ಕಾರ್ಮಿಕ ಇಲಾಖೆಯ ಭ್ರಷ್ಟ ಅಧಿಕಾರಿಗಳ ಪದಚ್ಯುತಿಗೆ ಸಂಘ ಆಗ್ರಹ

ಕಲಬುರಗಿ: ಕಾರ್ಮಿಕ ಇಲಾಖೆಯಲ್ಲಿ ನಡೆಯುತ್ತಿರುವ ಬ್ರಷ್ಟಾಚಾರ ಮತ್ತು ವ್ಯವಹಾರದ ಬಗ್ಗೆ ಸೂಕ್ತ ತನಿಖೆಗೆ ಒಳಪಡಿಸಿ ಭ್ರಷ್ಟಚಾರದಲ್ಲಿ ತೊಡಗಿರುವ ಅಧಿಕಾರಿಗಳನ್ನು ಪದಚ್ಯುತಿಗೆ ಆಗ್ರಹಿಸಿ ಬಡ ಕಾರ್ಮಿಕರಿಗೆ ನ್ಯಾಯ ಸೇರಿದಂತೆ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವ ಕಲ್ಯಾಣ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ದೂರಿ ನೀಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸುಂಬಡ, ಮಂಜುನಾಥ, ಶ್ರೀಹರಿ ದೇಶಪಾಂಡೆ, ದಿಲೀಪಕುಮಾರ, ಸಂತೋಶ, ಸುರೇಶ ಕೂಡಿ, ದಿಗಂಬರ ಕೂಡಿ, ಬಸವರಾಜ ಕಲಶೆಟ್ಟಿ, ಪರಶುರಾಮ, ರವಿಕುಮಾರ ಈ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು 2012 ರಿಂದ ಕಾರ್ಮಿಕ ಇಲಾಖೆಯಲ್ಲಿ ಕಟ್ಟಡ ಕಾರ್ಮಿಕ ಫಲಾನುಭವಿಗಳಿಗೆ ಮದುವೆ ಸಹಾಧನ ಹೆರಿಗೆ ಸಹಾಯಧನ, ಮರಣ ಸಹಾಯಧನ ಮತ್ತು ಶೈಕ್ಷಣಿಕ ಸಹಾಯಧನ ಅರ್ಜಿಗಳ ಮಂಜೂರಾತಿಗಾಗಿ ಫಲಾನುಭವಿಗಳಿಂದ ಹಣ ಪಡೆದುಕೊಳ್ಳುತ್ತಿದ್ದಾರೆಂದು ದೂರಿನಲ್ಲಿ ಸಂಘ ಆರೋಪಿಸಿದೆ.

ಕೋವಿಡ್-19 ಸಂಧರ್ಬದಲ್ಲಿ ಕಟ್ಟಡ ಕಾರ್ಮಿಕರ ಫಲಾನುಭವಿಗಳಿಗೆ ಪರಿಹಾರ ಮೊತ್ತವನ್ನು 5 ಸಾವಿರ ಮತ್ತು 3 ಸಾವಿರ ಹಣವನ್ನು ಕೊಡುತ್ತಿರುವ ಸಮಯದಲ್ಲಿ ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆ ಮಾಡಲು ಲಕ್ಷಾಂತರ ಹಣವನ್ನು ಬ್ರೋಕರ್‍ಗಳ ಮೂಲಕ ಹಣವನ್ನು ಪಡೆದುಕೊಂಡಿರುತ್ತಾರೆ ಎಂದು ಸಂಘದ ಅಧ್ಯಕ್ಷ ಭೀಮರಾಯ ಎಂ ಕಂದಳ್ಳಿ ಸೇರಿದಂತೆ ಕಾರ್ಮಿಕರು ಆರೋಪಿಸಿದ್ದಾರೆ.

ಸೂಕ್ತ ಮಾಹಿತಿ ನೀಡುವಂತೆ ಮತ್ತು 2013 ರಿಂದ ಇಲ್ಲಿಯ ತನಕ ಆಫ್‍ಲೈನ್ ಮತ್ತು ಆನ್‍ಲೈನ್ ಅರ್ಜಿಗಳ ದಾಖಲೆಗಳನ್ನು ಲೋಕಾಯುಕ್ತರ ತನಿಕೆಗೆ ಒಳಪಡಿಸಬೆಕಾಗಿ ಕಾರ್ಮಿಕರ ಕಛೇರಿ ಎದುರು ಹೋರಾಟ ಹಮ್ಮಿಕೊಳ್ಳಲಾಗಿತ್ತು. ಆದರೆ ಯಾವ ಅಧಕಾರಿಯೂ ಸಹ ಇಲ್ಲಿಯವರೆಗೆ ಯಾವ ವಿಷಯ ಕುರಿತು ಸಹ ಸೂಕ್ತ ಕ್ರಮ ಮತ್ತು ಮಾಹಿತಿ ನೀಡಿದೇ ಅವ್ಯವಹಾರಕ್ಕೆ ಕುಮಕ್ಕು ನೀಡುತ್ತಿದ್ದಾರೆ ಎಂದು ದುರಿದ್ದಾರೆ.

ಇಲಾಖೆಯಲ್ಲಿ ಅವ್ಯವಹಾರ ತಡೆಯುವಲ್ಲಿ ಜಿಲ್ಲಾಡಳಿತ ವಿಫಲವಾದರೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಮುತ್ತಿಗೆ ಹಾಕಲಾಗುವುದೆಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಿವಕುಮಾರ ಎಸ್ ಬೆಳಗೇರಿ, ಮಹಾಂತೇಶ ದೊಡ್ಡಮನಿ, ಖಜಾಂಚಿ ದೇವಿಂದ್ರ ಎಸ್. ಉಳಗಡ್ಡಿ, ಬಾಬುರಾವ ದೇವರಮನಿ, ಶರಣು ಮಾಡಬೂಳ ಸೇರಿದಂತೆ ಹಲವರು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

3 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

6 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

6 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

6 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420