ಮೈಸೂರು; ಜಿಲ್ಲಾ ಸಾಹಿತ್ಯ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಪವನ್ ಸಿದ್ದರಾಮರವರನ್ನು, ಜಿಲ್ಲಾ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್’ರವರು ನೇಮಕಾತಿ ಮಾಡಿ ಆದೇಶ ಪತ್ರ ನೀಡಿದರು.
ಮೈಸೂರು ವಿ.ವಿ ಕುಲಸಚಿವ ವಿ.ಆರ್.ಶೈಲಜ, ವಿಶ್ರಾಂತ ಕುಲಪತಿಗಳು ಹಾಗೂ ಅಧ್ಯಕ್ಷರು, ಕನ್ನಡ ಲೇಖಕಿಯರ ಟ್ರಸ್ಟ್(ರಿ)ಡಾ.ಪದ್ಮಾಶೇಖರ್, ಕ.ರಾ.ಪ.ಸ.ಸಂ. ಅಧ್ಯಕ್ಷ ಲಲಿತಾ ಜಿ.ಟಿ.ದೇವೇಗೌಡ, ಕರ್ನಾಟಕ ಲೇಖಕಿಯರ ಸಂಘ ಅಧ್ಯಕ್ಷ ಡಾ.ಹೆಚ್.ಎಲ್.ಪುಷ್ಪಾ, ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ.ಸಿ.ಜಿ.ಉಷಾದೇವಿ, ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಜಿಲ್ಲಾಧ್ಯಕ್ಷ ಎಂ.ಚಂದ್ರಶೇಖರ್, ಡಿ.ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ ರಾಜ್ಯಾಧ್ಯಕ್ಷ ಜಾಕೀರ್ ಹುಸೇನ್ ಸೇರಿದಂತೆ ಹಲವರು ಇದ್ದರು.