ಬಿಸಿ ಬಿಸಿ ಸುದ್ದಿ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ; ಆರೋಪಿಗಳ ಪತ್ತೆಗೆ ಆಗ್ರಹ

ಕಲಬುರಗಿ: ಲಿಂಗಸೂರಿನಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ಪದವಿ ಪೂರ್ವ ಕಾಲೇಜಿನ 17 ವರ್ಷ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮೇಲೆ ಆಗಿರುವ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗೋರ ಸೇನಾ ರಾಷ್ಟ್ರೀಯ ಸಂಘಟನೆ ಕರ್ನಾಟಕ ಕಾರ್ಯಕರ್ತರು ಅಪಾರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಕಳೆದ ನಾಲೈದು ವರ್ಷಗಳಿಂದ ಬಾಲಕಿಯರ ಮೇಲೆ ಅತ್ಯಾಚಾರ, ಆತ್ಮ ಹತ್ಯೆ ಮತ್ತು ಕೊಲೆ ಪ್ರಕರಣಗಳು ಹೆಚ್ಚುತ್ತಿದ್ದು, ಕೆಲವೆ ಪುಕರಣಗಳು ದಾಖಲಾಗಿರುವುದು ವಿμÁದಕರ. ಈ ಹಿಂದೆ 2021 ರಲ್ಲಿ ಮಂಡ್ಯ ಜಿಲ್ಲೆಯ ಕೂಲಿ ಕೆಲಸಕ್ಕೆ ಹೋಗಿದ್ದ ಬಂಜಾರಾ ಸಮಾಜದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಬರ್ಬರ ಕೊಲೆ ಪುಕರಣ, 2022 ರಲ್ಲಿ ಮಂಡ್ಯ ಜಿಲ್ಲೆಯಲ್ಲಿ ಟ್ಯೂಷನ್ ಕ್ಲಾಸಗ ಹೋಗಿದ್ದ 10 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಕಾಂತರಾಜ ಎಂಬ ಶಿಕ್ಷಕನಿಂದ ಅತ್ಯಾಚಾರ ಮತ್ತು ಕೊಲೆ ಪುಕರಣ. 2022 ರಲ್ಲಿ ವಿಜಯಪುರ ಜಿಲ್ಲೆಯ ಅಪ್ರಾಪ್ತ ಬಾಲಕಿ ಅತ್ಯಾಚಾರ ಮತ್ತು ಕೊಲೆ ಹೀಗೆ ಪ್ರಕರಣಗಳು ವರದಿಯಾಗಿದ್ದು, ಹೆಚ್ಚಿನ ಪುಕರಣಗಳು ಬಂಜಾರಾ ಸಮುದಾಯದ ಬಾಲಕಿಯರ ಮೇಲೆ ನಡೆದಿದ್ದು ವಯಸ್ಸು 17 ವರ್ಷ ಪಥಮ ಪಿಯುಸಿ ವಿದ್ಯಾರ್ಥಿನಿ ಲಿಂಗಸೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಹತ್ತಿರದ ವಿಬಿಸಿ ಶಿಕ್ಷಣ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಮಹಿಳಾ, ವಸತಿ ನಿಲಯ ಲಿಂಗಸೂರಿನಲ್ಲಿ ಇದ್ದು ಈ ಮಗುವಿನ ಜೊತೆ ನಡೆದಂತಹ ಕೃತ್ಯವು ಇಡಿ ನಮ್ಮ ಸಮಾಜದ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದ್ದು, ಇಂತಹ ಪುಕರಣಗಳು ಮರುಕಳಿಸದಂತೆ, ತಪ್ಪಿತಸ್ಥರಿಗೆ ಕೆವಲ ಶಿಕ್ಷೆ ನೀಡುವುದರಿಂದ ಇಂತಹ ಪ್ರಕರಣಗಳು ಮರುಕಳಿಸದಂತೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಈ ಕೆಳಗೆ ಸೂಚಿಸದಂತಹ ಕ್ರಮಗಳನ್ನು ಕೈಗೊಂಡು ಬಾಲಕಿಯರ ರಕ್ಷಣೆಗೆ ಮುಂದಾಗಬೇಕೆಂದು ಬಂಜಾರಾ ಸಮುದಾಯದ ಗೋರ ಸೇನಾ ರಾಷ್ಟ್ರೀಯ ಸಂಘಟನೆ ಕರ್ನಾಟಕ ವತಿಯಿಂದ ಮನವಿ ಮಾಡಿದ್ದಾರೆ.

ಶಾಲಾ ಕಾಲೇಜುಗಳ ಆವರಣ ಮತ್ತು ತರಗತಿ ಕೊಠಡಿಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮಾರಾ ಅಳವಡಿಕೆ ಮಾಡುವುದು. ಅಂತಹ ಸಿಸಿ ಟಿವಿ ಕ್ಯಾಮರಾಗಳನ್ನು ಶಾಲಾ ಅಥವಾ ಸಂಸ್ಥೆಯ ಮುಖ್ಯಸ್ಥರು ಅಥವಾ ಪ್ರಾಚಾರ್ಯರು ನಿರ್ವಹಣೆ ಮಾಡುವುದು. ಸಂಶಯಬಂದ ಪ್ರಕರಣಗಳಲ್ಲಿ ತನಿಖೆಯನ್ನು ಕೈಗೊಂಡು ಮುಂದೆ ಆಗುವ ಅನಾಹುತಗಳನ್ನು ತಡೆಯಲು ಸೂಕ್ತ ಕ್ರಮ ಕೈಗೊಳಬೇಕು.

ಗೋರ ಸೇನಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರೋ.ಸಂದೇಶ ಚವ್ಹಾಣ, ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀಧರ ಚವ್ಹಾಣ, ವಿಶಾಲ ರಾಠೋಡ, ಪ್ರಭುಕಾರ ರಾಠೋಡ, ಗುರುರಾಜ ರಾಠೋಡ, ವಿನೋದ ಜಾಧವ, ವಿನೋದ ಇದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

4 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

4 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

4 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

4 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

4 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

4 hours ago