ಎಳೆಯ ಮನಸ್ಸುಗಳಿಗೆ ಎಂದಿಗಿಂತಲೂ ಇಂದು ಸಂಸ್ಕಾರದ ಅಗತ್ಯವಿದೆ; ಜಯಶ್ರೀ ಮತ್ತಿಮಡು

ಕಲಬುರಗಿ: ಮಕ್ಕಳ ಎಲ್ಲೆಲ್ಲೂ ಮೊಬೈಲ್‍ಗಳು ಹರಿದಾಡುತ್ತಿರುವಾಗ, ಟಿವಿಯ ಧಾರಾವಾಹಿಗಳು ಮನಸ್ಸನ್ನು ಕೆಡಿಸುತ್ತಿರುವಾಗ ಎಳೆಯ ಮನಸ್ಸುಗಳಿಗೆ ಎಂದಿಗಿಂತಲೂ ಇಂದು ಸಂಸ್ಕಾರ ಬಹಳ ಅಗತ್ಯವಿದೆ ಎಂದು ಬಿಜೆಪಿ ಮುಖಂಡೆ ಜಯಶ್ರೀ ಬಸವರಾಜ ಮತ್ತಿಮಡು ಹೇಳಿದರು.

ಅವರು ಶಹಾಬಾದ ತಾಲೂಕಿನ ತೊನಸನಹಳ್ಳಿ(ಎಸ್) ಗ್ರಾಮದ ಕಾಶಿ ವಿಶ್ವನಾಥ ಟ್ರಸ್ಟ್, ಶಿವಸಾಯಿ ಪೀಠ ಮತ್ತು ಶ್ರೀ ಶರಣ ಗ್ರಾಮೀಣ ಅಭಿವೃದ್ಧಿ ಶಿಕ್ಷಣ ಸಂಸ್ಥೆ ಅಡಿಯಲ್ಲಿ ಮಹಾಶಿವರಾತ್ರಿ ಜಾಗರಣೆ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದರು.

ಶ್ರೀ ಶರಣ ಗ್ರಾಮೀಣ ಅಭಿವೃದ್ಧಿ ಶಿಕ್ಷಣ ಸಂಸ್ಥೆ ಅಡಿಯ ಕೊತ್ತಲಪ್ಪ ಮುತ್ಯಾ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ಹೇಳಿಕೊಟ್ಟು ಬದುಕನ್ನು ಪ್ರೀತಿ ವಿಶ್ವಾಸಗಳಿಂದ ಸುಂದರಗೊಳಿಸುವ ಪ್ರಕ್ರಿಯೆಯನ್ನು ಹೇಳಿಕೊಡುತ್ತಿರುವುದು ಶ್ಲಾಘನೀಯವಾದುದು ಎಂದರು.

ಈ ಕಂಪ್ಯೂಟರ್ ಯುಗದಲ್ಲಿ ಹೆಚ್ಚು ಗಳಿಸಬೇಕೆನ್ನುವ ಭರದಲ್ಲಿ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದೆವೆ. ಮಕ್ಕಳಿಗೂ ಒಳ್ಳೆಯ ಸಂಸ್ಕಾರ ಕೊರತೆಯಿಂದ ಸಮಾಜ ಅಧಃಪತನದತ್ತ ಸಾಗುತ್ತ ಹೊರಟಿದೆ.ಆದ್ದರಿಂದ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಿದರೆ ಸುಂದರ ಸಮಾಜವನ್ನು ನಿರ್ಮಾಣವಾಗುತ್ತದೆ.ಆ ನಿಟ್ಟಿನಲ್ಲಿ ಕೊತ್ತಲಪ್ಪ ಮುತ್ಯಾ ಅವರು ಶಾಲೆಯ ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ನೀಡುತ್ತಿರುವುದು ಉತ್ತಮ ಕೆಲಸವಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಮಾತನಾಡಿದ ವಿಜಯಕುಮಾರ ಹಂಚಿನಾಳ, ಶಾಲೆ ಎನ್ನುವುದು ನೆಲದ ಮೇಲಿನ ಮರದಂತೆ ಇದ್ದರೆ, ಸಂಸ್ಕಾರ ಎನ್ನುವುದು ನೆಲದ ಆಳದಲ್ಲಿರುವ ಮರದ ಬೇರಿನಂತೆ ಇರುತ್ತದೆ.ಬದುಕು ಸುಂದರವಾಗಿರಬೇಕೆಂದರೆ ಬದುಕಿನಲ್ಲಿ ಸಂಸ್ಕಾರ ಅಳವಡಿಸಿಕೊಳ್ಳೇಬೇಕು. ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಲೇಬೇಕು. ಪರಿಮಳ ಸೂಸುವ ಹೂವು ಅರಳಿದಾಗ ಅದನ್ನು ಪ್ರತಿಯೊಬ್ಬರೂ ಇಷ್ಟಪಡುತ್ತಾರೆ.ಪರಿಮಳವಿಲ್ಲದ ಹೂವು ಯಾರಿಗೂ ಇಷ್ಟವಾಗುವುದಿಲ್ಲ. ಹಾಗೆಯೇ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯೆಯ ಜತೆಗೆ ಸಂಸ್ಕಾರ ಇದ್ದರೇ ಎಲ್ಲರೂ ಆ ಶಾಲೆಯನ್ನು ಇಷ್ಟಪಡುತ್ತಾರೆ ಹಾಗೂ ಗೌರವಿಸುತ್ತಾರೆ.ಅಂತಹ ಉತ್ತಮ ಶಾಲೆ ಶರಣ ಗ್ರಾಮೀಣ ಅಭಿವೃದ್ಧಿ ಶಿಕ್ಷಣ ಸಂಸ್ಥೆ ನಡೆಸುತ್ತಿದೆ ಎಂದರು.

