ಕಲಬುರಗಿ:ತ್ರಿಕಾಲ ಜ್ಞಾನಿಯಾಗಿ,ವಾಸ್ತವಿಕೆ ಅರಿತು,ತ್ರಿಪದಿಗಳ ಮೂಲಕ ಕಂಡ ಸತ್ಯವನ್ನು ನೇರ ಮತ್ತು ನಿಷ್ಠುರವಾಗಿ ಹೇಳಿ ಸಮಾಜಕ್ಕೆ ಮಾರ್ಗದರ್ಶನ ನೀಡುವ ಮೂಲಕ ವರಕವಿ ಸರ್ವಜ್ಞ ಇಂದಿಗೂ ಅಜರಾಮರವಾಗಿದ್ದಾರೆ ಎಂದು ಗ್ರೇಡ್ -2 ತಹಸೀಲ್ದಾರ ಗುರುರಾಜ ಸಂಗಾವಿ ಹೇಳಿದರು.
ಅವರು ಶಹಾಬಾದ ನಗರದ ತಹಸೀಲ್ದಾರ ಕಛೇರಿಯಲ್ಲಿ ಮಂಗಳವಾರ ಕುಂಬಾರ ಸಮಾಜದ ಹಾಗೂ ಕಂದಾಯ ಇಲಾಖೆ ವತಿಯಿಂದ ಆಯೋಜಿಸಲಾದ ಸರ್ವಜ್ಞ ಜಯಂತಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ನಾಡಿನೆಲ್ಲಡೆ ಸಂಚರಿಸಿ ಎಲ್ಲಾ ಕ್ಷೇತ್ರಗಳಲ್ಲಿ ಕಂಡ ಸತ್ಯವನ್ನು ನೇರವಾಗಿ ಹೇಳುವ ಮೂಲಕ ಸಮಾಜಕ್ಕೆ ಎಚ್ಚರಿಕೆ ನೀಡಿದ್ದಾರೆ. ವಿದ್ಯೆ,ಜಾತಿ,ಕೃಷಿ,ಮಾತು,ದುಶ್ಚಟಗಳ ಕುರಿತು ವಚನಗಳ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.ಆದರೆ ಇಂದು ಗುಟಕಾ,ತಂಬಾಕು ಹಾಗೂ ಕುಡಿತ ಮೋಜಿಗೆ ಜನರು ಬಲಿಯಾಗುತ್ತಿದ್ದಾರೆ.ಆದ್ದರಿಂದ ಸರ್ವಜ್ಞನ ವಚನಗಳ ಸಾರಾಂಶವನ್ನು ಪ್ರತಿಯೊಬ್ಬರೂ ತಿಳಿದುಕೊಂಡು ನಡೆದರೆ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು.
ತಹಸೀಲ್ದಾರ ಕಚೇರಿಯ ಸಿಬ್ಬಂದಿ ವರ್ಗ, ಕುಂಬಾರ ಸಮಾಜದ ತಾಲೂಕಾ ಅಧ್ಯಕ್ಷ ತಿಪ್ಪಣ್ಣ ಕುಂಬಾರ, ಭಂಕೂರ ಗ್ರಾಮದ ಕುಂಬಾರ ಸಮಾಜದ ಅಧ್ಯಕ್ಷ ಸಿದ್ದಪ್ಪ ಕುಂಬಾರ ಸೇರಿದಂತೆ ಸಮಾಜದ ಅನೇಕ ಜನರು ಹಾಜರಿದ್ದರು.
ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…
ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…