ಕಲಬುರಗಿ; ಬೆಂಗಳೂರಿಗೆ ಹೊಸ ರೈಲು ಆರಂಭಿಸಬೇಕು (ರಾತ್ರಿ) ಎಂದು ಒತ್ತಾಯಿಸಿ ಕಲ್ಯಾಣ ನಾಡು ವಿಕಾಸ ವೇದಿಕೆ ಮುಖಂಡರು ನಗರದ ರೈಲ್ವೆ ನಿಲ್ದಾಣದಲ್ಲಿ ಮಧ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ನರೇಶ್ ಲಾಲ್ವಾನಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಕಲಬುರಗಿಯಿಂದ ಸೋಲಾಪುರ ಮೂಲಕ ನಾಗಪುರಕ್ಕೆ ಹೊಸ ರೈಲು ಆರಂಭಿಸಬೇಕು. ಕಲಬುರಗಿಯಿಂದ ಗುಂತಕಲ್, ಬಳ್ಳಾರಿ, ಅರಸೀಕೆರೆ ಮೂಲಕ ಮಂಗಳೂರಿಗೆ ಹೊಸ ರೈಲು ಆರಂಭಿಸಬೇಕು. ಕಲಬುರಗಿ-ಹೈದರಾಬಾದ್ ಇಂಟರ್ಸಿಟಿ ಎಕ್ಸ್ಪ್ರೆಸ್ ಪ್ರತಿದಿನ ಆರಂಭಿಸಬೇಕು. ಸೋಲಾಪುರ- ಕಲಬುರಗಿ-ಗುಂತಕಲ್ ಡೆಮು ನಿತ್ಯ ಆರಂಭಿಸಬೇಕು. ಎಂದು ಒತ್ತಾಯಿಸಿದರು.
2014ರಲ್ಲಿ ಎರಡನೇ ಪಿಟ್ಲೈನ್ (ಸೋಲಾಪುರ ಅಂತ್ಯದ ಕಡೆಗೆ) ಅನುಮೋದಿಸಲಾಯಿತು ಮತ್ತು ಟೆಂಡರ್ ಕರೆಯಲಾಯಿತು. ಆದಾಗ್ಯೂ ಅದನ್ನು ರದ್ದುಗೊಳಿಸಲಾಯಿತು. ಈ ಯೋಜನೆಯನ್ನು ಮರುಪ್ರಾರಂಭಿಸಬೇಕು. ಕಲಬುರಗಿ ಜಂಕ್ಷನ್, ಮತ್ತು ವಾಡಿ ರೈಲ್ವೆ ನಿಲ್ದಾಣಗಳನ್ನು ಆಧುನಿಕ ರೀತಿಯಲ್ಲಿ ಮರುರೂಪಿಸಬೇಕು ಎಂದು ಆಗ್ರಹಿಸಿದರು.
ವೇದಿಕೆ ಸಂಸ್ಥಾಪಕ ಅಧ್ಯಕ್ಷ ಮುತ್ತಣ್ಣ ಎಸ್ ನಡಗೇರಿ, ಬಾಬು ಮದನಕ, ಸೂರ್ಯಪ್ರಕಾಶ್ ಚಾಳಿ, ಅವಿನಾಶ್ ಕಪನೂರ, ಪ್ರವೀಣ ಖೆಮನ್, ಜೈಭೀಮ್ ಮಾಳಗೆ, ಶಿವು ಗೋಕುಲ್, ಅರುಣ್ ಇನಾಂದಾರ್ ಇತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…