ಬಿಸಿ ಬಿಸಿ ಸುದ್ದಿ

ವಚನಗಳ ಮೂಲಕ ಸಮಾಜ ತಿದ್ದಿದ ಮಹಾನ್ ಪುರುಷ ಸರ್ವಜ್ಞ-ಸುಬ್ಬಣ್ಣ

ಸುರಪುರ:ತಾಲೂಕು ಆಡಳಿತದ ವತಿಯಿಂದ ನಗರದ ತಹಸೀಲ್ದಾರ್ ಕಚೇರಿಯಲ್ಲಿ ತ್ರಿಪದಿಯ ವಚನಕಾರ ಸರ್ವಜ್ಞನ ಜಯಂತಿ ಆಚರಿಸಲಾಯಿತು.ಮೊದಲಿಗೆ ಸರ್ವಜ್ಞನ ಬಾವಚಿತ್ರಕ್ಕೆ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ವಂದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸುಬ್ಬಣ್ಣ ಜಮಖಂಡಿ,ಸರ್ವಜ್ಞನ ವಚನಗಳು ಮೂರು ಸಾಲಿನಲ್ಲಿದ್ದರು ಮೂರು ಸಾಲಿನ ವಚನಗಳಿಂದ ಮಾನವ ಸಮಾಜವನ್ನು ತಿದ್ದಿದ ಮಹಾನ್ ಪುರುಷರಾಗಿದ್ದಾರೆ.ವಿದ್ಯೆ ಕಲಿಸದ ತಂದೆ ಬುದ್ಧಿ ಹೇಳದ ಗುರು ಬಿದ್ದಿರಲು ಬಂದು ನೋಡದಾ ತಾಯಿ ಶುದ್ಧ ವೈರಿಗಳು ಸರ್ವಜ್ಞ ಎನ್ನುವ ಸಾಲುಗಳು ಅಗಾಧವಾದ ಅರ್ಥವನ್ನು ಹೊಂದಿವೆ.ಇಂತಹ ಅಸಂಖ್ಯಾತ ವಚನಗಳನ್ನು ಬರೆದವರು ಎಂದರು.

ಅಂತಹ ಸರ್ವಜ್ಞ ಕುಂಬಾರ ಜನಾಂಗದವರು ಎಂದು ತಿಳಿದಿರಲಿಲ್ಲ ಕುಂಬಾರ ಸಮಾಜ ಸ್ವಾಭಿಮಾನಿ ಸಮಾಜ ತಮ್ಮ ದುಡಿಮೆಯನ್ನೆ ನಂಬಿ ಬದುಕುವ ಸಮಾಜವಾಗಿದೆ,ಆದರೆ ಇಂದು ಆಧುನಿಕತೆಯ ಭರಾಟೆಯಲ್ಲಿ ಕುಂಬಾರಿಕೆ ಸಂಕಷ್ಟಕ್ಕೆ ಸಿಲುಕಿದೆ,ಕುಂಬಾರ ಸಮಾಜದವರು ಕುಲ ಕಸುಬಿನ ಜೊತೆಗೆ ತಮ್ಮ ಮಕ್ಕಳಿಗೆ ಉತ್ತಮವಾದ ವಿದ್ಯಾಭ್ಯಾಸ ಕೊಡಿಸುವಂತೆ ಸಲಹೆ ನೀಡಿದರು.

ತಾಲೂಕು ಕುಂಬಾರ ಸಂಘದ ಅಧ್ಯಕ್ಷ ರಾಜು ಕುಂಬಾರ ಮಾತನಾಡಿ,ತಮ್ಮ ತ್ರಿಪದಿಗಳ ಮೂಲಕ ಜಗತ್ತಿಗೆ ಚಿರಪರಿಚಿತರಾಗಿರುವ ಕುಲ ತಿಲಕ ಸರ್ವಜ್ಞರ ಜಯಂತಿ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ.ಮುಂಬರುವ ದಿನಗಳಲ್ಲಿ ಅದ್ಧೂರಿಯಾಗಿ ಜಯಂತಿ ಆಚರಣೆಗೆ ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ಮಾಜಿ ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಸೂಗುರೇಶ ವಾರದ,ತಾಲೂಕು ಕುಂಬಾರ ಸಂಘದ ಪದಾಧಿಕಾರಿಗಳಾದ ದೊಡ್ಡ ಈರಣ್ಣ ಕುಂಬಾರ, ಸಾಹೇಬಗೌಡ ಕುಂಬಾರ,ಭೀಮರಾಯ ಕುಂಬಾರಪೇಟೆ,ಅಮರೇಶ ಕುಂಬಾರ,ವೀರಭದ್ರಪ್ಪ ಕುಂಬಾರ,ನಿಂಗಣ್ಣ ವಡಗೇರಿ,ಆದಪ್ಪ ಕುಂಬಾರ,ದೊಡ್ಡ ಆದಪ್ಪ ಕುಂಬಾರ,ಅಂಬ್ರೇಶ ಕುಂಬಾರ,ಶಿವುಪುತ್ರ ಕುಂಬಾರ,ರವಿಕುಮಾರ ಕುಂಬಾರಪೇಟೆ,ಈರಪ್ಪ ಮಲ್ಲಾ ಸೇರಿದಂತೆ ಅನೇಕರು ಭಾಗವಹಿಸಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

9 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

9 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

9 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

9 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

10 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

11 hours ago