ಬಿಸಿ ಬಿಸಿ ಸುದ್ದಿ

ಉತ್ತಮ ಸಮಾಜಕ್ಕೆ ಸಾಹಿತ್ಯ ಅವಶ್ಯ

ಕಲಬುರಗಿ : ಉತ್ತಮ ಸಮಾಜ ತಿದ್ದಿತಿಡಿ ಹೊಸ ಬದುಕನ್ನು ಕಟ್ಟಿ ಕೊಡುವಲ್ಲಿ ಸಾಹಿತ್ಯ ಪ್ರಮುಖ ಪಾತ್ರ ವಹಿಸುತ್ತದೆ. ಜೀವ ಕೊನೆಯಾದರೂ ಕವಿಯ ಕೃತಿಗಳು ಉಳಿಯುತ್ತವೆ ಎಂದು ಸಾಹಿತಿ ಸಿದ್ದರಾಮ ರಾಜಮಾನೆ ಅಭಿಪ್ರಾಯ ಪಟ್ಟರು.

ನಗರದಲ್ಲಿ ಇತ್ತೀಚೆಗೆ ಇಬ್ಬನಿ ಎಂಬ ಹನಿಗವನಗಳ ಕೃತಿ ಜನಾರ್ಪಣೆಯಾದ ಪ್ರಯುಕ್ತ ಇಂದು ಗೆಳೆಯರ ಬಳಗ ಆಯೋಜಿಸಿದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

80 ದಶಕದ;ಲ್ಲಿ ಸಾಹಿತ್ಯ ಮತ್ತು ಸಾಂಸ್ಕøತಿಕ ಬದುಕಿನಲ್ಲಿ ಬೆಳೆದು ನಾಡಿಗೆ ಹೊಸ ಹೊಸ ಕೃತಿಗಳನ್ನು ಇನ್ನಷ್ಟು ಕೊಡಬೇಕಾಗಿದೆ. ಕೃತಿಗಳು ಓದುವ ಮೂಲಕ ಸಾಹಿತ್ಯದ ಒಳನೋಟ ಅರ್ಥೈಯಿಸಿ ಕೊಳ್ಳಬೇಕು. ಆಗ ಒಬ್ಬ ಬರಹಗಾರರನಿಗೆ ಗೌರವ ಸಲ್ಲುತ್ತದೆ ಎಂದರು.
ಸಾಹಿತಿ ಧರ್ಮಣ್ಣ ಧನ್ನಿ ಅಧ್ಯಕ್ಷತೆ ವಹಿಸಿ, ಸಮಾಜಿಕ ಜೀವನದಲ್ಲಿ ಸಾಹಿತಿಗಳಾದವರು ತಮ್ಮದೇ ಮೌಲಿಕ ಕೃತಿಗಳು ಕೊಡಬೇಕು. ಸಿದ್ದರಾಮ ರಾಜಮಾನೆ ಅವರು ನಾಡಿನ ಕಥೆಗಾರರು, ಕವಿಗಳಾಗಿ ವೃತ್ತಿ ಜೀವನ ನಡೆಸುತ್ತಿದ್ದಾರೆ. ಅವರ ಸಾಹಿತ್ಯ ಕೃತಿಗಳು ಅಧ್ಯಯನಕ್ಕೊಳಗಾಗಿವೆ ಎಂದು ನುಡಿದರು.

ನ್ಯಾಯವಾದಿ ವೀರಣ್ಣ ಬೆಣ್ಣೆಶಿರೂರ, ಸಮಾಜಸೇವಕ ಶರಣಗೌಡ ಪಾಟೀಲ ಪಾಳಾ, ನಾಗರಾಜ ಬಿರಾದಾರ, ಶಿವಯೋಗಿ ಭಜಂತ್ರಿ ಸೇರಿ ಇನ್ನಿತರ ಗೆಳೆಯರು ಪಾಲ್ಗೊಂಡಿದರು. ನಂತರ ಇಬ್ಬನಿ ಕೃತಿಯ ಕೆಲ ಹನಿಗವನಗಳನ್ನು ವಾಚಿಸಲಾಯಿತು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

5 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

5 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

5 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

5 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

6 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

7 hours ago