ಕಲಬುರಗಿ: ಪ್ರತಿ ವರ್ಷದಂತೆ ನಗರದ ಜಯನಗರ ಶಿವಮಂದಿರದಲ್ಲಿ ಮಹಾ ಶಿವರಾತ್ರಿ ನಿಮಿತ್ತ ಇಂದು ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಅದ್ದೂರಿಯಾಗಿ ಶಿವ ಪಾರ್ವತಿ ಕಲ್ಯಾಣೋತ್ಸವ ಜರುಗಿತು.
ಬೆಳಿಗ್ಗೆ 5 ಗಂಟೆಗೆ ಶಿವನಿಗೆ ರುದ್ರಾಭಿಷೇಕ ನಡೆಯುಯಿತು.ನಂತರ ಭಕ್ತಾದಿಗಳಿಂದ ಅಭಿಷೇಕ ನಡೆಯುತ್ತವೆ.ಬೆಳಿಗ್ಗೆ 10:30ಕ್ಕೆ ಖ್ಯಾತ ಜ್ಯೋತಿಷಿ,ವೇದ ಪಂಡಿತ ಡಾ. ಬಸವರಾಜ ಗುರೂಜಿ ಕಲಗುರ್ತಿ ಅವರ ನೇತೃತ್ವದಲ್ಲಿ ಶಿವ ಪಾರ್ವತಿ ಕಲ್ಯಾಣೋತ್ಸವ ಜರುಗಿತು.ನಂತರ ಅವರು ಮಂಗಲ ಕಾರ್ಯ ಕುರಿತು ಹಾಗೂ ಧಾರ್ಮಿಕ ವಿಧಿ ವಿಧಾನಗಳನ್ನು ತಿಳಿಸಿದರು.ಈ ಸಮಯದಲ್ಲಿ ವಿಶೇಷವಾಗಿ ನಾದ ಸ್ವರ ಮೊಳಗಿದ್ದು ವಿಶೇಷವಾಗಿತ್ತು.
ಇದಕ್ಕೂ ಮೊದಲು ಶಿವ ಪಾರ್ವತಿ ಭಾವಚಿತ್ರದೊಂದಿಗೆ ಪಲ್ಲಕ್ಕಿ ಮೆರವಣಿಗೆ ನಡೆಯಿತು.ಮೆರವಣಿಗೆಯಲ್ಲಿ ನೂರಾರು ಮಹಿಳೆಯರು, ಹಿರಿಯರು ಹಾಗೂ ಭಕ್ತರು ಭಾಗವಹಿಸಿದ್ದರು.
ಶಾಸಕ ಶಶೀಲ್ ನಮೋಶಿ, ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ, ಹೋರಾಟಗಾರ ಲಿಂಗರಾಜ ಸಿರಗಾಪೂರ, ಉಪಾಧ್ಯಕ್ಷ ವಿರೇಶ ದಂಡೋತಿ, ವಿರುಪಾಕ್ಷಿ ವಾಲಿ,ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಕೆ.ಬಿ, ಕೋಶಾಧ್ಯಕ್ಷ ಬಸವರಾಜ ಮಾಗಿ, ಕಾರ್ಯದರ್ಶಿ ಶಿವಪುತ್ರಪ್ಪ ಮರಡಿ, ಪದಾಧಿಕಾರಿಗಳಾದ ಬಸವರಾಜ ಅನ್ವರಕರ, ವಾಸುದೇವ ಮಾಲಿ ಬೀರಾದರ,ಎಂ.ಡಿ.ಮಠಪತಿ, ಭೀಮಾಶಂಕರ ಶೆಟ್ಟಿ, ಸುನೀಲ್ ಬಿಡಪ, ಬಂಡೆಪ್ಪ ಕೇಸೂರ, ಬಸವರಾಜ ಪುರ್ಮ, ಮಲ್ಲಯ್ಯ ಸ್ವಾಮಿ ಬಿದಿಮನಿ, ಅನುರಾಧ ಕುಮಾರಸ್ವಾಮಿ, ಶ್ರೀಮತಿ ಸುಷ್ಮಾ ಬಸವರಾಜ ಮಾಗಿ, ಗೀತಾ ಲಿಂಗರಾಜ, ಅಶೋಕ ಪಾಟೀಲ,ಜಿ.ಜಿ.ವಣಿಕ್ಯಾಳ,ಸಿ.ಎಸ್.ಮಾಲಿಪಾಟೀಲ್, ಪ್ರಶಾಂತ ತಂಬೂರಿ, ವಿಜಯಾ ದಂಡೋತಿ, ಪ್ರಶಾಂತ ತಂಬೂರಿ,ಗುರು ಮುಕರಂಬಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…