ಬಿಸಿ ಬಿಸಿ ಸುದ್ದಿ

ನಿರ್ಲಕ್ಷೃ ಮಾಡಿರುವುದೇ ಖರ್ಗೆ ಅವರ ದೊಡ್ಡ ಸಾಧನೆ: ಎಂಎಲ್ಸಿ ಎನ್.ರವಿಕುಮಾರ

ಕಲಬುರಗಿ: ಇಡಿ ಕಲ್ಯಾಣ ಕರ್ನಾಟಕ ಹಿಂದುಳಿಯಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾರಣ. ಐದು ದಶಕ ಆಡಳಿತ ನಡೆಸಿದರೂ ಈ ಭಾಗದ ಯಾವ ಊರನ್ನು ಅಭಿವೃದ್ಧಿ ಮಾಡಲಿಲ್ಲ, ಅಪ್ಪ-ಮಗ ಪ್ರತಿನಿಧಿಸಿದ ಕ್ಷೇತ್ರವೂ ಹೊರತಾಗಿಲ್ಲ. ಸಂಪೂರ್ಣವಾಗಿ ನಿರ್ಲಕ್ಷೃ ಮಾಡಿಕೊಂಡು ಬಂದಿರುವುದೇ ದೊಡ್ಡ ಸಾಧನೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿರುವ ಎಂಎಲ್‍ಸಿ ಎನ್.ರವಿಕುಮಾರ ಕಿಡಿಕಾರಿದರು.

ನಗರದ ಸೂಪರ್ ಮಾರ್ಕೇಟ್‍ನಲ್ಲಿರುವ ಕೆಕೆಸಿಸಿಐ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಕಲಬುರಗಿ ಗ್ರಾಮಾಂತರ ಜಿಲ್ಲಾ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಅಭಿವೃದ್ಧಿ ಮಾಡದಿರುವುದರಿಂದ ಬೇಸತ್ತು ಕಳೆದ ಸಲ ಅಪ್ಪನನ್ನು ಸೋಲಿಸಿದ್ದಾರೆ. ಈ ಸಲ ಚಿತ್ತಾಪುರದಲ್ಲಿ ಪ್ರಿಯಾಂಕ್ ಖರ್ಗೆಯನ್ನು ಸಹ ಸೋಲಿಸುತ್ತೇವೆ. ಇದರೊಂದಿಗೆ ಅಪ್ಪನ ಜತೆಗೆ ಮಗನ ಖಾತೆನೂ ಬಂದ್ ಮಾಡುತ್ತೇವೆ ಎಂದು ಗುಡುಗಿದರು.

ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಆರೋಪಗಳಿಗೆ ಭರ್ಜರಿಯಾಗಿ ಮತ್ತು ಪ್ರಬಲ ತಿರುಗೇಟು ನೀಡುವ ಮೂಲಕ ಖರ್ಗೆ ಅವರ ಖಾತೆ ಕಲಬುರಗಿಯಲ್ಲಿ ಬಂದ್ ಆಗಿದೆ ಎಂದಿದ್ದಾರೆ. ಅದೇ ರೀತಿಯಲ್ಲಿ ಚಿತ್ತಾಪುರ ಕ್ಷೇತ್ರ ಮತ್ತು ಜಿಲ್ಲೆಯ ಎಲ್ಲರ ಮುಖಂಡರು ಸೇರಿಕೊಂಡು ಪ್ರಿಯಾಂಕ್ ಖರ್ಗೆ ಅವರನ್ನು ಈ ಸಲ ಸೋಲಿಸಿ ಮನೆಗೆ ಕಳುಹಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಪ್ರಿಯಾಂಕ್ ಖರ್ಗೆ ಸಂಸ್ಕøತಿ ಇಲ್ಲದ ವ್ಯಕ್ತಿ, ಏನು ಮಾತನಾಡಬೇಕು ಎಂಬ ಯೋಚನೆ ಮಾಡಲ್ಲ, ಚಿತ್ತಾಪುರ ಶಾಸಕರಾಗಿದ್ದು ಸಂಸ್ಕøತಿ ಹೀನರಾಗಿದ್ದಾರೆ. ಈಗ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಆದರೆ, ಅಧಿಕಾರದಲ್ಲಿದ್ದಾಗ ಏನು ಮಾಡಿದರೂ ಎಂದು ಖಾರವಾಗಿ ಪ್ರಶ್ನಿಸಿದರು. ಕಲ್ಯಾಣ ಖಲ್ಯಾಣದ ಜಿಲ್ಲೆಗಳು, ಗುರುಮಠಕಲ್ ಮತ್ತು ಚಿತ್ತಾಪುರ ತೀರಾ ಹಿಂದುಳಿಯಲು ಯಾರು ಕಾರಣ ಎಂಬುದು ಹೇಳಿ ಎಂದರು. ಏನಾದರೂ ಒಂದಿಷ್ಟು ಅಭಿವೃದ್ಧಿ ಕಂಡಿದ್ದರೆ, ಅದು ಕಾಂಗ್ರೆಸ್ ಆಡಳಿತಾವಧಿ ಹೊರತುಪಡಿಸಿ ಎಂದು ರವಿಕುಮಾರ ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಖರ್ಗೆಯವರನ್ನು ಸೋಲಿಸಿದವರ ಸಹ ದಲಿತರೆ, ಆದರೆ, ಅವರಿಗೆ ಸಹನ ಶಕ್ತಿಯೇ ಇಲ್ಲ. ಇಷ್ಟು ಆಡಳಿತ ನಡೆಸಿ, ಈಗ ಹಿಂಬಾಗಿಲ ಮೂಲಕ ರಾಜ್ಯಸಭೆ ಪ್ರವೇಶಿಸಿದ್ದಾರೆ. ಪ್ರಧಾನಿ ಮೋದಿ ಏಟಿಗೆ ಮೆತ್ತಗಾಗಿದ್ದಾರೆ.ಅದರಂತೆ ಈ ಸಲ ಎಲ್ಲರು ಸೇರಿಕೊಂಡು ಚಿತ್ತಾಪುರದಲ್ಲಿ ಬಿಜೆಪಿಯನ್ನು ಗೆಲ್ಲಿಸಿಕೊಂಡು ಬರಲು ಕೆಲಸ ಮಡಬೇಕು ಎಂದು ತಿಳಿಸಿದರು.

ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರz್ದÉೀವಾಡಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ ಠಾಕೂರ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಂಬಾರಾಯ ಅಷ್ಟಗಿ, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಶರಣಪ್ಪ ತಳವಾರ, ಶೋಭಾ ಬಾಣಿ ಇತರರಿದ್ದರು.

ಪ್ರಧಾನ ಕಾರ್ಯದರ್ಶಿ ಲಿಂಗರಾಜ ಬಿರಾದಾರ ನಿರೂಪಿಸಿದರು. ನಾಗಪ್ಪ ಕೊಳ್ಳಿ ಸ್ವಾಗತಿಸಿದರು. ಅಯ್ಯಪ್ಪ ರಾಮತೀರ್ಥ ಪ್ರಾರ್ಥಿಸಿದರು. ಪ್ರಮುಖರಾದ ಅರವಿಂದ ಚವ್ಹಾಣ, ರಾಜಕುಮಾರ ಕೋಟಿ, ಭಾಗೀರಥಿ ಗುನ್ನಾಪುರ,ಗೌರಿ ಚಿಚಕೋಟಿ, ಮಲ್ಲಿನಾಥ ಪಾಟೀಲ್ ಯಲಗೋಡ ಮೊದಲಾದವರಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

1 hour ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago