ಕಲಬುರಗಿ: ಕನ್ನಡ ಭೂಮಿ ಜಾಗೃತಿ ಸಮಿತಿ ತನ್ನ 18 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಿಂಗರಾಜ ಸಿರಗಾಪೂರ ತಿಳಿಸಿದ್ದಾರೆ.
ಪ್ರಶಸ್ತಿಗೆ ಆಯ್ಕೆ ಮಾಡಲು ಸಮಿತಿ ರಚಿಸಲಾಗಿದೆ.ಆಯ್ಕೆ ಸಮಿತಿ ನಿರ್ಧಾರ ಅಂತಿಮವಾಗಿರುತ್ತದೆ. ಸಾಹಿತ್ಯ, ಶಿಕ್ಷಣ, ಸಂಗೀತ,ಕಲೆ,ಸಮಾಜ ಸೇವೆ, ಮಾಧ್ಯಮ, ಕೃಷಿ, ವೈದ್ಯಕೀಯ, ಹೋರಾಟ ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಾಧನೆ ಮಾಡಿದ ಸಾಧಕರನ್ನು ಗೌರವಿಸುವ ಮೂಲಕ ಪ್ರಶಸ್ತಿ ನೀಡಲಾಗುವುದು.ಪ್ರಶಸ್ತಿಯು ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ,ಪ್ರಶಂಸನಾ ಪತ್ರ ಹಾಗೂ ಕಂಚಿನ ಫಲಕವನ್ನು ಒಳಗೊಂಡಿರುತ್ತದೆ.ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಆಸಕ್ತ ಅರ್ಜಿದಾರರು ಸೂಕ್ತ ದಾಖಲೆಗಳೊಂದಿಗೆ ಮಾರ್ಚ್ 5 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಮೊ. 9481961505 ಸಂಖ್ಯೆಗೆ ಕರೆ ಮಾಡಲು ಪತ್ರಿಕಾ ಪ್ರಕಟಣೆ ಮೂಲಕ ಅವರು ಕೋರಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…