ಬಿಸಿ ಬಿಸಿ ಸುದ್ದಿ

7UP ಗೆ ಬ್ರ್ಯಾಂಡ್ ಅಂಬಾಸಿಡರ್ ಆಗಿ ರಶ್ಮಿಕಾ ಮಂದಣ್ಣ ನೇಮಕ

ಬೆಂಗಳೂರು: ಈ ಬಾರಿಯ ಪ್ರೇಮಿಗಳ ದಿನದಂದು ರೀಫ್ರೆಶ್ ಮಾಡುವ ಹೊಸದಾದ ಪ್ರೇಮಕಥೆಯನ್ನು 7UP ಬಹಿರಂಗಪಡಿಸಿದ ಈ ಸಂದರ್ಭದಲ್ಲಿ ಯುವ ಪೀಳಿಗೆಯ ಐಕಾನ್ ಮತ್ತು ಸೂಪರ್ ಸ್ಟಾರ್ ರಶ್ಮಿಕಾ ಮಂದಣ್ಣ ಅವರನ್ನು ತನ್ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಘೋಷಣೆ ಮಾಡಿದೆ.

ವಿಶಿಷ್ಟವಾದ ಮತ್ತು ವಿನೋದದಿಂದ ಕೂಡಿದ ವಿಡಿಯೋ ಸಹಯೋಗವನ್ನು ಹೊಂದಿದ್ದು, ರಶ್ಮಿಕಾ ಅವರು ತಮ್ಮ ವ್ಯಾಲೆಂಟೈನ್ ಆಗಿ 7UPನ Fido Dido ದೊಂದಿಗೆ ಒಪ್ಪಂದವನ್ನು ಸೀಲಿಂಗ್ ಮಾಡುವುದನ್ನು ಇದು ಒಳಗೊಂಡಿರುತ್ತದೆ ಹಾಗೂ ತನ್ನ ಪ್ರಿಯಕರನಿಗೆ ಕ್ಷಿಪ್ರಗತಿಯಲ್ಲಿ ಫ್ಲೈಯಿಂಗ್ ಕಿಸ್ ಮಾಡುವ ದೃಶ್ಯವನ್ನು ಒಳಗೊಂಡಿದೆ.

ರಶ್ಮಿಕಾ ಮಂದಣ್ಣ ಅವರು ಬಹುಭಾಷೆಗಳ ಚಲನಚಿತ್ರಗಳಲ್ಲಿ ನಟಿಸಿ ದೇಶಾದ್ಯಂತ ಲಕ್ಷಾಂತರ ಯುವಕರ ನೆಚ್ಚಿನ ನಾಯಕ ನಟಿಯಾಗಿದ್ದಾರೆ. ಅವರ ಈ ಜನಪ್ರಿಯತೆ ಮತ್ತು ಯಶಸ್ಸು ದೇಶದಲ್ಲಿ ಪ್ರಸ್ತುತ ಅವರನ್ನು ಸೂಪರ್ ಸ್ಟಾರ್ ಅನ್ನಾಗಿ ಮಾಡಿದೆ. ಅವರೊಂದಿಗಿನ ಸಹಭಾಗಿತ್ವದಿಂದ ದೇಶದಲ್ಲಿ 7UP ನೊಂದಿಗಿನ ಯುವ ಪೀಳಿಗೆಯ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ.

ರಶ್ಮಿಕಾ ಮಂದಣ್ಣ ಅವರ ನೇಮಕದ ಬಗ್ಗೆ ಮಾತನಾಡಿದ ಪೆಪ್ಸಿಕೊ ಇಂಡಿಯಾದ ಎನರ್ಜಿ, ಹೈಡ್ರೇಶನ್ & ಫ್ಲೇವರ್ಸ್ ನ ಸೀನಿಯರ್ ಮಾರ್ಕೆಟಿಂಗ್ ಡೈರೆಕ್ಟರ್ ನಸೀಬ್ ಪುರಿ ಅವರು, “ರಶ್ಮಿಕಾ ಮಂದಣ್ಣ ಅವರು ತಮ್ಮ ಉಲ್ಲಾಸಕರ ಮತ್ತು ಉತ್ಸಾಹಭರಿತ ವ್ಯಕ್ತಿತ್ವದೊಂದಿಗೆ ಕಡಿಮೆ ಅವಧಿಯಲ್ಲಿ ದೇಶದ ಅತ್ಯಂತ ಪ್ರೀತಿಯ ಯೂತ್ ಐಕಾನ್ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಅವರ ಈ ವ್ಯಕ್ತಿತ್ವ ಮತ್ತು ಜನಪ್ರಿಯತೆ 7UP ಗೆ ನಿಜವಾಗಿಯೂ ಉತ್ತಮ ಹೊಂದಾಣಿಕೆಯಾಗುತ್ತದೆ. ಅವರು ದೇಶಾದ್ಯಂತ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವುದರಿಂದ ನಮ್ಮ ಗ್ರಾಹಕ ವ್ಯಾಪ್ತಿಯನ್ನು ವಿಸ್ತರಣೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಸದಾ ಮಂದಸ್ಮಿತವಾದ ಮುಖವನ್ನು ಹೊಂದಿರುವ ಅವರು ನಮ್ಮ ಜೊತೆ ಸಹಭಾಗಿತ್ವ ಹೊಂದಿರುವುದಕ್ಕೆ ನಮಗೆ ಹೆಮ್ಮೆ ಎನಿಸುತ್ತಿದೆ’’ ಎಂದರು.

