ಪಾಟೀಲ, ಭೂದಾನಿ ವಿಶ್ವನಾಥ ಮುಕರಂಬಿ, ಚಂದ್ರು ಸಿದನಾಕ, ನಾಗರಾಜ ಚಿಂಚೋಳಿ, ವಿಜಯಕುಮಾರ ಚೇಂಗಟಿ, ಅಣ್ಣರಾಯ ಸಲಗರ, ಕಾನು ಪವಾರ, ಎಸ್‍ಡಿಎಮ್‍ಸಿ ಅಧ್ಯಕ್ಷ ಬಸವರಾಜ ಹಡಪಾದ, ಅಶೋಕ ಹೂವಗೊಂಡ, ಜಗನ್ನಾಥ ತೇಲಿ, ಗುತ್ತಿಗೆದಾರ ದೇವರಾಜ ಪೂಜಾರಿ, ಸಂತೋಷ ಸಲಗರ, ಪ್ರಕಾಶ ಗಂಜಿ, ಮಾಜಿ ತಾಪಂ ಸದಸ್ಯ ವಿಶ್ವನಾಥ ಮಾರನ, ಮಹೇಂದ್ರ ಪೂಜಾರಿ, ಮಲ್ಲು ಮರಗುತ್ತಿ, ತಾಪಂ ಇಒ ರೇವಣಸಿದ್ದಪ್ಪಗೌಡ, ಪಿಆರ್‍ಇ ಎಇಇ ವಿರೇಂದ್ರಕುಮಾರ, ಬಿಇಒ ಸಿದ್ದವೀರಯ್ಯ ರುದ್ನೂರ, ಮುಖ್ಯ ಶಿಕ್ಷಕ ಹೊನ್ನಪ್ಪ ಇದ್ದರು. ಶಿಕ್ಷಕಿ ಕೋಮಲಾ ಪ್ರಾರ್ಥಿಸಿದರು. ರಮೇಶ ತೇಲಿ ನಿರೂಪಿಸಿದರು. ಮಶಾಕ್ ಪಟೇಲ ವಂದಿಸಿದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

12 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

12 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

14 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

14 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

14 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

15 hours ago