ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಳಂದ ತಾಲೂಕಿನ ಶ್ರೀಕ್ಷೇತ್ರ ಜಿಡಗಾದಲ್ಲಿ ಮಾರ್ಚ್ ಎರಡನೇ ವಾರದಲ್ಲಿ ಆಯೋಜಿಸಲು ನಿರ್ಧರಿಸಿರುವ ಕಲಬುರಗಿ ಜಿಲ್ಲಾ 19 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಜಿಲ್ಲಾಧಿಕಾರಿ ಯಶವಂತ ಗುರುಕರ್ ಅನಾವರಣಗೊಳಿಸಿದರು.
ಇಂದಿನ ಪೀಳಿಗೆ ನಮ್ಮ ನೆಲದ ಕಲೆ, ಸಾಹಿತ್ಯ ಮತ್ತು ಸಂಸ್ಕøತಿಯನ್ನು ಮೈಗೂಡಿಸಿಕೊಳ್ಳುವ ಮೂಲಕ ನಾಡಿನ ಪರಂಪರೆ ಹಾಗೂ ಕನ್ನಡ ಭಾಷೆಯನ್ನು ಮುಂದಿನ ಜನಾಂಗಕ್ಕೆ ಪರಿಚಯಿಸುವ ಕಾರ್ಯ ಮಾಡಬೇಕಾಗಿದೆ. ಈ ಸಮ್ಮೇಳನ ಗಡಿಭಾಗದ ಜಿಡಗಾದಲ್ಲಿ ಆಯೋಜಿಸಿದ್ದು ತುಂಬಾ ಅರ್ಥಪೂರ್ಣವಾದುದು ಎಂದರು.
ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಇಂದಿನ ಹೊಸ ಪೀಳಿಗೆ ನಮ್ಮ ನೆಲದ ಪರಂಪರೆಯ ವಾರಸುದಾರರಾಗಿ, ಕನ್ನಡತನವನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾಗಿದೆ. ಅಂದರೆ ಮಾತ್ರ ಕನ್ನಡದ ಉಳಿವು ಸಾಧ್ಯ. ಹಾಗಾಗಿ ನಮ್ಮ ಅವಧಿಯಲ್ಲಿ ಸಾಹಿತ್ಯ ಸಮ್ಮೇಳನಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹಮ್ಮಿಕೊಳ್ಳುವ ಮೂಲಕ ಹೊಸ ಸಮಾಜವನ್ನು ನಿರ್ಮಿಸುವ ಗುರಿ ಪರಿಷತ್ತು ಹೊಂದಿದೆ ಎಂದರು.
ಗ್ರಾಮೀಣ ಜನರ ಬದುಕಿನ ಚಿತ್ರಣವನ್ನು ಅನಾವರಣಗೊಳಿಸಿ ಬದುಕಿಗೆ ಸ್ಪೂರ್ತಿ ತುಂಬುವ ಕಾರ್ಯ ಪರಿಷತ್ತು ನಿರಂತರವಾಗಿ ಮಾಡುತ್ತಿದೆ ಎಂದು ಹೇಳಿದರು.
ಜಿಲ್ಲಾ ಕಸಾಪ ಕಾರ್ಯದರ್ಶಿ ಶಿವರಾಜ ಅಂಡಗಿ, ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ, ಪ್ರತಿನಿಧಿ-ಖ್ಯಾತ ಚಿತ್ರಕಲಾವಿದ ಡಾ ರೆಹಮಾನ್ ಪಟೇಲ್, ಚಿಂಚೋಳಿ ಅಧ್ಯಕ್ಷ ಸುರೇಶ ದೇಶಪಾಂಡೆ, ರಾಜೇಂದ್ರ ಮಾಡಬೂಳ, ಹಣಮಂತ ಶೇರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…