ದಾಂಡೇಲಿ: ಜಗತ್ತಿನಲ್ಲಿಯೇ ನಮ್ಮ ಭಾರತದ ಜಿಡಿಪಿ ದಾಖಲೆಯೇ ಸೃಷ್ಠಿಸಿದ್ದೇವೆ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹೇಳುತ್ತವೆ. ಅಲ್ಲದೆ ಈ ಹೇಳಿಕೆಯನ್ನು ಪತ್ರಿಕೆಗಳಲ್ಲಿ ಯಾವುದೇ ವಿಮರ್ಶೆ ಇಲ್ಲದೆ ಪ್ರಕಟಿಸಿ ನಿಜವೆಂದು ಜನರನ್ನು ನಂಬಿಸುವ ಕೆಲಸ ಮಾಡುತ್ತಿವೆ. ಇಷ್ಟು ಅಭಿವೃದ್ಧಿ ಯ ವೇಗ ನಿಂವಾಗಿ ಇದಿಯಾ ಪ್ರಸ್ನಿಸಬೇಕಿದೆ. ನಿಜವಾಗಿ ನಮ್ಮ ದೇಶದ ಜಿಡಿಪಿ ಪ್ರಮಾಣ ಬೆಳೆದಿದೆ ಅನ್ನೋದು ನಿಜವಾಗಿದ್ರೆ ಯಾಕೆ ನಮ್ಮ ಯುವಜನ ಉದ್ಯೋಗ ಸೃಷ್ಠಿ ಮಾಡೋಕೆ ಆಗುತ್ತಿಲ್ಲಾ, ಯಾಕೆ ಹಸಿವಿನಿಂದ ಮಕ್ಕಳು ಸಾಯುತ್ತಿದ್ದಾರೆ, ಯಾಕೆ ಎಲ್ಲರಿಗೂ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿಲ್ಲ ಎಂದು ಪ್ರಶ್ನಿಸಬೇಕು ಎಂದು ಪ್ರೊ. ರಾಜೇಂದ್ರ ಚೆನ್ನಿ ಅವರು ಹೇಳಿದರು.
ಶನಿವಾರದಂದು ದಾಂಡೇಲಿ ಪಟ್ಟಣದ ಹಾರ್ನ್ ಬಿಲ್ ಭವನದಲ್ಲಿ ನಡೆದ ಡಿ ವೈ ಎಫ್ ಐ ನ ರಾಜ್ಯಮಟ್ಟದ ಎರಡು ದಿನಗಳ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭೂಮಿ ಮೇಲೆ ಹುಟ್ಟಿ ಬದುಕಿ ಬಾಳಬೇಕಿದ್ದ ಮಾನವರನ್ನು ಅಸಮಾನತೆಯಿಂದಾಗಿ ಕೊಲೆ ಮಾಡಲಾಗುತ್ತಿದೆ. ಸ್ವಾತಂತ್ರ ನಂತರದಿಂದ ಇಲ್ಲಿವರೆಗೆ ಆಳಿದ ಸರ್ಕಾರಗಳು ಬಂಡವಾಳಿಗರ ಬಂಟರಾಗಿ ಕೆಲಸ ಮಾಡುತ್ತೇವೆ. ದೇಶದ ಸಂಪತ್ತು ಕೆಲವೇ ಕೆಲವು ವ್ಯಕ್ತಿಗಳ ಕೈಯಲ್ಲಿ ಶೇಖರಣೆಯಾಗುತ್ತಿದೆ. ಇದರ ಪರಿಣಾಮ ನಮ್ಮ ದೇಶದ ಜನರು ಹಸಿವು ಬಡತನ ನಿರುದ್ಯೋಗ, ರೋಗರುಜಿನಗಳಿಂದ ಸಾಯುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿ ಪಾಳ್ಯ ಮಾತನಾಡಿ, ಆಳುವ ಸರ್ಕಾರಗಳು ಯುವಜನತೆಯನ್ನು ಇಂದು ಜಾತಿ, ಧರ್ಮ, ಭಾಷೆ, ಪ್ರಾಂತ್ಯ ಗಳಂತಹ ಭಾವನಾತ್ಮಕ ವಿಚಾರಗಳ ಮೇಲೆ ಹೊಡೆದಾಟಕ್ಕೆ ಇಳಿಸಿ ನಿಜವಾದ ಬದುಕಿನ ಪ್ರಶ್ನೆಗಳನ್ನು ಮರೆಮಾಚುತ್ತಿವೆ ಎಂದು ಸರ್ಕಾಗಳ ಧೋರಣೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಡಿವೈಎಸ್ಐ ರಾಜ್ಯ ಕಾರ್ಯದರ್ಶಿ, ಬಸವರಾಜ್ ಪೂಜಾರ್ ಅವರು ಪ್ರಸ್ತಾವಿಕ ವಾಗಿ ಮಾತನಾಡಿದರು. ಗಣೇಶ್ ರಾಥೋಡ್ ನಿರೂಪಿಸಿದರು, ಜಿಲ್ಲಾಧ್ಯಕ್ಷ ಡಿ. ಸ್ಯಾಮ್ ಸನ್, ಇಮ್ರಾನ್ ಖಾನ್, ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರು ಹಾಗೂ ಸಿಐಟಿಯು ಮುಖಂಡ ಸಲಿಂ ಸಯ್ಯದ್, ಡಬ್ಲ್ಯೂಸಿಪಿಎಂ ನ ಉಪಾಧ್ಯಕ್ಷ ಜಗದೀಶ್ ನಾಯ್ಕ, ಡಿವೈಎಫ್ ಐ ರಾಜ್ಯ ಮುಖಂಡರು ಅಶಾ ಬೋಳಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಶಹಾಪುರ: ಮಹಾತ್ಮ ಗಾಂಧೀಜಿಯವರಿಗೆ ಈ ದೇಶದ ಮಕ್ಕಳಿಗೆ ಹಾಗೂ ಪುರಾತನ ಭಾರತೀಯ ರಾಜ್ಯ ಮತ್ತು ಸತ್ಯವಂತ ನಾಯಕರು ಆಗಿದ್ದ ಸತ್ಯ…
ಕಲಬುರಗಿ: ಶರಣರ ಅನುಬಾವಗಳಿಂದ ಹೊರ ಹೊಮ್ಮಿರುವ ವಚನಗಳು ಮಾನವೀಯ ಮೌಲ್ಯ ಹೆಚ್ಚಳಕ್ಕೆ ಪೂರಕವಾಗಿವೆ ಎಂದು ನಿವೃತ್ತ ಪ್ರಾಚಾರ್ಯರಾದ ಪ್ರೊ. ನಿಂಗಮ್ಮ…
ಕಲಬುರಗಿ: ಕರ್ನಾಟಕ ರಾಜ್ಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಕಾರ್ಯಾಧ್ಯಕ್ಷರಾದ ಯಲಗೊಂಡ ಅವರ ಅಧ್ಯಕ್ಷತೆಯಲ್ಲಿ ಕಲಬುರಗಿ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ನಗರದ ಸಾವಿರಾರು ವರ್ಷ ಇತಿಹಾಸ ಹೊಂದಿರುವ ಪುರಾತನ ಪುಣ್ಯ ಕ್ಷೇತ್ರ ದೇವಸ್ಥಾನವಾದ ಆರಾಧ್ಯದೈವ…
ಕಲಬುರಗಿ: ನಗರದ ಪ್ರಧಾನ ವ್ಯವಸ್ಥಾಪಕರ ಕಚೇರಿಯಲ್ಲಿ ಬಿಎಸ್ಎನ್ಎಲ್ 25 ನೇ ಸಂಸ್ಥಾಪನಾ ದಿನಾಚರಣೆಯನ್ನು ಮಕ್ಕಳೊಂದಿಗೆ ಕೆಕ್ ತಿನಿಸುವ ಮೂಲಕ ಸಂಭ್ರಮದಿಂದ…
ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಗುರುವಾರ ನಡೆದ 14 ಮತ್ತು 17 ವರ್ಷದೊಳಗಿನವರ ಬಾಲಕ ಹಾಗೂ ಬಾಲಕಿಯರ ವಿಭಾಗ…