ಬಿಸಿ ಬಿಸಿ ಸುದ್ದಿ

ಸಂತ ಸೇವಾಲಾಲ್ ಜಯಂತಿ ಆಚರಣೆ

ಕಲಬುರಗಿ : ತಾಲ್ಲೂಕಿನ ನಂದಿಕೂರ ಗ್ರಾಮದಲ್ಲಿ ವೆಂಕಟಗಿರಿ ಗ್ರಾಮೀಣ ಅಭಿವೃದ್ಧಿ ಸೌಹಾರ್ದ ಸಹಕಾರಿಯ ನಿಯಮಿತ ವತಿಯಿಂದ ಸಂತ ಸೇವಾಲಾಲ ಮಹಾರಾಜರ 284ನೇ ಜಯಂತೋತ್ಸವವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಾನಿಧ್ಯ ವಹಿಸಿ ನಂದಿಕೂರದ ಶಿವಲಿಂಗ ಶರಣರು ಮಾತನಾಡಿ, ಭರತ ಖಂಡದ ಧಾರ್ಮಿಕ ರಾಯಭಾರಿ ಎಂದೇ ಹೆಸರಾದ ಬಂಜಾರ ಸಮುದಾಯದ ಆರಾಧ್ಯ ದೈವ ಸದ್ಗುರು ಸಂತ ಸೇವಾಲಾಲ ಮಹಾರಾಜರು ದಾವಣಗೆರೆ ಜಿಲ್ಲೆ ಹೊನ್ನಾಳಿಯ ಬೆಳಗುತ್ತಿ ಹೋಬಳಿಯ ಸರಗೊಂಡನ ಕೊಪ್ಪದ ಫೆಬ್ರುವರಿ 15 ರಂದು ಜನಸಿದರು. ತಂದೆ ಭೀಮ ನಾಯಕ ತಾಯಿ ಧರ್ಮಿನಿ ಮಾತೆ ಮಗನಾಗಿ ಜಗದಂಬೆಯ ಆರಾಧಕರಾಗಿ ಜನಿಸಿರುವದು ನಮಗೆ ಬಹಳ ಹೆಮ್ಮೆಯ ವಿಷಯ ಎಂದು ಹೇಳಿದರೂ.

ಬ್ರಹ್ಮಚಾರ್ಯವನ್ನೇ ಪಾಲನೆ ಮಾಡಿದ ಸಂತ ಸೇವಾಲಾಲರು ತಮ್ಮ ಲೀಲೆಗಳ ಹಾಗೂ ಪವಾಡಗಳ ಮೂಲಕ ಜನರ ಮನಸ್ಸಿನಲ್ಲಿ ಗುರುವಿನ ಸ್ಥಾನ ಪಡೆದರು ಸತ್ಯ , ಅಹಿಂಸೆ , ತ್ಯಾಗ ಮತ್ತು ನೀತಿ ಮನೋಭಾವದ ಮಾತುಗಳನ್ನು ಜನತೆಗೆ ವ್ಯಸನ ಮುಕ್ತರಾಗಿ ಎಂದು ಭೋದಿಸಿದರು ಎಂದರು.

ವೆಂಕಟಗಿರಿ ಗ್ರಾಮೀಣ ಅಭಿವೃದ್ಧಿ ಸೌಹಾರ್ದ ಸಹಕಾರಿ ನಿಯಮಿತ ಸಂಸ್ಥೆಯ ಅಧ್ಯಕ್ಷ ಪವನಕುಮಾರ ವಳಕೇರಿ ಅವರು ಮಾತನಾಡಿ, ಸೇವಾಲಾಲ್ ಮಹಾರಾಜರು ಲಿಂಗೈಕರಾದರು ಸ್ಥಳದಲ್ಲಿ ಗದ್ದುಗೆಯ ಇದ್ದೆ ಪ್ರತಿ ದಿನ ಪೂಜೆ ಪುನಸ್ಕಾರಗಳು ನಡೆಯುತ್ತವೆ ಎಂದು ಹೇಳಿದರು.

ಪೌರಾಗಡ ಮಹಾರಾಷ್ಟ್ರ. ಸ್ವಾಗತ ಅನಿಲ ಕೊರಬಾ, ವಂದನಾರ್ಪಣೆ ಸಂಜು ಕುಮಾರ ಪವಾರ ಮಾಡಿದರು.
ಕಾರ್ಯಕ್ರಮದಲ್ಲಿ ಬೋಜರಾಜ್ ಮಠ, ಶ್ರೀಮಂತ ರಾಥೋಡ್, ರೋಷನ್ ಬಿ, ಗೀತಾ ಬಾಯಿ, ಗೋದಾವರಿ ಬಾಯಿ, ವಿಠಬಾಯಿ ಪಾಟೀಲ್, ಸಂಜುಕುಮಾರ್ ಪವರ್, ಸೋನು ತೇಜು ಇದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

2 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

2 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

4 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

4 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

4 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

5 hours ago