ಕಲಬುರಗಿ: ಕನ್ನಡ ಭೂಮಿ ಜಾಗೃತಿ ಸಮಿತಿ ತನ್ನ 18 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಿಂಗರಾಜ ಸಿರಗಾಪೂರ ತಿಳಿಸಿದ್ದಾರೆ.
ಪ್ರಶಸ್ತಿಗೆ ಆಯ್ಕೆ ಮಾಡಲು ಸಮಿತಿ ರಚಿಸಲಾಗಿದೆ.ಆಯ್ಕೆ ಸಮಿತಿ ನಿರ್ಧಾರ ಅಂತಿಮವಾಗಿರುತ್ತದೆ. ಸಾಹಿತ್ಯ, ಶಿಕ್ಷಣ, ಸಂಗೀತ,ಕಲೆ,ಸಮಾಜ ಸೇವೆ, ಮಾಧ್ಯಮ, ಕೃಷಿ, ವೈದ್ಯಕೀಯ, ಹೋರಾಟ ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಾಧನೆ ಮಾಡಿದ ಸಾಧಕರನ್ನು ಗೌರವಿಸುವ ಮೂಲಕ ಪ್ರಶಸ್ತಿ ನೀಡಲಾಗುವುದು.ಪ್ರಶಸ್ತಿಯು ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ,ಪ್ರಶಂಸನಾ ಪತ್ರ ಹಾಗೂ ಕಂಚಿನ ಫಲಕವನ್ನು ಒಳಗೊಂಡಿರುತ್ತದೆ.ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಆಸಕ್ತ ಅರ್ಜಿದಾರರು ಸೂಕ್ತ ದಾಖಲೆಗಳೊಂದಿಗೆ ಮಾರ್ಚ್ 5 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಮೊ. 9481961505 ಸಂಖ್ಯೆಗೆ ಕರೆ ಮಾಡಲು ಪತ್ರಿಕಾ ಪ್ರಕಟಣೆ ಮೂಲಕ ಅವರು ಕೋರಿದ್ದಾರೆ.