ಸುರಪುರ : ನಗರದ ತಿಮ್ಮಾಪುರದ ಶರಣಬಸವೇಶ್ವರ ದೇವಸ್ಥಾನದ ಗುಮ್ಮಾನವರ ನಿವಾಸದ ಆವರಣದಲ್ಲಿ ಪ್ರತಿ ವರ್ಷದಂತೆ ಮಹಾಶಿವರಾತ್ರಿ ನಿಮಿತ್ತ (ಫೆ 10) ಇಂದಿನಿಂದ ಶರಣಬಸವೇಶ್ವರ ಪುರಾಣ ಮಹೋತ್ಸವ ಹಾಗೂ ಶರಣ-ಸಂತರಿಂದ ಸದ್ಭಾವ ಚಿಂತನೆ ಕಾರ್ಯಕ್ರಮ ಫೆ.20 ರವರೆಗೆ ಪ್ರತಿ ದಿನ ಸಂಜೆ 7 ಗಂಟೆಗೆ ಜರುಗಲಿದೆ.
ಇಂದು ರುಕ್ಮಾಪುರ ಹಿರೇಮಠದ ಗುರುಶಾಂತಮೂರ್ತಿ ಶಿವಾಚಾರ್ಯ ಉದ್ಘಾಟಿಸುವರು. ದೇವಾಪುರ ಹಿರೇಮಠದ ಶಿವಮೂರ್ತಿ ಶಿವಾಚಾರ್ಯ ಸಾನ್ನಿಧ್ಯ. ತೋಟೆಂದ್ರ ಶಾಸ್ತ್ರಿ ಕೊಲ್ಲೂರ ಪುರಾಣಿ ಪ್ರವಚನಕಾರ, ವಿರೇಶಕುಮಾರ ಕಟ್ಟಿಸಂಗಾವಿ ಮತ್ತು ರವಿಕುಮಾರ ಆಳಂದ ಸಂಗೀತ ಸಾಥ್ ನೀಡಲಿದ್ದಾರೆ. ಫೆ.19 ರಂದು ಸಾಧಕರಿಗೆ ಸತ್ಕಾರ ಮತ್ತು ಶರಣ ಶ್ರೀ ಪ್ರಶಸ್ತಿ ಪ್ರದಾನವಿದೆ ಎಂದು ಶರಣಬಸವೇಶ್ವರ ದೇವಸ್ಥಾನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಶ್ರದ್ಧಾ-ಭಕ್ತಿಯ ಕೇಂದ್ರ : ತಿಮ್ಮಾಪುರ-ರಂಗಂಪೇಟೆ ಜನರ ಹಾಗೂ ಗುಮ್ಮಾ ಮನೆತನದವರ ಆರಾಧ್ಯ ದೈವ ಶರಣಬಸವೇಶ್ವರ ನಾಗದೇವನ ಹುತ್ತದ ರೂಪದಲ್ಲಿ ನೆಲೆಗೊಂಡು ಭಕ್ತರ ಬದುಕಿಗೆ ಸಂಜೀವಿನಿಯಾಗಿ ಶ್ರದ್ಧಾ-ಭಕ್ತಿಯ ಕೇಂದ್ರವಾಗಿದೆ. 11 ದಿನಗಳವರೆಗೆ ಶರಣಬಸವೇಶ್ವರ ಪ್ರವಚನದ ಜತೆಗೆ, ಜ್ಞಾನ ದಾಸೋಹ, ಶರಣರ-ಸಂತರ ಸದ್ಭಾವ ಚಿಂತನೆ ಎನ್ನುವ ವಿಶಿಷ್ಟ ಕಾರ್ಯಕ್ರಮದ ಮೂಲಕ ಮಠಾಧೀಶರಿಂದ ಆಶೀರ್ವಚನ ನಡೆಯುತ್ತಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…