ಫೆ.12ಕ್ಕೆ ಎಸ್.ಸಿ.-ಎಸ್.ಟಿ. ನೌಕರರ‌ ಸಂಘದ ನೂತನ ಪದಾಧಿಕಾರಿಗಳ‌ ಪದಗ್ರಹಣ

0
54

ಕಲಬುರಗಿ: ಕರ್ನಾಟಕ ರಾಜ್ಯ ಸರ್ಕಾರಿ, ಅರೇ ಸರ್ಕಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕಕ್ಕೆ ಇತ್ತೀಚೆಗೆ ಹೊಸದಾಗಿ ಚುನಾಯಿತರಾದ ಪದಾಧಿಕಾರಿಗಳ ಪದಗ್ರಹಣ ಮತ್ತು 2023ನೇ‌ ದಿನದರ್ಶಿ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಇದೇ ಫೆಬ್ರವರಿ 12 ರಂದು ಕಲಬುರಗಿ ನಗರದ ಜೆಸ್ಕಾಂ ನಿಗಮದ ಕಚೇರಿ ಆವರಣದಲ್ಲಿರುವ ಇಂಜಿನೀಯರ್ಸ್ ಅಸೋಸಿಯೇಷನ್ ಹಾಲ್ ನಲ್ಲಿ ಬೆಳಿಗ್ಗೆ 11.30 ಗಂಟೆಗೆ ಆಯೋಜಿಸಿದೆ.

ಕಲಬುರಗಿ ಬುದ್ಧ ವಿಹಾರದ ಪೂಜ್ಯ ಸಂಘಾನಂದ‌ ಭಂತೆ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಕೆ.ಕೆ.ಆರ್.ಡಿ.ಬಿ. ಅಧೀನ ಕಾರ್ಯದರ್ಶಿ ಮಲ್ಲೇಶ್ ತಂಗಾ ಅವರು ಉದ್ಘಾಟಿಸುವರು.

Contact Your\'s Advertisement; 9902492681

ಸಣ್ಣ ನೀರಾವರಿ ಇಲಾಖೆಯ ಅಧೀಕ್ಷಕ ಅಭಿಯಂತ ಸುರೇಶ ಶರ್ಮಾ, ಲೋಕೋಪಯೋಗಿ ಇಲಾಖೆಯ ಕಲಬುರಗಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತ ಮಲ್ಲಿಕಾರ್ಜುನ ಎಂ.ಎಸ್., ಅಧೀಕ್ಷಕ ಅಭಿಯಂತ(ವಿನ್ಯಾಸ) ಮನೋಜಕುನಾರ ಗಡಬಳ್ಳಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ‌ ಸುನೀಲ ಚವ್ಹಾಣ, ಎಸ್.ಸಿ.-ಎಸ್.ಟಿ. ನೌಕರರ ಸಂಘದ ಜಿಲ್ಲಾ ಘಟಕದ‌ ಗೌರವಾಧ್ಯಕ್ಷ ಸೋಮಶೇಖರ‌ ಮದನಕರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಸಂಘದ ನೂತನ ಜಿಲ್ಲಾಧ್ಯಕ್ಷ‌ ಮಹೇಶ ಸಿ. ಹುಬಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here