ಕೋಲಿ ಸಮಾಜದ ಮುಖಂಡ ಬಸವರಾಜ ಬೂದಿಹಾಳ ಮಾತನಾಡಿದರು.ಸಂಸ್ಥೆಯ ಅಧ್ಯಕ್ಷರಾದ ಕೊತ್ತಲಪ್ಪ ಮುತ್ಯಾ ಅಧ್ಯಕ್ಷತೆ ವಹಿಸಿದ್ದರು. ಹೂಗಾರ ಸಮಾಜದ ಶ್ರೀಗಳು, ಅಂಬಿಗರ ಚೌಡಯ್ಯ ನಿಗಮದ ನಿರ್ದೇಶಕ ನಿಂಗಣ್ಣ ಹುಳಗೋಳಕರ್,ರಾಜಶೇಖರ ಮಾಲಿ ಪಾಟೀಲ,ಮಲ್ಲುಗೌಡ ಬುಟ್ನಾಳ, ಡಾ.ಸರ್ದಾರ ರಾಯಪ್ಪ,ಗ್ರಾಪಂ ಅಧ್ಯಕ್ಷೆ ಕಾವೇರಿ ಮಹಾಲಿಂಗ ಪೂಜಾರಿ, ಬಿಜೆಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಭಾಗಿರಥಿ ಗುನ್ನಾಪೂರ,ಶಾಂತಮಲ್ಲ ಶಿವಭೋ, ಗ್ರಾಮದ ಮುಖಂಡ ಮಹಾದೇವ ಬಂದಳ್ಳಿ, ಗ್ರಾಮದ ಮುಖಂಡರಾದ ಬಸವರಾಜ ಮದ್ರಿಕಿ, ಬೆಳಪ್ಪ ಖಣದಾಳ, ಸಿದ್ದು ಖಣದಾಳ,ಮಹಾದೇವಿ ಗೊಬ್ಬೂರ್,ರೇವಣಸಿದ್ದಪ್ಪ ಕೆಲ್ಲೂರ್, ಅಂಬರೀಷ ಬಂಗಾರಶೆಟ್ಟಿ, ಸೇರಿದಂತೆ ಮಕ್ಕಳು, ಪಾಲಕರು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು.

emedialine

Recent Posts

ಕೋಲಿ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿ ಪೂರ್ಣಗೊಂಡಿದ್ದರಿಂದ ನೂತನ ಪದಾಧಿಕಾರಿಗಳ ಆಯ್ಕೆಗೆ…

51 mins ago

ನೂತನ ಪದಾಧಿಕಾರಿಗಳ ಪದಗೃಹಣ, ಅಭಿನಂದನಾ ಸಮಾರಂಭ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಚಿತ್ತಾಪುರ ತಾಲೂಕಿನ…

2 hours ago

ಕೆಬಿಎನ ಆಸ್ಪತ್ರೆಯಲ್ಲಿ ಉಚಿತ ಇಸಿಜಿ ತಪಾಸಣೆ

ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…

3 hours ago

ವಿದ್ಯಾರ್ಥಿಗಳ ಕೌಶಲ್ಯ ಉತ್ತೇಜನ ಕಾರ್ಯಕ್ರಮ (Technical event)

ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್‌ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…

4 hours ago

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

17 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

17 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420