*ಈ ಬಗ್ಗೆ ಮಾತನಾಡಿದ ರಶ್ಮಿಕಾ ಮಂದಣ್ಣ,* “ನಾನು 7UP ಗೆ ಬ್ರ್ಯಾಂಡ್ ಅಂಬಾಸಿಡರ್ ಆಗುತ್ತಿರುವುದಕ್ಕೆ ಅತ್ಯಂತ ಸಂತಸವಾಗುತ್ತಿದೆ. ಇದು ನಿಜಕ್ಕೂ ರೀಫ್ರೆಶ್ ನೀಡುವ ಪೇಯವಾಗಿದೆ. ನಾನು ಈ ಡ್ರಿಂಕ್ ನ ಜಾಹೀರಾತು ಅಭಿಯಾನಗಳಲ್ಲಿ ನಟಿಸಲಿದ್ದೇದ್ದೇನೆ ಮತ್ತು ನನ್ನ ಅಭಿಮಾನಿಗಳಿಗೆ ಹೊಸ ರೀಫ್ರೆಶಿಂಗ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದೇನೆ’’ ಎಂದು ತಿಳಿಸಿದರು.

ರಶ್ಮಿಕಾ ನಟಿಸಲಿರುವ 7UP ನ ಹೊಸ ಜಾಹೀರಾತು ಸದ್ಯದಲ್ಲೇ ಎಲ್ಲಾ ಸಾಂಪ್ರದಾಯಿಕ ಮತ್ತು ಡಿಜಿಟಲ್ ಪ್ಲಾಟ್ ಫಾರ್ಮ್ ಗಳಲ್ಲಿ ಪ್ರಸಾರಗೊಳ್ಳಲಿದೆ.

emedialine

Recent Posts

ಹುಣಸಿಹೊಳೆ: ಕಣ್ವಮಠದಲ್ಲಿ ಯತಿತ್ರಯರ ಆರಾಧನೆ ಜೂನ್ 22 ರಿಂದ ಜುಲೈ 3ರ ವರೆಗೆ

ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…

41 seconds ago

ಆರ್ಟ್ ಆಫ್ ಲಿವಿಂಗ್ ಮಕ್ಕಳಿಗಾಗಿ ಯೋಗ ತರಬೇತಿ 23ಕ್ಕೆ

ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…

5 mins ago

ಈಶಾನ್ಯ ಪದವೀಧರ ಚುನಾವಣೆ,ಅಂತಿಮ ಮತದಾನಕ್ಕೆ 1,56,623 ಮತದಾರರು ಅರ್ಹ

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…

59 mins ago

ಡೊನೇಷನ್ ಹಾವಳಿಗೆ ಕಡಿವಾಣಕ್ಕೆ ಎಸ್ಎಫ್ಐಯಿಂದ ಶಾಲಾ ಶಿಕ್ಷಣ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…

4 hours ago

ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಸಂಸ್ಕಾರ ಶಿಬಿರದ ಸಮರೂಪ 21ಕ್ಕೆ

ಕಲಬುರಗಿ : ತಾಲೂಕಿನ ಹೊನ್ನಕಿರಣಗಿ ಗ್ರಾಮದ ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಪರ್ಯಂತರ ಜರುಗಿಬಂದ 17ನೇ ವರ್ಷದ…

6 hours ago

ತುರ್ತಾಗಿ ಬರ ಪರಿಹಾರ ಒದಗಿಸಲು ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ ಒತ್ತಾಯ

ಕಲಬುರಗಿ: ರಾಜ್ಯ ರೈತ ಸಮುದಾಯ ಮತ್ತು ಕೃಷಿ ಕಾರ್ಮಿಕರು ತೀವ್ರ ಬರದಲ್ಲಿ ನರಳುತ್ತಿದ್ದಾರೆ. ಆದ್ದರಿಂದ ಸರ್ಕಾರ ಯುದ್ಧೋಪಾದಿಯಲ್ಲಿ ಬರ ಪರಿಹಾರ…

6 hours ago