ಶಹಾಬಾದ: ಕಾಯಕವೇ ಕೈಲಾಸ” ವೆಂದು ಸಾರುತ್ತಾ, ಜನರನ್ನು ದುಡಿದು ಬದುಕುವ ಪಥದಲ್ಲಿ ಮುನ್ನಡೆಸಿದವರು ಬಸವಣ್ಣನವರು. ಜಾತಿ, ಲಿಂಗ, ಭಾಷೆ ಭೇದಗಳ ತೊರೆದು ಸರ್ವರನ್ನೂ ಸಮನಾಗಿ ಕಂಡ ಮಾನವತಾವಾದಿ. ಹನ್ನರೆಡನೆಯ ಶತಮಾನದಲ್ಲಿ ರಾಜ ಬಿಜ್ಜಳನ ಪ್ರಧಾನಿಯಾಗಿದ್ದ ಬಸವಣ್ಣನವರು ಅನುಭಾವಿ, ಭಕ್ತಿ ಭಂಡಾರಿ, ಸಮಾಜ ಸುಧಾರಕ, ವಿಚಾರವಾದಿ, ಸಮಾಜವಾದಿ, ಅಹಿಂಸಾವಾದಿ, ದಲಿತೋದ್ಧಾರಕ ಮತ್ತು ಸ್ತ್ರೀ ಕುಲೋದ್ಧಾರಕರಾಗಿದ್ದಾರೆ ಎಂದರು.
ಬಸವಣ್ಣನವರು ಶ್ರಮ ಜೀವನದ ಘನತೆಯನ್ನು ಎತ್ತಿ ಹಿಡಿದು “ಕಾಯಕವೇ ಕೈಲಾಸ” ವೆಂದು ಸಾರಿದ ಮಹಾಚೇತನ. ಕನ್ನಡ ಸಾಹಿತ್ಯದಲ್ಲಿ ನೂತನ ಮಾರ್ಗವನ್ನು ನಿರ್ಮಿಸಿದವರು.
ಅಸ್ಪೃಶ್ಯತೆ, ಮೂಢನಂಬಿಕೆಗಳನ್ನು ನಿರ್ಮೂಲನೆ ಮಾಡಲು ತಮ್ಮ ಆಧ್ಯಾತ್ಮಿಕ ಮತ್ತು ನೈತಿಕ ಮೌಲ್ಯಗಳ ಮೇಲೆ ವರ್ಣ-ವರ್ಗರಹಿತ ಸಮಾಜವನ್ನು ರೂಪಿಸಲು ಮತ್ತು ಧರ್ಮ ಹಾಗೂ ಸಮಾಜದಲ್ಲಿ ಪ್ರಜಾಪ್ರಭುತ್ವವನ್ನು ನೆಲೆಗೊಳಿಸಲು ಪ್ರಯತ್ನಿಸಿದವರು ಎಂದು ಸ್ಮರಿಸಿದರು.
ಅಂತಹ ಮಹಾನಚೇತನ ವಿಶ್ವಗುರು ಬಸವಣ್ಣವರ ಅಶ್ವಾರೂಢ ಪ್ರತಿಮೆಯ ಅನಾವರಣ ಶಹಾಬಾದ ನಗರದಲ್ಲಿ ಫೆ.೨೭ರಂದು ನಡೆಯುತ್ತಿರುವುದು ಎಲ್ಲಿಲ್ಲದ ಸಂತೋಷ ಉಂಟು ಮಾಡಿದೆ. ಇಲ್ಲಿನ ವೀರಶೈವ ಸಮಾಜದ ಬಹುದಿನಗಳ ಕನಸು ನನಸಾಗಿದೆ.ಈ ಪ್ರತಿಮೆ ಅವರ ತತ್ವಗಳನ್ನು ಎಲ್ಲಾ ಮನಸ್ಸುಗಳಿಗೆ ಮುಟ್ಟಲಿ.ಸಮಾನತೆಯ ಸಮಾಜ ಕನಸು ನನಸಾಗಲಿ ಎಂದು ಹಾರೈಸುತ್ತೆವೆ. – ಮೃತ್ಯುಂಜಯ್ ಹಿರೇಮಠ, ವಿಶ್ವರಾಧ್ಯ ಬೀರಾಳ, ಸಾಹೇಬಗೌಡ ಬೋಗುಂಡಿ ಮುಖಂಡರು ವೀರಶೈವ ಸಮಾಜ ಶಹಾಬಾದ.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…