ಕಲ್ಯಾಣ ಕರ್ನಾಟಕ ಉತ್ಸವ; ರಂಗಭೂಮಿಯ ಹೊಸ ಸಾಧ್ಯತೆಗಳ ಬಗ್ಗೆ ಅಧ್ಯಯನ ಅಗತ್ಯ

ಕಲಬುರಗಿ; ರಂಗಭೂಮಿ ಕುರಿತಾದ ಸ್ಥಾಪಿತ ವಿಚಾರಗಳ ಹೊರತಾಗಿ ರಂಗಭೂಮಿಯ ಹಲವು ಸಾಧ್ಯತೆಗಳಿದ್ದು, ಆ ಹಿನ್ನೆಲೆಯಲ್ಲಿ ಜಾನಪದ ರಂಗಭೂಮಿಯ ಅಧ್ಯಯನ ಮಾಡುವ ಮತ್ತು ಮುರಿದು ಕಟ್ಟುವ ಕೆಲಸ ಆಗಬೇಕಿದೆ ಎಂದು ಡಾ. ಅರುಣ ಜೋಳದ ಕೂಡ್ಲಗಿ ತಿಳಿಸಿದರು.

ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಶನಿವಾರ ಗುಲಬರ್ಗಾ ವಿ.ವಿ.ಯ ಕಾರ್ಯಸೌಧದಲ್ಲಿ ನಡೆದ ರಂಗಭೂಮಿ ದರ್ಶನ ಗೋಷ್ಠಿಯಲ್ಲಿ ಜನಪದ ರಂಗಭೂಮಿ ವಿಷಯ ಕುರಿತು ತಮ್ಮ ಪ್ರಬಂಧ ಮಂಡಿಸಿದ ಅವರು, ಜಾನಪದ ಅನ್ನುವುದು ಒಂದು ಮಾಧ್ಯಮ. ಜನರು ತಮ್ಮ ತಿಳಿವಳಿಕೆಯನ್ನು ಅಭಿವ್ಯಕ್ತಿಗೊಳಿಸುತ್ತ ಬಂದಿದ್ದಾರೆ ಎಂದು ಹೇಳಿದರು.

ಪುರಾಣದ ಎಳೆಗಳು ಜನಪದದಲ್ಲಿ ಸೇರಿಕೊಂಡಿವೆ.‌ ಜನಪದ ಸೃಜನಶೀಲತೆಯನ್ನು ಅಮೂರ್ತಗೊಳಿಸಿ ಸಾಮೂಹಿಕ ರಚನೆ ಎಂದು ನಂಬಿಸಿ ಅವರ ಹೆಸರು ಹೇಳದೆ ವ್ಯವಸ್ಥಿತವಾಗಿ ಮೋಸಗೊಳಿಸಲಾಗಿದೆ. 17ನೇ ಶತಮಾನದ ನಂತರ ಜನಪದ ಪರಂಪರೆಯಲ್ಲಿ ಬಂಡಾಯ ಹುಟ್ಟಿಕೊಂಡು ಈ ಲಾವಣಿ, ಈ ಹಾಡು ನನ್ನ ರಚನೆ ಎಂದು ಹೇಳಲು ಆರಂಭಿಸಿದರು. ಹಗಲು ವೇಷಗಾರರು, ಬೀದಿ ರಂಗಭೂಮಿ ಕುರಿತು ಈವರೆಗೆ ಹೆಚ್ಚು ಚರ್ಚೆ ನಡೆದಿಲ್ಲ. ಈ ಬಗ್ಗೆ ಗಂಭೀರವಾಗಿ ಆಲೋಚಿಸಬೇಕು ಎಂದು ವಿವರಿಸಿದರು.

ವೃತ್ತಿ ರಂಗಭೂಮಿ ಕುರಿತು ಮಲ್ಲಿಕಾರ್ಜುನ ಕಡಕೋಳ ಮಾತನಾಡಿ, 12ನೇ ಶತಮಾನದ ಬಹುರೂಪಿ ಚೌಡಯ್ಯ ವೃತ್ತಿ ರಂಗಭೂಮಿಯ ಮೊದಲ ಕಲಾವಿದ. ರಂಗಭೂಮಿ ಭಾರತದ ಸ್ವಾತಂತ್ರ್ಯಕ್ಕೆ ಬಹು ಮಹತ್ವದ ಕೊಡುಗೆ ನೀಡಿದೆ ಎಂದು ಹೇಳಿದರು.

ವೃತ್ತಿ ರಂಗಭೂಮಿಯು ಸ್ವಾತಂತ್ರ್ಯ ನಂತರವೂ ತನ್ನ ಸಾಂಸ್ಥಿಕತೆ ಮತ್ತು ಸಾಂಸ್ಕೃತಿಕ ಬದ್ಧತೆಯನ್ನು ಉಳಿಸಿಕೊಂಡಿತ್ತು. ಆದರೆ ಆನಂತರ ಸ್ಥಿತ್ಯಂತರ ಗತಿ ತಲುಪಿತು ಎಂದರು. ರಂಗಭೂಮಿಯ ನಟ-ನಟಿ, ಸಂಗೀತ ಹಾಗೂ ರಂಗ ಸಜ್ಜಿಕೆ ಈ ಮೂರು ಪರಂಪರೆಗಳಿಗೆ ಧಕ್ಕೆ ಬಂದಿತು ಎಂದು ವಿಷಾದ ವ್ಯಕ್ತಪಡಿಸಿದರು.

ಹವ್ಯಾಸಿ ರಂಗಭೂಮಿ ಕುರಿತು ಮಾತನಾಡಿದ ಡಾ. ಅಮೃತಾ ಕಟಕೆ, ಜನಪದ ರಂಗಭೂಮಿಯಲ್ಲೇ ಹವ್ಯಾಸಿ ರಂಗ ಭೂಮಿಯ ಲಕ್ಷಣ ಕಾಣಬಹುದು ಎಂದು ತಿಳಿಸಿದರು.

ಕಲಬುರಗಿ ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಎಚ್.ಟಿ. ಪೋತೆ ಇದ್ದರು. ಅವಿನಾಶ ಬೋರಂಚಿ, ಡಾ. ಚಿದಾನಂದ ಚಿಕ್ಕಮಠ ನಿರೂಪಿಸಿದರು. ಡಾ. ಕಪಿಲ್ ಚಕ್ರವರ್ತಿ ವಂದಿಸಿದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

3 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

3 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

3 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

3 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

3 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420