ಸುರಪುರ: ಕಡ್ಲಪ್ಪನವರ ಮಠದಲ್ಲಿ ಶರಣ ಚರಿತಾಮೃತ ಪ್ರವಚನಕ್ಕೆ ಚಾಲನೆ

ಸುರಪುರ: ಒತ್ತಡದ ಬದುಕಿನಲ್ಲಿ ಬದುಕುತ್ತಿರುವ ಮನುಷ್ಯ ಬದುಕಿನಲ್ಲಿ ನೆಮ್ಮದಿ ಕಾಣಬೇಕಾದರೆ ಹಾಗೂ ಮಾನವನ ಬದುಕು ಸಾಕಾರಗೊಳ್ಳಲು ಅಧ್ಯಾತ್ಮಕ ಅತ್ಯವಶ್ಯಕೆಂದು ಖೇಳಗಿಯ ಶಿವಲಿಂಗೇಶ್ವರ ಸಂಸ್ಥಾನದ ಮಠದ ಶಿವಲಿಂಗೇಶ್ವರ ಮಹಾಸ್ವಾಮಿಗಳು ಹೇಳಿದರು.

ನಗರದ ಕಬಾಡಗೇರಾ ಕಡ್ಲಪ್ಪನವರ ನಿಷ್ಠಿ ವಿರಕ್ತಮಠದಲ್ಲಿ ಲಿಂ.ಮಲ್ಲಿಕಾರ್ಜುನ ಮಹಾಸ್ವಾಮಿಗಳ 47ನೆ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮ ಪ್ರಯುಕ್ತ ಹಮ್ಮಿಕೊಳ್ಳಲಾಗಿರುವ ಶರಣ ಚರಿತಾಮೃತ ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಪುರಾಣ ಪ್ರಚನಗಳು ಮಾನವನ ಮನಸ್ಸನ್ನು ಶುದ್ಧೀಕರಿಸುವ ಸಾಧನಗಳಾಗಿವೆ ಇಂತಹ ಮಠಮಾನ್ಯಗಳಲ್ಲಿ ನಡೆಯುವ ಶರಣರ ಅಧ್ಯಾತ್ಮದ ಸಾಂಗತ್ಯದಿಂದ ಬದುಕಿನಲ್ಲಿ ಬರುವ ಒತ್ತಡ ಕಡಿಮೆ ಮಾಡಿಕೊಳ್ಳಲು ಸಹಕಾರಿ ಆಗುತ್ತದೆ ಭಕ್ತರ ಶ್ರೇಯೋಭಿವೃದ್ಧಿಗಾಗಿ ಶ್ರೀಮಠವು ನಿರಂತರವಾಗಿ ಶರಣರ ಪ್ರವಚನ ಏರ್ಪಡಿಸುತ್ತಾ ಬಂದಿರುವುದು ಸ್ತುತ್ಯಾರ್ಹವಾದದ್ದು ಎಂದು ಹೇಳಿದರು.

ಧಾರವಾಡದ ಶಿವಬಸವ ದೇವರು ಮಾತನಾಡಿ ಗುರು ಶಿಷ್ಯರ ಪರಂಪರೆಯಲ್ಲಿ ಸಂಸ್ಕಾರ ಪಡೆದುಕೊಳ್ಳುವದರಿಂದ ಯಶಸ್ವಿಯಾಗಿ ಜೀವನ ಸಾಗಿಸಬಹುದಾಗಿದೆ ಪ್ರವಚನವನ್ನು ಶ್ರವಣ ಮಾಡಿಕೊಳ್ಳುವ ಮೂಲಕ ಜೀವನವನ್ನು ಪಾವನವಾಗಿಸಿಕೊಳ್ಳಿ ಎಂದರು.
ಕೋಳೂರುದ ಮೃತ್ಯುಂಜಯ ದೇವರು ಹಾಗೂ ನೇತೃತ್ವ ವಹಿಸಿದ್ದ ಕಡ್ಲಪ್ಪನವರ ಮಠದ ಪೀಠಾಧಿಪತಿ ಪ್ರಭುಲಿಂಗ ಮಹಾಸ್ವಾಮಿಗಳು ಮಾತನಾಡಿದರು.

ಮಾ1 ವರೆಗೆ ನಡೆಯಲಿರುವ ಶರಣ ಚರಿತಾಮೃತ ಪ್ರವಚನವನ್ನು ಪ್ರವಚನಕಾರರಾದ ಶಿವಕುಮಾರಸ್ವಾಮಿ ಹಿರೇಮಠ ತಡಕಲ್(ಮಾನ್ವಿ) ಪ್ರವಚನ ನೆರವೇರಿಸಿಕೊಡಲಿದ್ದಾರೆ, ಕಸಾಪ ತಾಲೂಕು ಅಧ್ಯಕ್ಷ ಶರಣಬಸಪ್ಪ ಯಾಳವಾರ ಪ್ರಾಸ್ತಾವಿಕವಾಗಿ ಮಾತನಾಡಿದರು ಶಿವಕುಮಾರ ಮಸ್ಕಿ ನಿರೂಪಿಸಿದರು ರಾಜಶೇಖರ ದೇಸಾಯಿ ಸ್ವಾಗತಿಸಿದರು ಹೆಚ್.ರಾಠೋಡ ವಂದಿಸಿದರು. ಕೊಟ್ರಯ್ಯಸ್ವಾಮಿ ಬಳ್ಳುಂಡಗಿಮಠ, ವಿರೇಶ ನಿಷ್ಠಿ ದೇಶಮುಖ, ಬಲಭೀಮನಾಯಕ ವಕೀಲರು ಇತರರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420