ಬಿಸಿ ಬಿಸಿ ಸುದ್ದಿ

ಮಹಾದೇವಿಯಕ್ಕಗಳ ಸಮ್ಮೇಳನಕ್ಕೆ ತೆರೆ

ಕಲಬುರಗಿ: 12ನೇ ಶತಮಾನ ನೆನಪಿಸುವಂತಹ ಕಾರ್ಯಕ್ರಮ ಇದಾಗಿದ್ದು, ಇಂತಹ ಸಮ್ಮೇಳನ ನಡೆಸುವ ಮೂಲಕ ಮಹಿಳಾ ಸಂವೇದನೆಗಳಿಗೆ ಉತ್ತಮ ವೇದಿಕೆ ಸಿಗುವಂತಾಗಿದೆ ಎಂದು ಕಲಬುರಗಿ ಸರ್ಕಾರಿ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕಿ ಡಾ. ಶಾರದಾ ಜಾಧವ ನುಡಿದರು.

ಇಲ್ಲಿನ ಜಯನಗರದ ಅನುಭವ ಮಂಟಪದಲ್ಲಿ ನಿನ್ನೆಯಿಂದ ನಡೆದ ಮಹಾದೇವಿಯಕ್ಕಗಳ ಸಮ್ಮೇಳನದ ಮಂಗಲದ ಹರಹು ಕಾರ್ಯಕ್ರಮದಲ್ಲಿ ಸಮಾರೋಪ ಭಾಷಣ ಮಾಡಿದ ಅವರು, ಬಸವಣ್ಣ ಅನ್ನುವ ಹೆಸರೇ ಒಂದು ಸ್ಫೂರ್ತಿ. ಶರಣರ ಆಲೋಚನೆ ದೂರಗಾಮಿಯಾಗಿದ್ದವು. ಶರಣ ಚಿಂತನೆಗಳನ್ನು ಆಚರಿಸಿದರೆ ಸಾಲದು.‌ ಅವುಗಳನ್ನು ಬದುಕಬೇಕು ಎಂದು ತಿಳಿಸಿದರು.

ಎರಡು ದಿನಗಳ ಕಾಲ ನಡೆದ ಈ ಸಮ್ಮೇಳನದಲ್ಲಿ ಮಹಿಳಾ ಸಂವೇದನೆ, ಮಹಿಳಾ ಪ್ರತಿಭೆ ಅನಾವರಣದ ವೇದಿಕೆಯಂತಿತ್ತು. ಪ್ರತಿ ಬಾರಿಗಿಂತ ಈ ಬಾರಿಯ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು. ಅರ್ಥಪೂರ್ಣ ಗೋಷ್ಠಿ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜನಮನಸೂರೆಗೊಂಡವು

ಲಿಂಗವ ಪೂಜಿಸಿ ಫಲವೇನಯ್ಯ ಎಂದು ಹೇಳಿದ ಬಸವಣ್ಣನವರು, ಸಮರತಿ, ಸಮಕಳೆ, ಸಮಸುಖ ಸಮಾಜದಲ್ಲಿ ಬಯಸಿದರು. ಅಸಮಾನತೆ, ಕಂದಾಚಾರ, ಮೂಢನಂಬಿಕೆ ವಿರುದ್ಧ ಹೋರಾಡಿದ ಶರಣರು ಬದುಕಿನ ಎಲ್ಲ ಕ್ಷೇತ್ರಗಳಲ್ಲಿ ಸ್ವಾತಂತ್ರ್ಯ ತಂದುಕೊಟ್ಟರು ಎಂದು ಹೇಳಿದರು. ಕಾಯಕ-ದಾಸೋಹ ಸಿದ್ಧಾಂತವನ್ನು ಬೋಧಿಸಿದ ಶರಣರು ಸ್ತ್ರೀಯರಿಗೆ ಮೊಟ್ಟ ಮೊದಲು ಸ್ವಾತಂತ್ರ್ಯ ಒದಗಿಸಿದರು. ಮಾನವೀಯ ಮೌಲ್ಯದಿಂದ ಕೂಡಿದ ವಚನ ಸಾಹಿತ್ಯದ ಅಧ್ಯಯನ ಅಗತ್ಯ ಎಂದು ಅವರು ವಿವರಿಸಿದರು.

ಸಮ್ಮೇಳನದ ಸರ್ವಾಧ್ಯಕ್ಷೆ ಮಾತೋಶ್ರೀ ದಾಕ್ಷಾಯಿಣಿ ಎಸ್. ಅಪ್ಪ, ಬಸವ ಸಮಿತಿ ಅಧ್ಯಕ್ಷೆ ವಿಲಾಸವತಿ ಖೂಬಾ, ಸ್ವಾಗತ ಸಮಿತಿ ಗೌರವಾಧ್ಯಕ್ಷೆ ಶರಣಮ್ಮ ಕಲಬುರಗಿ, ಕಾರ್ಯದರ್ಶಿ ಅನಸೂಯಾ ನಡಕಟ್ಟಿ, ಸಂಚಾಲಕಿ ಡಾ. ಜಯಶ್ರೀ ದಂಡೆ ವೇದಿಕೆಯಲ್ಲಿ ಇದ್ದರು.

ಇದೇ ವೇಳೆಯಲ್ಲಿ ಪ್ರೊ. ಶಾಂತಲಾ ನಿಷ್ಠಿ, ಪ್ರೊ. ಪೂರ್ಣಿಮಾ ಪಾಟೀಲ, ಪ್ರೊ. ಚಿತ್ರಲೇಖಾ, ಪ್ರೊ. ಮಂಗಲಾ ಉಪ್ಪಿನ್, ಮೀನಾಕುಮಾರಿ, ಮಂಜುಳಾ ಜಾನೆ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಶಿವಲೀಲಾ ಶೀಲವಂತರ ಹಾಗೂ ಡಾ. ಶಿವಲೀಲಾ ಚಟ್ನಳ್ಳಿ ನಿರೂಪಿಸಿದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

12 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

15 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

18 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

1 hour ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago