ಹೋರಾಟಗಾರ ಸಿರಗಾಪೂರಗೆ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸನ್ಮಾನ

0
23

ಕಲಬುರಗಿ: ಕಲಬುರಗಿಯಲ್ಲಿ ನಡೆಯುತ್ತಿರುವ ಕಲ್ಯಾಣ ಕರ್ನಾಟಕ ಉತ್ಸವದ ಮುಖ್ಯ ವೇದಿಕೆಯಲ್ಲಿ ಶುಕ್ರವಾರ ಈ ಭಾಗದ ಅಭಿವೃದ್ಧಿಗೆ ಹೋರಾಡಿದ ಹೋರಾಟಗಾರ ಲಿಂಗರಾಜ ಸಿರಗಾಪೂರ ಸೇರಿದಂತೆ ಕನ್ನಡ ಪರ ಸಂಘಟನೆಗಳ ಮುಖಂಡರಿಗೆ ಸನ್ಮಾನಿಸಲಾಯಿತು.

ಉತ್ಸವದ ಮೊದಲನೆ ದಿನ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಹಾಗೂ ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಹಾಗೂ ಸುಮಾರು 34 ಕನ್ನಡ ಪರ ಸಂಘಟನೆಗಳ ಮುಖಂಡರುಗಳನ್ನು ಗೌರವದೊಂದಿಗೆ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಕೆ.ಕೆ.ಆರ್.ಡಿ.ಬಿ ಕಾರ್ಯದರ್ಶಿ ಹಾಗೂ ಅನೇಕ ಅಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here