ಕಲಬುರಗಿ: ಕರ್ನಾಟಕ ರಾಜ್ಯ ಸರ್ಕಾರಿ, ಅರೇ ಸರ್ಕಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕಕ್ಕೆ ಇತ್ತೀಚೆಗೆ ಹೊಸದಾಗಿ ಚುನಾಯಿತರಾದ ಪದಾಧಿಕಾರಿಗಳ ಪದಗ್ರಹಣ ಮತ್ತು 2023ನೇ ದಿನದರ್ಶಿ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಇದೇ ಫೆಬ್ರವರಿ 12 ರಂದು ಕಲಬುರಗಿ ನಗರದ ಜೆಸ್ಕಾಂ ನಿಗಮದ ಕಚೇರಿ ಆವರಣದಲ್ಲಿರುವ ಇಂಜಿನೀಯರ್ಸ್ ಅಸೋಸಿಯೇಷನ್ ಹಾಲ್ ನಲ್ಲಿ ಬೆಳಿಗ್ಗೆ 11.30 ಗಂಟೆಗೆ ಆಯೋಜಿಸಿದೆ.
ಕಲಬುರಗಿ ಬುದ್ಧ ವಿಹಾರದ ಪೂಜ್ಯ ಸಂಘಾನಂದ ಭಂತೆ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಕೆ.ಕೆ.ಆರ್.ಡಿ.ಬಿ. ಅಧೀನ ಕಾರ್ಯದರ್ಶಿ ಮಲ್ಲೇಶ್ ತಂಗಾ ಅವರು ಉದ್ಘಾಟಿಸುವರು.
ಸಣ್ಣ ನೀರಾವರಿ ಇಲಾಖೆಯ ಅಧೀಕ್ಷಕ ಅಭಿಯಂತ ಸುರೇಶ ಶರ್ಮಾ, ಲೋಕೋಪಯೋಗಿ ಇಲಾಖೆಯ ಕಲಬುರಗಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತ ಮಲ್ಲಿಕಾರ್ಜುನ ಎಂ.ಎಸ್., ಅಧೀಕ್ಷಕ ಅಭಿಯಂತ(ವಿನ್ಯಾಸ) ಮನೋಜಕುನಾರ ಗಡಬಳ್ಳಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀಲ ಚವ್ಹಾಣ, ಎಸ್.ಸಿ.-ಎಸ್.ಟಿ. ನೌಕರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಸೋಮಶೇಖರ ಮದನಕರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಸಂಘದ ನೂತನ ಜಿಲ್ಲಾಧ್ಯಕ್ಷ ಮಹೇಶ ಸಿ. ಹುಬಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…