ಶಹಾಬಾದ: ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಪ್ರೌಢ ಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಯಲ್ಲಿ ಪ್ರಬಂಧ ಸ್ಪರ್ಧೆ ವಿಭಾಗದಲ್ಲಿ “ನಗದು ರಹಿತ ಆರ್ಥಿಕತೆಯ ಪ್ರಾಮುಖ್ಯತೆ” ವಿಷಯ ಕುರಿತು ಬರೆದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆ ಶಹಾಬಾದ ತಾಲೂಕಿನ ರಾವೂರ ಗ್ರಾಮದ ಸಿದ್ಧಲಿಂಗೇಶ್ವರ ಸಂಸ್ಥಾನ ಮಠದ ಶ್ರೀ ಸಚ್ಚಿದಾನಂದ ಪ್ರೌಢಶಾಲೆಯ ಕ್ರಿಯಾಶೀಲ ಶಿಕ್ಷಕ ಸಿದ್ಧಲಿಂಗ ಬಾಳಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಕಲಬುರಗಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಸಿದ್ಧಲಿಂಗ ಬಾಳಿ ಅವರಿಗೆ ರಾವೂರ ಗ್ರಾಮದ ಸಿದ್ಧಲಿಂಗೇಶ್ವರ ಸಂಸ್ಥಾನ ಮಠದ ಪೂಜ್ಯ ಸಿದ್ದಲಿಂಗ ದೇವರು, ಚಿತ್ತಾಪೂರ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧವೀರಯ್ಯ ರುದ್ನೂರ್, ಬಿಆರ್ಪಿ ಮಲ್ಲಿಕಾರ್ಜುನ ಸೇಡಂ, ಸರಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಈರಣ್ಣ ಕೆಂಭಾವಿ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಶಿವಪುತ್ರ ಕರಣಿಕ್,ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಚಿದಾನಂದ ಕುಡ್ಡನ್,ಅನುದಾನಿತ ಪ್ರೌಢಶಾಲಾ ಶಿಕ್ಷಕರ ಮತ್ತು ಶಿಕ್ಷಕೇತರ ಸಂಘದ ತಾಲೂಕಾಧ್ಯಕ್ಷ ಪ್ರವೀಣರಕುಮಾರ ಹೇರೂರ ಸೇರಿದಂತೆ ತಾಲೂಕಿನ ಅನೇಕ ಶಿಕ್ಷಕರು ಅಭಿನಂದಿಸಿದ್ದಾರೆ.