ಶಿವಾಜಿಯವರ ಧೈರ್ಯ, ಶೌರ್ಯ ಯುವಕರಿಗೆ ಸ್ಪೂರ್ತಿ

ಕಲಬುರಗಿ:ಶಹಬಾದ ನಗರದ ಸುರಕ್ಷಾ ಸೌಹಾರ್ದ ಪತ್ತಿನ ಸಹಕಾರಿ ಸಂಘದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಹಾಬಾದ ನಗರದ ಸುರಕ್ಷಾ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಡಾ.ಅಹ್ಮದ್ ಪಟೇಲ್ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ,ಶೌರ್ಯ ಮತ್ತು ಸಾಹಸ ಇಂದಿನ ಯುವಕರಿಗೆ ಸ್ಪೂರ್ತಿ. ಜೀಜಾಬಾಯಿ ಅವರು ಶಿವಾಜಿ ಮಹಾರಾಜರಿಗೆ ಚಿಕ್ಕಂದಿನಲ್ಲೆರಾಮಾಯಣ, ಮಹಾಭಾರತದ ಕಥೆಗಳು, ದೇಶಕಟ್ಟುವಲ್ಲಿ ಹೋರಾಡಿದ ಮಹಾಪುರುಷರ ಜೀವನ ಸಾಧನೆಗಳನ್ನು ಹೇಳಿ ಅವರಲ್ಲಿ ಆದರ್ಶಗಳನ್ನು ತುಂಬುತ್ತಿದ್ದರು. ಜೀಜಾಬಾಯಿಯವರಂತೆ ನಮ್ಮ ಮಕ್ಕಳಿಗೆ ಉತ್ತಮ ಜೀವನ ಮೌಲ್ಯಗಳನ್ನು ಹೇಳಿಕೊಡಬೇಕು. ಶಿವಾಜಿಯವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಶಹಾಬಾದ ನಗರಸಭೆಯ ನಾಮನಿರ್ದೇಶಿತ ಸದಸ್ಯ ದತ್ತಾ ಫಂಡ್ ಹಾಗೂ ನಿಂಗಣ್ಣ ಸಂಗಾವಿಕರ್ ಮಾತನಾಡಿ, ಶಿವಾಜಿ ಮಹಾರಾಜರು ಹೊಂದಿದ್ದ ಹೋರಾಟ ಮನೋಭಾವ, ತೋರಿದ ಧೈರ್ಯ, ಶೌರ್ಯ ಯುವಕರಿಗೆ ಸ್ಪೂರ್ತಿಯಾಗಿದೆ.ರಾಷ್ಟ್ರವನ್ನು ಪರಕೀಯರ ಆಡಳಿತದಿಂದ ಮುಕ್ತಗೊಳಿಸಿ ರಕ್ಷಿಸುವಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅಪಾರವಾದದಾಗಿದೆ. ಇಂತಹ ಮಹಾನ್ ವ್ಯಕ್ತಿಯು ಯಾವುದೇ ಒಂದು ಜನಾಂಗಕ್ಕೆ ಮಾತ್ರ ಸೀಮಿತಗೊಳ್ಳದೆ ರಾಷ್ಟ್ರನಾಯಕರಾಗಿ ಧರ್ಮ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿ ತ್ಯಾಗ, ಬಲಿದಾನದ ಪರಿಣಾಮವಾಗಿ ಇಂದು ಸಮಾಜದಲ್ಲಿ ಜನರು ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗಿದೆ ಎಂದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಮರಾಠಾ ಸಮಾಜದ ಯುವಕರು ಹಾಜರಿದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

11 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

11 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

11 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

11 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

12 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420