ಬಿಸಿ ಬಿಸಿ ಸುದ್ದಿ

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಚಿ. ದೊಡ್ಡಪ್ಪ ಅಪ್ಪ ಸ್ಕಾಲರ್‍ಶಿಪ್

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಶರಣಬಸವೇಶ್ವರ ರೆಸಿಡೆಂಟಲ್ ಕಾಂಪೋಸಿಟ್ ಪ್ರೀ ಯುನಿವರ್ಸಿಟಿ ಕಾಲೇಜಿನಲ್ಲಿ 2023-24ನೇ ಸಾಲಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ನಡೆಯಲಿದ್ದು, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು 2.5 ಕೋಟಿ ರೂ. ಮೌಲ್ಯದಷ್ಟು ಸ್ಕಾಲರ್‍ಶಿಪ್ ನೀಡಲು ಶರಣಬಸವೇಶ್ವರ ಮಹಾ ಸಂಸ್ತಾನದ 8ನೇ ಮಹಾದಾಸೋಹ ಪೀಠಾಧೀಪತಿ ಡಾ. ಶರಣಬಸಪ್ಪ ಅಪ್ಪ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ ಪರ್ಸ್‍ನ್ ಡಾ. ದಾಕ್ಷಾಯಣಿ ಅಪ್ಪ ಅವರು ಬಯಸಿದ್ದಾರೆ.

ಸಂಸ್ಥಾನದ 9ನೇ ಮಹಾದಾಸೋಹ ಪೀಠಾಧಿಪತಿ ಚಿರಂಜಿವಿ ದೊಡ್ಡಪ್ಪ ಅಪ್ಪ ಸ್ಕಾಲರ್‍ಶಿಪ್ ನೀಡಲಿದ್ದು, ಪ್ರವೇಶ ಪರೀಕ್ಷೆ ಆಧಾರದನ್ವಯ 90 ರ್ಯಾಂಕ್ ಪಡೆದ ವಿದ್ಯರ್ಥಿಗಳು ಈ ಸ್ಕಾಲರ್‍ಶಿಪ್ ಪಡೆಯಲಿದ್ದಾರೆ ಎಂದು ಮಾತೋಶ್ರೀ ಡಾ. ದಾಕ್ಷಾಯಣಿ ಎಸ್.ಅಪ್ಪ ಬುಧವರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪಿಯುಸಿ ದ್ವಿತೀಯ ವರ್ಷದಲ್ಲೂ ಸಹ ಇಡೀ ಪಿಯುಸಿ ಪ್ರಥಮ ವರ್ಷದ ಎಲ್ಲ ಪರೀಕ್ಷೆಗಳ ಅಂಕಗಳ ಆಧಾರದನ್ವಯ ಅಗ್ರ 90 ರ್ಯಾಂಕ್ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೂ ಈ ಸ್ಕಾಲರ್‍ಶಿಪ್ ನೀಡಲಾಗುವುದು. ಎಸ್‍ಎಸ್‍ಎಲ್‍ಸಿ (ಸ್ಟೇಟ್ ಬೋರ್ಡ್) ಗಣಿತ, ವಿಜ್ಞಾನ, ಹತ್ತನೇ ತರಗತಿ (ಸಿಬಿಎಸ್‍ಇ) ಗಣಿತ ಮತ್ತು ವಿಜ್ಞಾನ, ಐಸಿಎಸ್‍ಇ ವಿದ್ಯಾರ್ಥಿಗಳಿಗೆ ಸಿಬಿಎಸ್‍ಇ ಪಠ್ಯಕ್ರಮದಲ್ಲಿಯೇ ಪರೀಕ್ಷೆ ನಡೆಸಲಾಗುವುದು ಎಂದು ಅವರು ತಿಳಿಸಿದರು. ಡಾ. ಶರಣಬಸವಪ್ಪ ಅಪ್ಪ, ಚಿ. ದೊಡ್ಡಪ್ಪ ಅಪ್ಪ, ಬಸವರಾಜೇಂದ್ರ ದೇಶಮುಖ, ಶ್ರೀಶೈಲ ಹೂಗಾಡೆ, ಶಂಕರಗೌಡ ಹೊಸಮನಿ, ಚಂದ್ರಕಾಂತ ಪಾಟೀಲ ಇತರರಿದ್ದರು.

ಪ್ರವೇಶ ಪರೀಕ್ಷೆ ಪರೀಕ್ಷೆ ಯಾವಾಗ?; ಸಿಬಿಎಸ್‍ಇ/ ಐಸಿಎಸ್‍ಇ ವಿದ್ಯಾರ್ಥಿಗಳಿಗೆ ಮಾರ್ಚ್ 2ರಂದು ಮಧ್ಯಾಹ್ನ 1 ಗಂಟೆಯಿಂದ 3ರವರೆಗೆ, ಸ್ಟೇಟ್ ಬೋರ್ಡ್ ವಿದ್ಯಾರ್ಥಿಗಳಿಗೆ ಮಾರ್ಚ್ 23ರಂದು ಮಧ್ಯಾಹ್ನ 1 ಗಂಟೆಯಿಂದ 3ರವರೆಗೆ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯ ಅವಧಿ 120 ನಿಮಿಷಗಳಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಈ ಸ್ಕಾಲರ್‍ಶಿಪ್‍ನ ಸದುಪಯೋಗಪಡೆದುಕೊಳ್ಳಬೇಕು ಎಂದು ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ತಿಳಿಸಿದರು.

ಡಾ. ಶರಣಬಸವಪ್ಪ ಅಪ್ಪ ಅವರ ಮುಂದಾಲೋಚನೆ ಮತ್ತು ವಿಶಾಲ ದೃಷ್ಟಿಕೋನದಿಂದಾಗಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಇಂದು ರಾಷ್ಟ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಕೀರ್ತಿ ಸಂಪಾದಿಸಿದ್ದು, ಗುಣಮಟ್ಟದ ಶಿಕ್ಷಣ ನೀಡಿದ ಇಲ್ಲಿನ ಶಿಕ್ಷಕ ಮತ್ತು ಪ್ರಾಚಾರ್ಯರ ಶ್ರಮ ಸಾರ್ಥಕವಾಗಿದೆ. -ಡಾ. ದಾಕ್ಷಾಯಣಿ ಎಸ್. ಅಪ್ಪ, ಚೇರ್ ಪರ್ಸ್‍ನ್

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

1 hour ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

13 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

15 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

15 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

15 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

16 hours ago