ಕಲಬುರಗಿ: ಆ. 29ರಂದು ಕಲಬುರಗಿಯಲ್ಲಿ ನಡೆಯಲಿರುವ ಮತ್ತೆ ಕಲ್ಯಾಣ ಕಾರ್ಯಕ್ರಮದ ಯಶಸ್ಸಿನ ಹಿನಲ್ಲೆಯಲ್ಲಿ ನಗರದ ಶಹಾಬಜಾರ್ ಸುಲಫಲ ಮಠದಲ್ಲಿ ಭಾನುವಾರ ಸಂಜೆ ಮತ್ತೆ ಪೂರ್ವಭಾವಿ ಸಭೆ ಜರುಗಿತು.
ವಿವಿಧ ಸಮಿತಿಗಳ ರಚನೆ ಮಾಡಿ, ಅವರಿಗೆ ಜವಾಬ್ದಾರಿಯನ್ನು ವಹಿಸಲಾಯಿತು. ಸಂವಾದ ಕಾರ್ಯಕ್ರಮದಲ್ಲಿ ಹೆಚ್ಷಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಕರೆ ತರಬೇಕು ಎಂದು ನಿರ್ಧರಿಸಲಾಯಿತು.
ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೆ ತೆರಳಿ ಅಲ್ಲಿಯೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲು ನಿರ್ಧರಿಸಲಾಯಿತು. ನಗರದ ವಿವಿಧ ಕಾಲೇಜುಗಳಲ್ಲಿ ಮತ್ತೆ ಕಲ್ಯಾಣ ಕಾರ್ಯಕ್ರಮದ ಬಗ್ಗೆ ಸಂವಾದ ನಡೆಸಬೇಕೆಂದು ತೀರ್ಮಾನಿಸಲಾಯಿತು. ಜಾಗತಿಕ ಲಿಂಗಾಯತ ಮಹಾಸಭಾದ ಪ್ರಭುಲಿಂಗ ಮಹಾಗಾಂವಕರ್, ರಾಜ್ಯ ಸಂಚಾಲಕ ರವೀಂದ್ರ ಶಾಬಾದಿ, ಮತ್ತೆ ಕಲ್ಯಾಣ ರಾಜ್ಯ ಸಂಚಾಲಕ ಸುನಿಲ್ ಹುಡಗಿ ಇತರರು ಭಾಗವಹಿಸಿದ್ದರು.
ಬಸವರಾಜ ಮೊರಬದ, ಮಹಾಂತೇಶ್ ಕಲಬುರಗಿ, ಶಿವಶರಣಪ್ಪ ದೇಗಾಂವ, ರೇವಣಸಿದ್ದಯ್ಯ ಮಠಪತಿ, ನಾಗರಾಜ ಕಾಮಾ, ಬಸವರಾಜ ಶೇರಿಕಾರ, ಬಸವರಾಜ ಧೂಳಾಗುಂಡಿ, ಅಯ್ಯಣ್ಣಗೌಡ ಪಾಟೀಲ, ರಾಜು ಕಾಡಾದಿ, ಎಸ್.ವಿ ನಿಂಗಪ್ಪ, ಉದಯಕುಮಾರ ಸಾಲಿ, ಡಾ. ನಾಗರಾಜ ದಂಡೋತಿ, ಬಸವರಾಜ ಕಟ್ಟಿ, ವಿರೇಶ ಮಾಲಿಪಾಟೀಲ, ಮಹಾದೇವಪ್ಪ ಯಳವಂತಗಿ, ನಳಿನಿ ಮಹಾಗಂವಕರ, ಧನರಾಜ, ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…