ಸುರಪುರ: ಆಮ್ ಆದ್ಮಿ ಪಕ್ಷದ ಮುಖಂಡರು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು,ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿಯೂ ಆಮ್ ಆದ್ಮಿ ಪಕ್ಷದ ಅಭ್ಯಾರ್ಥಿಗಳನ್ನು ಕಣಕ್ಕಿಳಿಸುವುದಾಗಿ ತಿಳಿಸಿದರು.ಅಲ್ಲದೆ ಸುರಪುರ ಮತಕ್ಷೇತ್ರದಲ್ಲಿಯೂ ಉತ್ತಮ ಅಭ್ಯಾರ್ಥಿಯನ್ನು ಕಣಕ್ಕಿಳಿಸಲಾಗುತ್ತಿದೆ ಎಂದು ತಿಳಿಸಿದರು.
ಅಲ್ಲದೆ ಇಡೀ ದೇಶದ ಅಭಿವೃಧ್ಧಿ ಎನ್ನುವುದು ಆಮ್ ಆದ್ಮಿ ಪಕ್ಷದಿಂದ ಸಾಧ್ಯವಿದೆ,ಇದನ್ನು ಈಗಾಗಲೇ ದೆಹಲಿಯಲ್ಲಿ ಸಾಬೀತು ಮಾಡಲಾಗಿದೆ,ಅಲ್ಲದೆ ಪಂಜಾಬ್ನಲ್ಲಿಯೂ ಅದನ್ನು ಕಾಣಬಹುದಾಗಿದೆ ಎಂದರು.ಮುಂಬರುವ ಚುನಾವಣೆಗಾಗಿ ಈಗಾಗಲೇ ರಾಜ್ಯಾದ್ಯಂತ ತಯಾರಿಯನ್ನು ಆರಂಭಿಸಲಾಗಿದೆ.ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ನಮ್ಮ ಅಭ್ಯಾರ್ಥಿಗಳನ್ನು ಗೆಲ್ಲಿಸುವ ಭರವಸೆ ಇದೆ ಎಂದರು.
ಆಮ್ ಆದ್ಮಿ ಪಕ್ಷದ ಅಭಿವೃಧ್ಧಿಯನ್ನು ಬಿಜೆಪಿಗೆ ಸಹಿಸಲು ಆಗುತ್ತಿಲ್ಲ,ಆದ್ದರಿಂದ ಈಗ ದೆಹಲಿಯಲ್ಲಿ ನಮ್ಮ ಪಕ್ಷದ ಸಚಿವರಾಗಿದ್ದ ಸಿಸೋಡಿಯ ಅವರ ಮೇಲೆ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದರು.
ಅಲ್ಲದೆ ಮುಂಬರುವ ದಿನಗಳಲ್ಲಿ ರಾಜ್ಯದ ಚುನಾವಣೆಯ ಕುರಿತು ನಮ್ಮ ಪಕ್ಷದ ಯೋಜನೆಗಳನ್ನು ಜನರ ಮುಂದಿಟ್ಟು ಮತಯಾಚನೆ ಮಾಡಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ ಭಕ್ರಿ,ಮುಖಂಡರಾದ ರಾಜಾ ಪಿಡ್ಡನಾಯಕ,ಸುಭಾಸ ತೇಲ್ಕರ್,ಮಹಿಬೂಬ ಖಾನ್ ಸೇರಿದಂತೆ ಇತರರಿದ್ದರು.