ಬಿಸಿ ಬಿಸಿ ಸುದ್ದಿ

ಜಾನಪದ ಕಲೆ, ಸಂಸ್ಕøತಿಯನ್ನು ಉಳಿಸಲು ಶ್ರಮಿಸೋಣ; ಪದ್ಮಶ್ರೀ ಡಾ.ಮಂಜಮ್ಮ ಜೋಗುತಿ

ಕಲಬುರಗಿ: ದೇಶದ ಮೂಲ ವಾರಸುದಾರರ ಸಂಸ್ಕøತಿ, ಪರಂಪರೆಯಾದ ಜಾನಪದ ಕಲೆ, ಸಂಸ್ಕøತಿ, ಪರಂಪರೆಯನ್ನು ಮರೆತರೆ ದೇಶದ ಭವ್ಯ ಪರಂಪರೆಗೆ ದಕ್ಕೆಯಿದೆ. ವಿದೇಶಿ ವ್ಯಾಮೋಹಕ್ಕೆ ಒಳಗಾಗದೆ, ನಮ್ಮತನವನ್ನು ಹೊಂದಿರುವ ದೇಶದ ಮೂಲ ಕಲೆ, ಪರಂಪರೆಯನ್ನು ಉಳಿಸಿ, ಮುಂದಿನ ಪೀಳಿಗೆಗೆ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಎಲ್ಲರಿಂದ ಜರುಗಬೇಕಾದದ್ದು ಇಂದಿನ ಅಗತ್ಯತೆಯಾಗಿದೆ ಎಂದು ಹಿರಿಯ ಜಾನಪದ ಕಲಾವಿದೆ ಪದ್ಮಶ್ರೀ ಡಾ.ಮಂಜಮ್ಮ ಜೋಗುತಿ ಹೇಳಿದರು.

ನಗರದ ಸಿದ್ದಾರ್ಥ ನಗರದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಜರುಗಿದ ಗೌರವ ಸತ್ಕಾರ ಕಾರ್ಯಕ್ರಮದಲ್ಲಿ ಸನ್ಮಾನವನ್ನು ಸ್ವೀಕರಿಸಿ ನಂತರ ಅವರು ಮಾತನಾಡಿದರು.

ಜಾನಪದ ಸಂಸ್ಕøತಿಯಲ್ಲಿ ಮಾನವೀಯ ಮೌಲ್ಯಗಳಿವೆ. ಇದರ ಅಳವಡಿಕೆಯಿಂದ ಜಾತಿ, ಧರ್ಮ, ಪ್ರದೇಶಗಳ ಆದಾರದ ಮೇಲೆ ನಾವಿಂದು ಕಾಣುತ್ತಿರುವ ತಾರತಮ್ಯ ನಿರ್ಮೂಲನೆಯಾಗಿ, ಭ್ರಾತೃತ್ವದ ಮೂಡುತ್ತದೆ. ದೇಶದ ಸಂಸ್ಕøತಿಯ ಶ್ರೀಮಂತಿಕೆಗೆ ಜನಪದರ ಕೊಡುಗೆ ಅಪಾರವಾಗಿದೆ. ಪ್ರಸ್ತುತ ದಿನಗಳಲ್ಲಿ ಜಾನಪದ ಸಂಸ್ಕøತಿ ಕಡಿಮೆಯಾಗುತ್ತಿದ್ದು, ಅದನ್ನು ಉಳಿಸಿ, ಬೆಳೆಸಿಕೊಂಡು ಹೋಗುವ ಜವಬ್ದಾರಿ ಎಲ್ಲರ ಮೇಲಿದೆ ಎಂದರು.

ಜಿಲ್ಲಾ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ.ಸುನೀಲಕುಮಾರ ಎಚ್.ವಂಟಿ ಮಾತನಾಡಿ, ನಾಡಿನ ಕಲೆ, ಸಂಸ್ಕøತಿ, ಪರಂಪರೆಗೆ ಡಾ.ಮಂಜಮ್ಮ ಜೋಗುತಿ ಅವರ ಕೊಡುಗೆ ಅನನ್ಯವಾಗಿದೆ. ಅವರಲ್ಲಿರುವ ಸಾಮಾಜಿಕ ಕಾಳಜಿ, ಕಳಕಳಿ ಶ್ಲಾಘನೀಯವಾಗಿದೆ ಎಂದರು.
ಬಸವೇಶ್ವರ ಸಮಾಜ ಸೇವಾ ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ, ಪ್ರಮುಖರಾದ ಎಸ್.ಬಿ.ಹರಿಕೃಷ್ಣ, ಕಸ್ತೂರಬಾಯಿ ಸಿಂದಬಂದಗಿ, ಲಲಿತಾ ಸಿಂದಬಂದಗಿ, ರವಿಕಿರಣ, ಚೇತನ, ಮಂಜುನಾಥ ಮರೆಮ್ಮನಳ್ಳಿ ಸೇರಿದಂತೆ ಇನ್ನಿತರರು ಇದ್ದರು.

emedialine

Recent Posts

ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರ ತೆಗೆದುಕೊಳ್ಳಿ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…

14 mins ago

ಅಖಿಲ ಭಾರತ ವೀ.ಲಿಂ ಮಹಾಸಭಾ ನೂತನ ಅಧ್ಯಕ್ಷ ನಿದೇರ್ಶಕರ ನೇಮಕ

ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…

18 mins ago

ಡೆಂಘೀ ವಿರೋಧಿ ಮಾಸಾಚರಣೆ | ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಯಾವ ಕಾಯಿಲೆ ಬರದು

ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…

20 mins ago

ಶಾಸಕ ಅಲ್ಲಮಫ್ರಬು ಪಾಟೀಲರಿಂದ ಕಂಪ್ಯೂಟರ್ ಪ್ರಮಾಣ ಪತ್ರ ವಿತರಣೆ

ಕಲಬುರಗಿ: ನಗರದ ಬಸವ ಸಿರಿ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಭಾನುವಾರ ಮುಂಜಾನೆ. 11 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷ ಮತ್ತು…

26 mins ago

ತೊಗರಿ ಮತ್ತು ಹತ್ತಿ ಬೆಳೆಗಳ ಸಸ್ಯ ಸಂರಕ್ಷಣಾ ತರಬೇತಿ 18ಕ್ಕೆ

ಕಲಬುರಗಿ; ಜಿಲ್ಲೆಯಲ್ಲಿ ಮುಂಗಾರು ಬೆಳೆಗಳಾದ ತೊಗರಿ, ಹತ್ತಿ, ಉದ್ದು, ಹೆಸರು ಮತ್ತು ಸೋಯಾಬಿನ್ ಬೆಳೆಯಲಾಗಿದ್ದು, ಇದರಲ್ಲಿ ಕಂಡು ಬರುವ ಹುಳು,…

43 mins ago

ಡೆಂಗ್ಯೂ ,ಝಿಕಾ, ಚಿಕನ್ ಗುನ್ಯಾ ತಡೆಗಟ್ಟಲು ಸರಕಾರಕ್ಕೆ ವೆಲ್ಫೇರ್ ಪಾರ್ಟಿ ಆಗ್ರಹ

  ಕಲಬುರಗಿ : "ಜಿಲ್ಲೆಯಲ್ಲಿ ಡೆಂಗಿ ಜ್ವರ ಹಾವಳಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಝಿಕಾ ವೈರಾಣು ಸೋಂಕು, ಚಿಕನ್ ಗುನ್ಯಾ…

1 hour ago