ಬಿಸಿ ಬಿಸಿ ಸುದ್ದಿ

ಎಸ್.ಸಿ.-ಎಸ್.ಟಿ. ನೌಕರರ‌ ಸಂಘದ ನೂತನ ಪದಾಧಿಕಾರಿಗಳ‌ ಪದಗ್ರಹಣ

  • ಮೀಸಲಾತಿ ಸಂರಕ್ಷಣೆಗೆ‌ ಸಂಘಟನೆ ‌ಅವಶ್ಯಕ: ಡಾ.ವಿಜಯಕುಮಾರ ಸಾಲಿಮನಿ

ಕಲಬುರಗಿ,ಫೆ.12: ಸಂವಿಧಾನಬದ್ಧವಾಗಿ ನೀಡಲಾಗಿರುವ ಮೀಸಲಾತಿ ಸಂರಕ್ಷಣೆಗೆ ನೌಕರರಲ್ಲಿ‌ ಸಂಘಟನೆ ಅವಶ್ಯಕ ಎಂದು ಸರ್ಕಾರಿ ‌ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ.ವಿಜಯಕುಮಾರ್ ‌ಸಾಲಿಮನಿ ಅಭಿಪ್ರಾಯಪಟ್ಟರು.

ರವಿವಾರ ಕಲಬುರಗಿ ನಗರದ ಜೆಸ್ಕಾಂ ನಿಗಮದ ಕಚೇರಿ ಆವರಣದಲ್ಲಿರುವ ಇಂಜಿನೀಯರ್ಸ್ ಅಸೋಸಿಯೇಷನ್ ಹಾಲ್ ನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ, ಅರೇ ಸರ್ಕಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಸಂಘದಿಂದ ಆಯೋಜಿಸಿದ ಕಲಬುರಗಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಕ್ಯಾಲೆಂಡರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಶ್ರಮದಿಂದ ಕಟ್ಟಿದ ಸಂಘವನ್ನು ಕೆಲವರು ಒಡೆಯಲು ಪ್ರಯತ್ನಿಸುತ್ತಾರೆ. ಹೀಗಾಗಿ ಸಂಘದ ನೇತೃತ್ವ ವಹಿದವರು ಯಾವುದೇ‌ ಆಸೆ, ಆಮೀಷಕ್ಕೆ‌ ಒಳಗಾಗದೆ ಸಂಘ ಮತ್ತು ನೌಕರರ ಉನ್ನತ್ತಿಗೆ ಶ್ರಮಿಸಬೇಕು ಎಂದು‌ ಕರೆ‌ ನೀಡಿದ ಅವರು, ನೂತನ ಪದಾಧಿಕಾರಿಗಳಿಗೆ ಶುಭ ಕೋರಿದರು.

ಕಾರ್ಯಕ್ರಮದ‌ದಿವ್ಯ ಸಾನಿಧ್ಯ ವಹಿಸಿದ್ದ ಕಲಬುರಗಿ ಬುದ್ಧ ವಿಹಾರದ ಪೂಜ್ಯ ಸಂಘಾನಂದ‌ ಭಂತೆಜಿ ಅವರು ಧಮ್ಮ‌ವಂದನೆಯೊಂದಿಗೆ ಮಾತು ಆರಂಭಿಸಿ, ನೂತನ ಚುನಾಯಿತ ಪದಾಧಿಕಾರಿಗಳು ಹೊಸ ಚೈತನ್ಯದಿಂದ‌ ಜಿಲ್ಲೆಯ ನೌಕರರ ಮತ್ತು ಸಮುದಾಯದ‌ ಉನ್ನತ್ತಿಗೆ ಶ್ರಮಿಸಬೇಕು ಎಂದು ಆಶೀರ್ವಚನ‌ ನೀಡಿದರು. ಕೆ.ಕೆ.ಆರ್.ಡಿ.ಬಿ. ಅಧೀನ ಕಾರ್ಯದರ್ಶಿ ಮಲ್ಲೇಶ್ ತಂಗಾ ಅವರು‌ ಕಾರ್ಯಕ್ರಮ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ 2023ನೇ‌ ದಿನದರ್ಶಿ ಕ್ಯಾಲೆಂಡರ್ ಪೂಜ್ಯ ಸಂಗಾನಂದ‌ ಭಂತೇಜಿ ಸೇರಿದಂತೆ ಗಣ್ಯರು ಬಿಡುಗಡೆಗೊಳಿಸಿದರು.

ಜಿಲ್ಲಾಧ್ಯಕ್ಷ‌ ಮಹೇಶ ಸಿ. ಹುಬಳ್ಳಿ ಅಧ್ಯಕ್ಷತೆಯಲ್ಲಿ‌ ನಡೆದ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಇಲಾಖೆಯ ಅಧೀಕ್ಷಕ ಅಭಿಯಂತ ಸುರೇಶ ಶರ್ಮಾ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ‌ ಸುನೀಲ ಚವ್ಹಾಣ, ಎಸ್.ಸಿ.-ಎಸ್.ಟಿ. ನೌಕರರ ಸಂಘದ ಜಿಲ್ಲಾ ಘಟಕದ‌ ಗೌರವಾಧ್ಯಕ್ಷ ಸೋಮಶೇಖರ‌ ಮದನಕರ್, ಗ್ರೇಡ್ 2 ತಹಶೀಲ್ದಾರ ರಮೇಶ ಆಲೂರ, ಉಪ ತಹಶೀಲ್ದಾರರಾದ ದೇವಮ್ಮ , ಶಿವಕಾಂತಮ್ಮ‌ ಸೇರಿದಂತೆ ಸಂಘದ ಪದಾಧಿಕಾರಿಗಳಾದ ಗಣಪತಿ ಬಬಲಾದ, ಶಿವಾನಂದ ಟೋಳೆ, ಸದಾಶಿವ ಹಾಗರಗಿ, ಸದಾಶಿವ ರಾತ್ರಿಕರ್ ಹಾಗೂ ನೂರಾರು ಸಂಖ್ಯೆಯಲ್ಲಿ‌ ನೌಕರರು ಭಾಗವಹಿಸಿದ್ದರು.

ಹಿರಿಯ ಉಪಾಧ್ಯಕ್ಷ ವಿಠ್ಠಲ ಗೋಳಾ ಪ್ರಾಸ್ತಾವಿಕವಾಗಿ‌ ಮಾತನಾಡಿ, ಸಂಘ ಇದೂವರೆಗೆ‌ ಸಾಗಿ ಬಂದ ಹಾದಿಯನ್ನು ಸಂಕ್ಷಿಪ್ತವಾಗಿ ವಿವರಿಸಿದರು. ಜಿಲ್ಲಾ ಕಾರ್ಯದರ್ಶಿ ಡಾ.ಪಂಡಿತ್ ಬಿ.ಕೆ. ಸ್ವಾಗತಿಸಿದರು. ಜಿಲ್ಲಾ ಸಂಘಟನಾ‌ ಕಾರ್ಯದರ್ಶಿ ವಿದ್ಯಾಧರ ಕಾಂಬಳೆ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಸಂತೋಷಕುಮಾರ ಆರ್.ಕೆ. ವಂದಿಸಿದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

6 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

9 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

12 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

1 hour ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago