ಬಿಸಿ ಬಿಸಿ ಸುದ್ದಿ

ಶಹಾಬಾದ :ಫೆ. 27ರಂದು ಬಸವಣ್ಣನವರ ಅಶ್ವಾರೂಢ ಮೂರ್ತಿ ಅನವಾರಣ

ಕಲಬುರಗಿ: ಶಹಾಬಾದ ನಗರಸಭೆಯಲ್ಲಿ ಗುರುವಾರ ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಅಧ್ಯಕ್ಷತೆಯಲ್ಲಿ ವಿಶೇಷ ತುರ್ತು ಸಭೆ ನಡೆಯಿತು.

ನಗರಸಭೆಯ ಪೌರಾಯುಕ್ತ ಬಸವರಾಕ ಹೆಬ್ಬಾಳ ಅವರು ಇದೇ ಫೆಬ್ರವರಿ 27 ರಂದು ಸಮಾನತೆಯ ಹರಿಕಾರ ವಿಶ್ವಗುರು ಬಸವಣ್ಣನವರ ಅಶ್ವಾರೂಢ ಮೂರ್ತಿ ಅನವಾರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸರ್ವ ಸದಸ್ಯರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕೆಂದು ಕೋರಿದರು.ಅದಕ್ಕೆ ನಗರಸಭೆಯ ಸದಸ್ಯ ನಾಗರಾಜ ಕರಣಿಕ್ ಮಾತನಾಡಿ, ಇಷ್ಟೊಂದು ತರಾತುರಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದರೇ ಹೇಗೆ? ಕೇವಲ ನಾಲ್ಕು ದಿನಗಳು ಉಳಿದಿವೆ.ಆದ್ದರಿಂದ ಮಾರ್ಚನಲ್ಲಿ ಕಾರ್ಯಕ್ರಮವನ್ನು ಮಾಡಿದರೆ ಚೆನ್ನಾಗಿರುತ್ತದೆ..ಅಲ್ಲದೇ ಶಿಷ್ಟಾಚಾರದ ಪಾಲನೆಯ ಜತೆಗೆ ಈ ಭಾಗದ ನೇತಾರ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವುದು ನಮ್ಮೆಲ್ಲರಿಗೆ ಹೆಮ್ಮೆಯ ವಿಷಯ.ಆದ್ದರಿಂದ ಅವರನ್ನು ಆಹ್ವಾನ ನೀಡಬೇಕು. ಹಾಗಾಗಿ ಕಾರ್ಯಕ್ರಮವನ್ನು ಮಾರ್ಚನಲ್ಲಿ ಆಯೋಜಿಸಿ ಎಂದರು.

ಈಗಾಗಲೇ ಕಾರ್ಯಕ್ರಮವನ್ನು ಫೆಬ್ರವರಿ 27ರಂದು ಆಯೋಜಿಸಲು ನಿರ್ಧರಿಸಲಾಗಿದೆ. ಈಗಾಗಲೇ ಬಹಳಷ್ಟು ತಡವಾಗಿದೆ ಎಂದರು.ಅದಕ್ಕೆ ಸಭೆಯಲ್ಲಿದ್ದ ಸದಸ್ಯರು ಫೆಬ್ರವರಿ 27ರಂದು ಶಿಷ್ಟಾಚಾರದ ಮೂಲಕ ಯಾವುದೇ ತೊಂದರೆಯಾಗದಂತೆ ಆಚರಿಸಲು ಒಪ್ಪಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ನಗರಸಭೆಯ ಉಪಾಧ್ಯಕ್ಷೆ ಸಲೀಮಾಬೇಗಂ, ಎಇಇ ಶರಣು ಪೂಜಾರಿ ಸೇರಿದಂತೆ ನಗರಸಭೆಯ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು. ಸಾಯಿಬಣ್ಣ ಸುಂಗಲಕರ್ ನಿರೂಪಿಸಿ,ವಂದಿಸಿದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

40 mins ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

46 mins ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

49 mins ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

54 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

56 mins ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

1 hour ago