ಪ್ರಜಾಧ್ವನಿ ಯಾತ್ರೆಗೆ ಸಿದ್ದರಾಮಯ್ಯ ಆಗಮನ:50 ಸಾವಿರ ಜನ ಸೇರುವ ನಿರೀಕ್ಷೆ-ಆರ್.ವಿ.ನಾಯಕ

ಸುರಪುರ:ಇದೇ ಫೆಬ್ರವರಿ 10 ರಂದು ದೇವತ್ಕಲ್ ಗ್ರಾಮದಲ್ಲಿ ನಡೆಯಲಿರುವ ಪ್ರಜಾಧ್ವನಿ ಯಾತ್ರೆಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿಧಾನಸಭೆ ವಿರೋಧಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ತಿಳಿಸಿದರು.

ದೇವತ್ಕಲ್ ಗ್ರಾಮದಲ್ಲಿ ಕಾರ್ಯಕ್ರಮದ ತಯಾರಿ ವೀಕ್ಷಿಸಿ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,ಫೆ 10 ರಂದು ಬೆಳಿಗ್ಗೆ 10:30ಕ್ಕೆ ಕಾರ್ಯಕ್ರಮ ಆರಂಭಗೊಳ್ಳಲಿದೆ.ಹೆಲಿಕಾಪ್ಟರ್ ಮೂಲಕ ಸಿದ್ದರಾಮಯ್ಯನವರು ಸೇರಿದಂತೆ ಅನೇಕ ಮುಖಂಡರು ಆಗಮಿಸಲಿದ್ದು,ಎಲ್ಲರನ್ನು ಹೆಲಿಪ್ಯಾಡ್‍ನಿಂದ ಕಾರ್ಯಕ್ರಮದ ವೇದಿಕೆವರೆಗೂ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕರೆತರಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸುಮಾರು 50 ಸಾವಿರಕ್ಕಿಂತಲೂ ಹೆಚ್ಚಿನ ಸಂಖ್ಯೆಯ ಜನರು ಸೇರುವ ನಿರೀಕ್ಷೆಯಿದೆ.ಸುಮಾರು 25 ಸಾವಿರ ಆಸನಗಳ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ವೇದಿಕೆಯ ಬಲಭಾಗ ಮುಂದೆ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.ಈಗಾಗಲೇ 400 ಬೈ 120 ಫೀಟ್‍ನ ವೇದಿಕೆ ಸಿದ್ಧತೆ ಸಾಗಿದೆ ಎಂದು ತಿಳಿಸಿದರು.

ಪ್ರಜಾಧ್ವನಿ ಯಾತ್ರೆಯಲ್ಲಿ ಸಿದ್ದರಾಮಯ್ಯನವರ ಜೊತೆಗೆ ಮುಖಂಡರಾದ ಈಶ್ವರ ಖಂಡ್ರೆ,ಸತೀಶ ಜಾರಕಿಹೊಳೆ,ಎಂ.ಬಿ.ಪಾಟೀಲ್ ,ಡಾ:ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ ಖರ್ಗೆ,ಝಮೀರ್ ಅಹ್ಮದ್ ಖಾನ್,ಬಸವರಾಜ ರಾಯರೆಡ್ಡಿ,ಮಾಜಿ ಸಂಸದ ಬಿ.ವಿ ನಾಯಕ ಸೇರಿ ಅನೇಕ ಮುಖಂಡರು ಆಗಮಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ವಿಠ್ಠಲ್ ಯಾದವ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ,ವೆಂಕೋಬ ಯಾದವ್,ರಾಜಾ ವೇಣುಗೋಪಾಲ ನಾಯಕ,ಭೀಮರಾಯ ಮೂಲಿಮನಿ,ಸುರೇಶ ತಂಬಾಕೆ,ನಿಂಗಣ್ಣ ಕೊಡೆಸೂರ,ಬಲಭೀಮರಾಯ ಗಂಟಿ,ನಂದಪ್ಪ ಮೇಟಿ,ಹಣಮಂತ್ರಾಯ ಗಂಟಿ,ವೆಂಕಟೇಶ ಕರಡಿಗುಡ್ಡ,ಪರಣ್ಣಗೌಡ ಕೋನಾಳ,ಮಂಜು ಯಾದವ್, ತಿಮ್ಮಣ್ಣ ನಾಯಕ, ಅಯ್ಯಪ್ಪಗೌಡ, ಬಸವಂತರಾಯ ನಾವದಗಿ, ಲಕ್ಷ್ಮಣ ದೇವತ್ಕಲ್,ಹಣಮಂತ್ರಾಯ ಶುಕ್ಲ,ಚಂದ್ರು ಹೆಬ್ಬಾಳ,ಅಮರಯ್ಯ ಸ್ವಾಮಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

18 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

10 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420