ಕಲಬುರಗಿ: ಸೇಡಂ ರಾಜಶ್ರೀ ಸಿಮೆಂಟ್ ಕಂಪನಿಯವರು ಸರ್ಕಾರಿ ಜಮೀನಿಗೆ ನೀಡಿದ ಬೆಲೆಯಂತೆ ಬಡ ರೈತರ ಪ್ರತಿ ಎಕರೆಗೆ 8 ಲಕ್ಷ ರೂ. ಕೊಡುವಂತೆ ಒತ್ತಾಯಿಸಿ ಸಂಸದ ಡಾ. ಉಮೇಶ ಜಾಧವ ಹಾಗೂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ್ ಮನೆ ಎದುರು ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಹಿರಿಯ ಕಾರ್ಮಿಕ ಮುಖಂಡ ಎಸ್.ಕೆ. ಕಾಂತಾ ತಿಳಿಸಿದರು.
ಡಾ. ಸರೋಜಿನಿ ಮಹಿಷಿ ವರದಿ ಆಧಾರದ ಮೇಲೆ ಸರ್ಕಾರ ನೀಡಿದ ಆದೇಶದಂತೆ ಭೂಮಿ ಕಳೆದುಕೊಂಡ ಪ್ರತಿ ರೈತರ ಕುಟುಂಬಕ್ಕೆ ಒಬ್ಬರಿಗೆ ಕಾಯಂ ಉದ್ಯೋಗ ಕಂಪನಿಯಲ್ಲಿ ನೀಡಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಒತ್ತಾಯಿಸಿದರು.
ಸರ್ಕಾರದ ನಿಯಮದಂತೆ ಭೂಮಿ ಕಳೆದುಕೊಂಡ ಎಲ್ಲ ರೈತರಿಗೆ ಮೂಲಸೌಕರ್ಯ ಕಲ್ಪಿಸಬೇಕು, ತಮ್ಮ ಬೇಡಿಕೆಗೆ ಆಗ್ರಹಿಸಿ ಧರಣಿ ನಡೆಸಿದ ಹಲವು ರೈತರಲ್ಲಿ ಈಗಾಗಲೇ 22 ಜನ ಪ್ರಾಣ ಕಳೆದುಕೊಂಡಿದ್ದು, ಆ ಕುಟುಂಬಗಳಿಗೆ ಕನಿಷ್ಠ 10 ಲಕ್ಷ ರೂ. ಪರಿಹಾರಧನ ನೀಡಲು ಆದೇಶಿಸಬೇಕು ಎಂದು ಆಗ್ರಹಿಸಿದರು.
ರೈತರ ನ್ಯಾಯಯುತ ಬೇಡಿಕೆಗಳಿಗೆ ಆಗ್ರಹಿಸಿ 2015ರಿಂದ ಹೋರಾಟ ನಡೆಸುತ್ತಿದ್ದರೂ ಈವರೆಗೆ ಯಾವುದೇ ಪಕ್ಷದ ರಾಜಕೀಯ ನಾಯಕರಾಗಲಿ ಇಲ್ಲವೇ ಅಧಿಕಾರಿ ವರ್ಗದವರಾಗಲಿ ಯಾರೊಬ್ಬರೂ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ದೂರಿದರು.
ಆಗ ಸಿಎಂ ಆಗಿದ್ದ ಸಿದ್ದರಾಮಯ್ಯ, ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ ಮುಂತಾದವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಲಾಗಿತ್ತು. ಇನ್ನೇನೂ ಸೂಕ್ತ ರೀತಿಯಲ್ಲಿ ಅವರಿಂದ ಸ್ಪಂದನೆ ಸಿಗುತ್ತದೆ ಎನ್ನುವಷ್ಟರಲ್ಲಿ ಸರ್ಕಾರದ ಅವಧಿ ಮುಗಿಯಿತು. ಈಗಿನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ಈ ಸಂಬಂಧ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಅವರು ಜಿಲ್ಲಾಧಿಕಾರಿಗೆ ಸೂಚಿಸಿದ್ದರು. ಆದರೆ ಈವರೆಗೆ ಸೂಕ್ತ ಸ್ಪಂದನೆ ಸಿಕ್ಕಿರುವುದಿಲ್ಲ ಎಂದು ಆರೋಪಿಸಿದರು.
ಭೂಮಿ ಕಳೆದುಕೊಂಡ ರೈತರ ಬೇಡಿಕೆಗಳನ್ನು ಈಡೇರಿಸದ ಶಾಸಕ, ಸಂಸದರು ರೈತರಿಗೆ ಸೂಕ್ತ ಪರಿಹಾರಧನ ಒದಗಿಸದೆ ಕೇವಲ ಸ್ವ ಹಿತಾಸಕ್ತಿ ಹಾಗೂ ಉದ್ಯಮಿಗಳ ಮನವೊಲಿಸುತ್ತಿದ್ದು, ರೈತರ ಹಿತಾಸಕ್ತಿ ಕಾಪಡುವಲ್ಲಿ ವಿಫಲರಾಗಿದ್ದಾರೆ ಎಂದು ವಿವರಿಸಿದರು.
ಚಂದ್ರಶೇಖರ ಕಟ್ಟಿಮನಿ, ಉಮೇಶ ಚವ್ಹಣ, ಜಗನ್ನಾಥ ಹಂಗನಳಿ, ಪಾರ್ವತಿ ಹಂಗನಳ್ಳಿ, ಭೀಮವ್ವ ಜಮಾದಾರ, ಸಿದ್ದಮ್ಮ ಊಡಗಿ, ನಾಗಪ್ಪ ಕುಂಬಾರ, ರಾಮು ಎಸ್. ಪವಾರ್ ಮತ್ತಿತರರಿದ್ದರು.
ನಾವು ಆಸ್ತಿ ಕಳಕೊಂಡು ಕುಂತೀವ್ರಿ ಯಪ್ಪಾ, ಜಮೀನು ಕಳಕೊಂಡ ನಮಗ ಹೆಚ್ಚಿನ ಪರಿಹಾರ ಕೊಡ್ರಿ ಎಂದು ಸ್ಟ್ರೈಕ್ ಮಾಡಿ ಬಾಳ ಜನ ಸತ್ತೋಗ್ಯಾರ. ನೀವಾದ್ರೂ ಸ್ವಲ್ಪ ಸಹಾಯ ಮಾಡಿ ಪುಣ್ಯ ಕಟ್ಕೊಳ್ಳಿ. -ಪಾರ್ವತಿ ಹಂಗನಳ್ಳಿ, ಜಮೀನು ಕಳೆದುಕೊಂಡ ಮಹಿಳೆ
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…